Homeಕರ್ನಾಟಕನಮ್ಮ ತೆರಿಗೆ ಹಣ ಪೋಲಾಗುತ್ತದೆ ಮತ್ತೆ ಚುನಾವಣೆ ಬೇಡ: ಸ್ಪೀಕರ್ ಗೆ 6 ಸಾರ್ವಜನಿಕ ದೂರುಗಳು

ನಮ್ಮ ತೆರಿಗೆ ಹಣ ಪೋಲಾಗುತ್ತದೆ ಮತ್ತೆ ಚುನಾವಣೆ ಬೇಡ: ಸ್ಪೀಕರ್ ಗೆ 6 ಸಾರ್ವಜನಿಕ ದೂರುಗಳು

- Advertisement -
- Advertisement -

ಇವತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್‍ರವರು ಒಂದು ಫಿರ್ಯಾದನ್ನು ಕೊಟ್ಟು ಹೋಗಿದ್ದಾರೆ. ಕೆಲವರ ಮೇಲೆ ವಿಶೇಷವಾಗಿ ರಮೇಶ್ ಜಾರಕಿಹೊಳಿ ಮೇಲೆ ಕ್ರಮ ಜರುಗಿಸುವಂತೆ ಈಗಾಗಲೇ ಹಳೆಯ ಅರ್ಜಿ ಜೊತೆ ಫಿರ್ಯಾದು ಕೊಟ್ಟಿದ್ದಾರೆ. ನಾನು ಅವರಿಗೆ ಎರಡು ದಿನ ಸಮಯ ಕೊಟ್ಟಿದ್ದೇನೆ. 11ನೇ ತಾರೀಖು ನೀವು ಬಂದು ನಿಮ್ಮ ವಾದ ಏನಿದೆ ಮಂಡಿಸಿ ಎಂದು ಹೇಳಿದ್ದೇನೆ. ನಂತರ ಅನರ್ಹತೆ ವಿಚಾರಕ್ಕೆ ದಿನಾಂಕ ನಿಗಧಿ ಮಾಡಿ ಅವರೆಲ್ಲರಿಗೂ ನೋಟಿಸ್ ಕೊಟ್ಟು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಇನ್ನು ರಾಜೀನಾಮೆ ನೀಡಿರುವ ಶಾಸಕರ ವಿಚಾರಕ್ಕೆ ಬರುವುದಾದರೆ ಕ್ರಮಬದ್ಧವಾಗಿಲ್ಲದ 8 ಜನಕ್ಕೂ ನೋಟಿಸ್ ಕಳಿಸಿದ್ದೇನೆ. ಅವರು ಬೇಕಾದರೆ ಮತ್ತೊಮ್ಮೆ ಬಂದು ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸಬಹುದು. ಇನ್ನು ಕ್ರಮಬದ್ಧವಾಗಿರುವ ಐದು ಜನರಿಗೂ ನೇರವಾಗಿ ಬಂದು ತಮ್ಮ ಅಭಿಪ್ರಾಯ ಸೂಚಿಸುವಂತೆ ಪತ್ರ ಕಳಿಸಿದ್ದೇನೆ. ಅವರಿಗೆ ತಲುಪಿ ಕಮ್ಯುನಿಕೇಶನ್ ನಡೆಸಲು ಎರಡು ದಿನ ಸಮಯ ಬೇಕಿದೆ. ಹಾಗಾಗಿ 12ನೇ ತಾರೀಖು ಮೂರು ಜನ ಬಂದು ನನ್ನನ್ನು ಕಾಣಲು ಹೇಳಿದ್ದೇನೆ. ಇನ್ನು ಇಬ್ಬರು 13 ಮತ್ತು 14ರಂದು ಸಾರ್ವತ್ರಿಕ ರಜಾದಿನಗಳಿರುವುದರಿಂದ 15ರಂದು ನನ್ನನ್ನು ಭೇಟಿಯಾಗಲು ಸೂಚಿಸಿದ್ದೇನೆ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ 15ನೇ ತಾರೀಖಿನವರೆಗೂ ಸರ್ಕಾರಕ್ಕೆ ಅಪಾಯವಿಲ್ಲ ಎಂಬುದು ಸ್ಪಷ್ಟವಾಗಿದೆ.

6 ಸಾರ್ವಜನಿಕ ದೂರುಗಳು ಬಂದಿವೆ. ಅವರನ್ನು ನಾವು ಪರಿಗಣಿಸಬೇಕು

ಕಾರ್ಮಿಕರು, ಬಡವರು, ಬೀದಿ ವ್ಯಾಪಾರಿಗಳು ಮುಂತಾದವರು ನಾವು ದುಡಿದು ಜಿಎಸ್‍ಟಿ ಕಟ್ಟುತ್ತೇವೆ. ಈಗ ಮತ್ತೆ ಚುನಾವಣೆ ನಡೆದರೆ ನಮ್ಮ ಹಣವೇ ನಷ್ಟವಾಗುತ್ತದೆ, ಯಾವ ಪುರುಷಾರ್ಥಕ್ಕೆ ರಾಜೀನಾಮೆ ಕೊಡುತ್ತಿದ್ದಾರೆ? ಇವರು ಖುಷಿ ಬಂದಂಗೆ ರಾಜಿನಾಮೆ ಮತ್ತೆ ರಾಜಿನಾಮೆ ಕೊಟ್ಟರೆ ಎರೆಡೆರಡು ಚುನಾವಣೆ ನಡೆದರೆ ನಮ್ಮ ಹಣವೇ ಖರ್ಚಾಗುವುದು ತಾನೇ? ಇದು ನ್ಯಾಯನಾ? ಕೆಲವರು ಬರಗಾಲವಿದೆ, ರೈತರು ಬೀಕರ ಸ್ಥಿತಿಯಲ್ಲಿದ್ದಾರೆ ಇದರ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ದೂರು ಸಲ್ಲಿಸಿದ್ದಾರೆ. ಇನ್ನು ಕೆಲವರು ಸಂವಿಧಾನದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಹಾಗಾಗಿ ನಾನು ಪಬ್ಲಿಕ್ ಹಿಯರಿಂಗ್ (ಸಾರ್ವಜನಿಕ ವಿಚಾರಣೆ) ಇಟ್ಟುಕೊಳ್ಳುತ್ತೇನೆ, ಅವತ್ತು ದಯಮಾಡಿ ಬಂದು ಪಾಲ್ಗೊಳ್ಳಿ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...