Homeಕರ್ನಾಟಕಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

ಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

- Advertisement -
- Advertisement -

ಇಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿ ತಮ್ಮ ನಿಲುವನ್ನು ತಿಳಿಸುವುದಾಗಿ ಹೇಳಿದ್ದ ರಮೇಶ್ ಕುಮಾರ್ ರವರು ಇಂದು ವಿಧಾನ ಸೌಧದ ತಮ್ಮ ಕಚೇರಿಗೆ ಬಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯ ಸರ್ಕಾರ ಸಂಪೂರ್ಣ ಸೇಫ್ ಎಂಬುದು ನಿಚ್ಚಳವಾಗಿದೆ.

ಸಲ್ಲಿಸಿರುವ 13 ರಾಜೀನಾಮೆ ಪತ್ರಗಳಲ್ಲಿ 8 ಕ್ರಮಬದ್ಧವಾಗಿಲ್ಲ, 5 ಮಾತ್ರವೇ ಕ್ರಮಬದ್ಧವಾಗಿವೆ ಎಂದು ಸ್ಪೀಕರ್ ರಮೇಶ್ ಕುಮಾರ್ ರವರು ಸ್ಪಷ್ಟವಾಗಿ ನುಡಿದಿದ್ದಾರೆ. ಇದಕ್ಕೆ ಮುಂಚೆ ಸದರಿ ಶಾಸಕರುಗಳಿಗೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ಹೊರಟಿತ್ತು. ಅದಕ್ಕೆ ಮುಂಬೈನ ಸೋಫಿಟಲ್ ಹೋಟೆಲ್‍ನಿಂದಲೇ ಪ್ರತಿಕ್ರಿಯಿಸಿದ್ದ ಅತೃಪ್ತ ಶಾಸಕರು ಅಗತ್ಯಬಿದ್ದರೆ ನಾಳೆಯೇ ಬೆಂಗಳೂರಿಗೆ ಧಾವಿಸಿ ಮತ್ತೇ ರಾಜೀನಾಮೆ ನೀಡುತ್ತೇವೆಂದು ಗುಡುಗಿದ್ದರು. ಈ ಮಧ್ಯೆ ವಿಧಾನಸೌಧದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಮೇಶ್ ಕುಮಾರ್ ನಾಮಪತ್ರಗಳಲ್ಲಿ 8 ಕ್ರಮಬದ್ದವೇ ಆಗಿಲ್ಲವೆಂದು ಹೇಳುವ ಮುಖಾಂತರ ಎಲ್ಲರನ್ನು ಚಕಿತಗೊಳಿಸಿದ್ದಾರೆ.

5 ಜನರ ರಾಜೀನಾಮೆ ಪತ್ರ ಮಾತ್ರ ಕ್ರಮಬದ್ಧವಾಗಿದ್ದು, ಆ ಐದು ಜನರಿಗೂ ನೋಟಿಸ್ ಕೊಟ್ಟಿದ್ದು ಅವರುಗಳು ಬಂದು ತಮ್ಮ ಅನಿಸಿಕೆಯೆನೆಂದು ಹೇಳಬೇಕೆಂದು ತಿಳಿಸಿದ್ದಾರೆ. ಇದಲ್ಲದೇ ಉಳಿದವರಿಗೆ ಕೂಡ ಸಮಯ ನಿಗಧಿ ಮಾಡಿದ್ದು ನಂತರದಲ್ಲಿ 10 ಮತ್ತು 11 ರಜಾದಿನಗಳಾದ್ದರಿಂದ 12 ತಾರೀಕು ಆನಂದ್ ಸಿಂಗ್ ಮತ್ತು ನಾರಾಯಣಗೌಡರವರಿಗೆ ತಮ್ಮ ಅನಿಸಿಕೆಗಳನ್ನು ಬಂದು ತಿಳಿಸಲು ಹೇಳಿದ್ದಾರೆ. 15ಕ್ಕೆ ರಾಮಲಿಂಗಾರೆಡ್ಡಿಯವರಿಗೆ ವೈಯಕ್ತಿಕ ವಿಚಾರಣೆಗೆ ಕರೆದಿದ್ದೇನೆ ಎಂದಿದ್ದಾರೆ.

ತಮ್ಮ ಕಚೇರಿಯ ನಡಾವಳಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ ರಮೇಶ್ ಕುಮಾರ್ ರವರು ತಾನು 6ನೇ ಆರನೇ ತಾರೀಕು ಮಧ್ಯಾಹ್ನದವರೆಗೂ ಕಛೇರಿಯಲ್ಲಿಯೇ ಇದ್ದೆ. ಅಲ್ಲಿಯವರೆಗೂ ಯಾರು ನನ್ನನ್ನು ಸಂಪರ್ಕಿಸಿಲ್ಲ ಮಾತ್ರವಲ್ಲ, ಸಮಯವನ್ನೂ ಸಹ ಕೇಳಿರಲಿಲ್ಲ. ನಾನು ವ್ಯಕ್ತಿಗತ ಕೆಲಸಗಳ ಕಾರಣಕ್ಕೆ ಹೊರಟ ನಂತರ ಅವರು ನನ್ನ ಕಛೇರಿಗೆ ಬಂದು ರಾಜೀನಾಮೆಗಳನ್ನು ನೀಡಿದ್ದಾರೆ. ನಂತರ ಮಾನ್ಯ ರಾಜ್ಯಪಾಲರನ್ನು ಭೇಟಿಯಾಗಿ ಅವರಿಗೂ ಇದೇ ಪತ್ರಗಳನ್ನು ನೀಡಿದ್ದಾರೆ. ರಾಜ್ಯಪಾಲರು ಆ ಕುರಿತು ನನಗೆ ಪತ್ರವೊಂದನ್ನು ಬರೆದು, ಆ ಪತ್ರದಲ್ಲಿ ಅವರು ಬಂದು ರಾಜೀನಾಮೆ ನೀಡಿದ್ದಾರೆ ಮತ್ತು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ತಿಳಿಸಿದ್ದಾರೆ. ಸಂವಿಧಾನದ ಆಶಯಗಳನ್ನು ನಿಷ್ಠೆಯಿಂದ ಎತ್ತಿ ಹಿಡಿಯುತ್ತೇನೆಂದು ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ರಮೇಶ್ ಕುಮಾರ್ ರವರು ತಿಳಿಸಿದರು.

