HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...