Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...