Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...