HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...