Homeಮುಖಪುಟಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

- Advertisement -
- Advertisement -

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಹೊಂದಿರುವ ಈ ಸಮಿತಿಯ ಅಧ್ಯಕ್ಷತೆಯನ್ನು ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ವಹಿಸಲಿದ್ದಾರೆ.

ಬಿಜೆಪಿಯಿಂದ ಬ್ರಿಜ್‌ಮೋಹನ್ ಅಗರ್ವಾಲ್, ತ್ರಿವೇಂದ್ರ ಸಿಂಗ್ ರಾವತ್, ಜಗದಾಂಬಿಕಾ ಪಾಲ್, ಜಗದೀಶ್ ಶೆಟ್ಟರ್, ರಾಮ್‌ವೀರ್ ಸಿಂಗ್ ಬಿಧೂರಿ ಮತ್ತು ಸಂಗೀತ ಸಿಂಗ್ ದೇವ್, ಕಾಂಗ್ರೆಸ್‌ನಿಂದ ತಾರಿಕ್ ಅನ್ವರ್, ಮನೀಶ್ ತಿವಾರಿ ಮತ್ತು ಮಾಣಿಕ್ಕಂ ಟ್ಯಾಗೋರ್, ಡಿಎಂಕೆ ಟಿ.ಆರ್. ಬಾಲು, ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಶಿವಸೇನೆಯ ಶ್ರೀರಂಗ್ ಅಪ್ಪ ಚಂದು ಬಾರ್ನೆ, ಶಿವಸೇನೆ-ಯುಬಿಟಿಯ ಅರವಿಂದ್ ಗಣಪತ್ ಸಾವಂತ್ ಮತ್ತು ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರು.

ಸಮಿತಿಯು ಮಂಗಳವಾರದಿಂದ ಜಾರಿಗೆ ಬಂದಿದೆ. ಸಂಸದೀಯ ಹಕ್ಕುಬಾಧ್ಯತೆಗಳ ಮೂಲ ಉದ್ದೇಶವೆಂದರೆ ಸಂಸತ್ತಿನ ಸ್ವಾತಂತ್ರ್ಯ, ಅಧಿಕಾರ ಮತ್ತು ಘನತೆಯನ್ನು ರಕ್ಷಿಸುವುದಾಗಿದೆ.

ಸಂಸತ್ತಿನ ಪ್ರತಿಯೊಬ್ಬ ಸದಸ್ಯರೂ ಯಾವುದೇ ಅಡೆತಡೆಗಳಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಹಕ್ಕುಬಾಧ್ಯತೆಗಳನ್ನು ಹೊಂದಿರುತ್ತಾರೆ. ಈ ಸಮಿತಿಯು ಪ್ರತಿ ಪ್ರಕರಣದ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ, ಅಲ್ಲಿ ಹಕ್ಕುಚ್ಯುತಿಯಾಗಿದೆಯೇ ಎಂಬುದನ್ನು ನಿರ್ಧರಿಸುತ್ತದೆ ಮತ್ತು ತನ್ನ ವರದಿಯಲ್ಲಿ ಸೂಕ್ತ ಶಿಫಾರಸುಗಳನ್ನು ಮಾಡುತ್ತದೆ.

ಹದಿನೆಂಟನೇ ಲೋಕಸಭೆಯು ಇನ್ನೂ ‘ಶಿಸ್ತು ಪಾಲನಾ ಸಮಿತಿ’ಯನ್ನು ಹೊಂದಿಲ್ಲ. ಸಾಮಾನ್ಯವಾಗಿ ಇವೆರಡೂ ಸಮಿತಿಗಳು ಸಂಸದರ ನಡವಳಿಕೆಯನ್ನು ಗಮನಿಸುತ್ತವೆಯಾದರೂ, ಅವುಗಳ ಕಾರ್ಯವ್ಯಾಪ್ತಿ ಭಿನ್ನವಾಗಿರುತ್ತದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಲ್ಲಿಸಿರುವ ಪ್ರಸ್ತಾವನೆಯನ್ನು ಶಿಸ್ತು ಪಾಲನಾ ಸಮಿತಿಯು ಕೈಗೆತ್ತಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರ ‘ಎಲ್ಲಾ ಅಶಿಸ್ತಿನ ನಡವಳಿಕೆಗಳ ಬಗ್ಗೆ ತನಿಖೆ’ ನಡೆಸಿ, ಅವರನ್ನು ಲೋಕಸಭೆಯಿಂದ ತಕ್ಷಣವೇ ಉಚ್ಚಾಟಿಸಬೇಕು ಎಂದು ಕೋರಿ ದುಬೆ ಈ ಪ್ರಸ್ತಾವನೆಯನ್ನು ಮಂಡಿಸಿದ್ದರು.

ಶಾಸಕಾಂಗದ ಪ್ರಕ್ರಿಯೆಯಲ್ಲಿ ‘ಗಂಭೀರ ಸ್ವರೂಪದ ಪ್ರಸ್ತಾವನೆ’ (Substantive Motion) ಎಂಬುವುದು ಒಂದು ಪ್ರಮುಖ ಸಾಧನವಾಗಿದ್ದು, ಇದನ್ನು ಅಂಗೀಕರಿಸಿದರೆ ಆ ವಿಷಯದ ಮೇಲೆ ಕಡ್ಡಾಯವಾಗಿ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲು ಅವಕಾಶವಿರುತ್ತದೆ. ಮಾರ್ಚ್ 9 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಸ್ಪೀಕರ್ ಈ ಪ್ರಸ್ತಾವನೆಯನ್ನು ಕೈಗೆತ್ತಿಕೊಂಡರೆ, ಲೋಕಸಭೆಯು ನೇರವಾಗಿ ನಿಶಿಕಾಂತ್ ದುಬೆ ಅವರ ಪ್ರಸ್ತಾವನೆಯ ಬಗ್ಗೆ ಚರ್ಚೆ ನಡೆಸಲಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...