HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...