Homeಕರ್ನಾಟಕನಮ್ಮ ತೆರಿಗೆ ಹಣ ಪೋಲಾಗುತ್ತದೆ ಮತ್ತೆ ಚುನಾವಣೆ ಬೇಡ: ಸ್ಪೀಕರ್ ಗೆ 6 ಸಾರ್ವಜನಿಕ ದೂರುಗಳು

ನಮ್ಮ ತೆರಿಗೆ ಹಣ ಪೋಲಾಗುತ್ತದೆ ಮತ್ತೆ ಚುನಾವಣೆ ಬೇಡ: ಸ್ಪೀಕರ್ ಗೆ 6 ಸಾರ್ವಜನಿಕ ದೂರುಗಳು

- Advertisement -
- Advertisement -

ಇವತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್‍ರವರು ಒಂದು ಫಿರ್ಯಾದನ್ನು ಕೊಟ್ಟು ಹೋಗಿದ್ದಾರೆ. ಕೆಲವರ ಮೇಲೆ ವಿಶೇಷವಾಗಿ ರಮೇಶ್ ಜಾರಕಿಹೊಳಿ ಮೇಲೆ ಕ್ರಮ ಜರುಗಿಸುವಂತೆ ಈಗಾಗಲೇ ಹಳೆಯ ಅರ್ಜಿ ಜೊತೆ ಫಿರ್ಯಾದು ಕೊಟ್ಟಿದ್ದಾರೆ. ನಾನು ಅವರಿಗೆ ಎರಡು ದಿನ ಸಮಯ ಕೊಟ್ಟಿದ್ದೇನೆ. 11ನೇ ತಾರೀಖು ನೀವು ಬಂದು ನಿಮ್ಮ ವಾದ ಏನಿದೆ ಮಂಡಿಸಿ ಎಂದು ಹೇಳಿದ್ದೇನೆ. ನಂತರ ಅನರ್ಹತೆ ವಿಚಾರಕ್ಕೆ ದಿನಾಂಕ ನಿಗಧಿ ಮಾಡಿ ಅವರೆಲ್ಲರಿಗೂ ನೋಟಿಸ್ ಕೊಟ್ಟು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಇನ್ನು ರಾಜೀನಾಮೆ ನೀಡಿರುವ ಶಾಸಕರ ವಿಚಾರಕ್ಕೆ ಬರುವುದಾದರೆ ಕ್ರಮಬದ್ಧವಾಗಿಲ್ಲದ 8 ಜನಕ್ಕೂ ನೋಟಿಸ್ ಕಳಿಸಿದ್ದೇನೆ. ಅವರು ಬೇಕಾದರೆ ಮತ್ತೊಮ್ಮೆ ಬಂದು ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸಬಹುದು. ಇನ್ನು ಕ್ರಮಬದ್ಧವಾಗಿರುವ ಐದು ಜನರಿಗೂ ನೇರವಾಗಿ ಬಂದು ತಮ್ಮ ಅಭಿಪ್ರಾಯ ಸೂಚಿಸುವಂತೆ ಪತ್ರ ಕಳಿಸಿದ್ದೇನೆ. ಅವರಿಗೆ ತಲುಪಿ ಕಮ್ಯುನಿಕೇಶನ್ ನಡೆಸಲು ಎರಡು ದಿನ ಸಮಯ ಬೇಕಿದೆ. ಹಾಗಾಗಿ 12ನೇ ತಾರೀಖು ಮೂರು ಜನ ಬಂದು ನನ್ನನ್ನು ಕಾಣಲು ಹೇಳಿದ್ದೇನೆ. ಇನ್ನು ಇಬ್ಬರು 13 ಮತ್ತು 14ರಂದು ಸಾರ್ವತ್ರಿಕ ರಜಾದಿನಗಳಿರುವುದರಿಂದ 15ರಂದು ನನ್ನನ್ನು ಭೇಟಿಯಾಗಲು ಸೂಚಿಸಿದ್ದೇನೆ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ 15ನೇ ತಾರೀಖಿನವರೆಗೂ ಸರ್ಕಾರಕ್ಕೆ ಅಪಾಯವಿಲ್ಲ ಎಂಬುದು ಸ್ಪಷ್ಟವಾಗಿದೆ.

6 ಸಾರ್ವಜನಿಕ ದೂರುಗಳು ಬಂದಿವೆ. ಅವರನ್ನು ನಾವು ಪರಿಗಣಿಸಬೇಕು

ಕಾರ್ಮಿಕರು, ಬಡವರು, ಬೀದಿ ವ್ಯಾಪಾರಿಗಳು ಮುಂತಾದವರು ನಾವು ದುಡಿದು ಜಿಎಸ್‍ಟಿ ಕಟ್ಟುತ್ತೇವೆ. ಈಗ ಮತ್ತೆ ಚುನಾವಣೆ ನಡೆದರೆ ನಮ್ಮ ಹಣವೇ ನಷ್ಟವಾಗುತ್ತದೆ, ಯಾವ ಪುರುಷಾರ್ಥಕ್ಕೆ ರಾಜೀನಾಮೆ ಕೊಡುತ್ತಿದ್ದಾರೆ? ಇವರು ಖುಷಿ ಬಂದಂಗೆ ರಾಜಿನಾಮೆ ಮತ್ತೆ ರಾಜಿನಾಮೆ ಕೊಟ್ಟರೆ ಎರೆಡೆರಡು ಚುನಾವಣೆ ನಡೆದರೆ ನಮ್ಮ ಹಣವೇ ಖರ್ಚಾಗುವುದು ತಾನೇ? ಇದು ನ್ಯಾಯನಾ? ಕೆಲವರು ಬರಗಾಲವಿದೆ, ರೈತರು ಬೀಕರ ಸ್ಥಿತಿಯಲ್ಲಿದ್ದಾರೆ ಇದರ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ದೂರು ಸಲ್ಲಿಸಿದ್ದಾರೆ. ಇನ್ನು ಕೆಲವರು ಸಂವಿಧಾನದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಹಾಗಾಗಿ ನಾನು ಪಬ್ಲಿಕ್ ಹಿಯರಿಂಗ್ (ಸಾರ್ವಜನಿಕ ವಿಚಾರಣೆ) ಇಟ್ಟುಕೊಳ್ಳುತ್ತೇನೆ, ಅವತ್ತು ದಯಮಾಡಿ ಬಂದು ಪಾಲ್ಗೊಳ್ಳಿ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...