Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....