Homeಮುಖಪುಟನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ.

- Advertisement -
- Advertisement -

ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರೂರವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಹಿರಿಯ ಸಚಿವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೇರಿ ಪ್ರಮುಖರು ಗೈರುಹಾಜರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನ ಹೊರಹಾಕಿದೆ.

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಂದಿನ ಭಾರತದ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ 5 ಮೇ 1966 ರಂದು ಅನಾವರಣಗೊಳಿಸಿದರು.

ಕೇಂದ್ರ ಪ್ರಮುಖರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೆಹೂರುರವರ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವದ ಸಾಂಪ್ರದಾಯಿಕ ಸಮಾರಂಭದಲ್ಲಿನ ಅಸಾಧಾರಣ ದೃಶ್ಯವಿದು. ಲೋಕಸಭೆ ಸ್ಪೀಕರ್ ಗೈರು, ರಾಜ್ಯಸಭೆಯ ಸಭಾಪತಿ ಗೈರು, ಒಬ್ಬ ಸಚಿವರೂ ಹಾಜರಾಗಿಲ್ಲ. ಇದಕ್ಕಿಂತ ಕ್ರೂರವಾಗಬಹುದೇ?!” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಉಪಸ್ಥಿತರಿದ್ದರು. ಅವರನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಪ್ರಮುಖರ್ಯಾರು ಭಾಗವಹಿಸಿಲ್ಲ. ಕಾಂಗ್ರೆಸ್ ವತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಇತರ ಸಂಸದರು ಉಪಸ್ಥಿತರಿದ್ದರು.

ಕೆಲ ವರ್ಷಗಳ ಹಿಂದಷ್ಟೇ ನೆಹರೂರವರ ಜನ್ಮದಿನ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು, ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗಳು ಭಾಗವಹಿಸುತ್ತಿದ್ದರು. ಆದರೆ ಇಂದು ಅವರೆಲ್ಲ ಗೈರು ಹಾಜರಾಗಿದ್ದಾರೆ.

2016ರಲ್ಲಿ ನೆಹರು ಜನ್ಮದಿನದ ಸಂದರ್ಭದಲ್ಲಿ ಭಾಗವಹಿಸಿದ್ದ ಪ್ರಮುಖರು

ಕಳೆದೊಂದು ದಶಕದಿಂದ ನೆಹರೂರವರ ಕುರಿತು ಬಿಜೆಪಿ ಪಕ್ಷವು ನಕರಾತ್ಮಕ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಅವರ ಸಾಧನೆಗಳನ್ನು ಅಲ್ಲಗೆಳೆಯುತ್ತಿದೆ. ಪ್ರಮುಖವಾಗಿ ಬಿಜೆಪಿ ಐಟಿ ಸೆಲ್‌ಗಳು ನೆಹರೂರವರ ಕುರಿತು ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂಬ ದಟ್ಟ ಆರೋಪಗಳು ಕೇಳಿಬಂದಿವೆ. ಈ ಕುರಿತು ನೂರಾರು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಲಾಗಿದೆ. ಈ ಅಭಿಯಾನದ ಭಾಗವಾಗಿಯೇ ನೆಹರೂರವರ ಜನ್ಮದಿನದ ಕಾರ್ಯಕ್ರಮಕ್ಕೆ ಕೇಂದ್ರದ ಪ್ರಮುಖರು ಭಾಗವಹಿಸಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...