Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...