ಇದಲ್ಲದೇ ನಾಗೇಶ್ ಎಂಬ ಪಕ್ಷೇತರ ಶಾಸಕ ಮತ್ತು ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆಂದು ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದಾರೆಂದು ಆ ಕುರಿತು ತನಗೆ ಪತ್ರ ಕೊಟ್ಟಿದ್ದಾರೆಂದು ರಾಜ್ಯಪಾಲರು ಆ ಪತ್ರವನ್ನು ಸಹ ನನಗೆ ಕಳಿಸಿದ್ದಾರೆ. ಆದರೆ ಆ ಪತ್ರವನ್ನು ನನಗೆ ಯಾಕೆ ಕಳಿಸಿದ್ದಾರೆಂದು ನನಗೆ ಗೊತ್ತಿಲ್ಲ, ಏಕೆಂದರೆ ಅದರ ಬಗ್ಗೆ ಸಚಿವ ಸಂಪುಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಮುಖ್ಯಮಂತ್ರಿಗಳು ಮಾಡಬೇಕು ಮತ್ತು ವಿಧಾನ ಸಭೆಯ ಅಂಗಳದಲ್ಲಿ ವಿಶ್ವಾಸಮತ ಯಾಚನೆ ನಡೆದಾಗ ನಾಗೇಶ್ ರವರು ತಮಗೆ ಇಷ್ಟ ಬಂದವರಿಗೆ ಬೆಂಬಲ ಸೂಚಿಸಬಹುದು, ಬಿಜೆಪಿಯವರಿಗೂ ಸಹ ಬೆಂಬಲವನ್ನು ಸೂಚಿಸಬಹುದು. ಆದರೆ ಆ ಪತ್ರವನ್ನು ನನಗ್ಯಾಕೆ ಕಳಿಸಿದ್ದಾರೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಬಂಡಾಯವೆದ್ದ ಶಾಸಕರು ಗೊಂದಲಕ್ಕೆ ಬಿದ್ದಿದ್ದಾರೆ. ಸೌಮ್ಯ ರೆಡ್ಡಿಯವರು ಕೂಡ ರಾಜೀನಾಮೆ ನೀಡದಿರುಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಹ ಹೊರಬಿದ್ದಿದೆ. ಸೌಮ್ಯರೆಡ್ಡಿಯವರು ಇನ್ನು ರಾಜೀನಾಮೆ ಸಲ್ಲಿಸಿಲ್ಲ ಮತ್ತು ರಾಮಲಿಂಗರೆಡ್ಡಿಯವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಇವರ ಮುಂದಿನ ನಡೆಗಳು ಹೇಗಿರುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಬಿದ್ದು ಹೋಗುವ ಅಪಾಯದಿಂದ ಪಾರಾಗಿದ್ದು, ಇನ್ನು ಕನಿಷ್ಠ ಐದಾರು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸ್ಪೀಕರ್ ರಮೇಶ್ ಕುಮಾರ್ ಇದೆಲ್ಲದರ ಕೇಂದ್ರ ಬಿಂದುವಾಗಿದ್ದಾರೆ. ರಮೇಶ್ ಕುಮಾರ್‍ರವರು ಕಾನೂನು ಮತ್ತು ಮಾತು ಬಲ್ಲವರಾಗಿದ್ದು ಕಾನೂನಿನ ಒಳಗಿನ ಅಂಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮತ್ತು ಅದನ್ನು ಚಾರಿತ್ರಿಕವಾಗಿ ಮತ್ತು ಸಾಂವಿಧಾನಿಕವಾಗಿ ಅವುಗಳನ್ನು ಸಮರ್ಥಿಸಿಕೊಳ್ಳುವ ಛಾತಿ ಅವರಿಗಿದೆ. ಮತ್ತು ಇಂದು ಪತ್ರಿಕಾಗೋಷ್ಠಿಯನ್ನು ಏನು ನಡಾವಳಿ ನಡೆದಿದೆ ಎಂಬುದನ್ನು ಮುಂದಿಟ್ಟಿರುವುದು ಸಹ ತನ್ನ ಕಛೆರಿಯ ಕಡೆಯಿಂದ ಮತ್ತು ತನ್ನ ಕಡೆಯಿಂದ ಯಾವುದೇ ಸಾಂವಿಧಾನಿಕ ಅಥವಾ ನಿಯಮಾವಳಿಗಳ ಲೋಪ ಆಗಿಲ್ಲವೆಂದು ಸ್ಪಷ್ಟೀಕರಿಸುವ ಇರಾದೆ ಅವರಿಗಿದ್ದಿದ್ದನ್ನು ತೋರಿಸುತ್ತದೆ. ಹೀಗಾಗಿ ಬಂಡಾಯ ಶಾಸಕರು ಅಥವಾ ಬಿಜೆಪಿಗೆ ತಕ್ಷಣದಲ್ಲೇ ಏನಾದರೂ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟಕರ ಎಂಬ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಈಗಲೇ ಹೇಳಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...