Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...