Homeಕರ್ನಾಟಕಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

ಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

- Advertisement -
- Advertisement -

ಇಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿ ತಮ್ಮ ನಿಲುವನ್ನು ತಿಳಿಸುವುದಾಗಿ ಹೇಳಿದ್ದ ರಮೇಶ್ ಕುಮಾರ್ ರವರು ಇಂದು ವಿಧಾನ ಸೌಧದ ತಮ್ಮ ಕಚೇರಿಗೆ ಬಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯ ಸರ್ಕಾರ ಸಂಪೂರ್ಣ ಸೇಫ್ ಎಂಬುದು ನಿಚ್ಚಳವಾಗಿದೆ.

ಸಲ್ಲಿಸಿರುವ 13 ರಾಜೀನಾಮೆ ಪತ್ರಗಳಲ್ಲಿ 8 ಕ್ರಮಬದ್ಧವಾಗಿಲ್ಲ, 5 ಮಾತ್ರವೇ ಕ್ರಮಬದ್ಧವಾಗಿವೆ ಎಂದು ಸ್ಪೀಕರ್ ರಮೇಶ್ ಕುಮಾರ್ ರವರು ಸ್ಪಷ್ಟವಾಗಿ ನುಡಿದಿದ್ದಾರೆ. ಇದಕ್ಕೆ ಮುಂಚೆ ಸದರಿ ಶಾಸಕರುಗಳಿಗೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ಹೊರಟಿತ್ತು. ಅದಕ್ಕೆ ಮುಂಬೈನ ಸೋಫಿಟಲ್ ಹೋಟೆಲ್‍ನಿಂದಲೇ ಪ್ರತಿಕ್ರಿಯಿಸಿದ್ದ ಅತೃಪ್ತ ಶಾಸಕರು ಅಗತ್ಯಬಿದ್ದರೆ ನಾಳೆಯೇ ಬೆಂಗಳೂರಿಗೆ ಧಾವಿಸಿ ಮತ್ತೇ ರಾಜೀನಾಮೆ ನೀಡುತ್ತೇವೆಂದು ಗುಡುಗಿದ್ದರು. ಈ ಮಧ್ಯೆ ವಿಧಾನಸೌಧದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಮೇಶ್ ಕುಮಾರ್ ನಾಮಪತ್ರಗಳಲ್ಲಿ 8 ಕ್ರಮಬದ್ದವೇ ಆಗಿಲ್ಲವೆಂದು ಹೇಳುವ ಮುಖಾಂತರ ಎಲ್ಲರನ್ನು ಚಕಿತಗೊಳಿಸಿದ್ದಾರೆ.

5 ಜನರ ರಾಜೀನಾಮೆ ಪತ್ರ ಮಾತ್ರ ಕ್ರಮಬದ್ಧವಾಗಿದ್ದು, ಆ ಐದು ಜನರಿಗೂ ನೋಟಿಸ್ ಕೊಟ್ಟಿದ್ದು ಅವರುಗಳು ಬಂದು ತಮ್ಮ ಅನಿಸಿಕೆಯೆನೆಂದು ಹೇಳಬೇಕೆಂದು ತಿಳಿಸಿದ್ದಾರೆ. ಇದಲ್ಲದೇ ಉಳಿದವರಿಗೆ ಕೂಡ ಸಮಯ ನಿಗಧಿ ಮಾಡಿದ್ದು ನಂತರದಲ್ಲಿ 10 ಮತ್ತು 11 ರಜಾದಿನಗಳಾದ್ದರಿಂದ 12 ತಾರೀಕು ಆನಂದ್ ಸಿಂಗ್ ಮತ್ತು ನಾರಾಯಣಗೌಡರವರಿಗೆ ತಮ್ಮ ಅನಿಸಿಕೆಗಳನ್ನು ಬಂದು ತಿಳಿಸಲು ಹೇಳಿದ್ದಾರೆ. 15ಕ್ಕೆ ರಾಮಲಿಂಗಾರೆಡ್ಡಿಯವರಿಗೆ ವೈಯಕ್ತಿಕ ವಿಚಾರಣೆಗೆ ಕರೆದಿದ್ದೇನೆ ಎಂದಿದ್ದಾರೆ.

ತಮ್ಮ ಕಚೇರಿಯ ನಡಾವಳಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ ರಮೇಶ್ ಕುಮಾರ್ ರವರು ತಾನು 6ನೇ ಆರನೇ ತಾರೀಕು ಮಧ್ಯಾಹ್ನದವರೆಗೂ ಕಛೇರಿಯಲ್ಲಿಯೇ ಇದ್ದೆ. ಅಲ್ಲಿಯವರೆಗೂ ಯಾರು ನನ್ನನ್ನು ಸಂಪರ್ಕಿಸಿಲ್ಲ ಮಾತ್ರವಲ್ಲ, ಸಮಯವನ್ನೂ ಸಹ ಕೇಳಿರಲಿಲ್ಲ. ನಾನು ವ್ಯಕ್ತಿಗತ ಕೆಲಸಗಳ ಕಾರಣಕ್ಕೆ ಹೊರಟ ನಂತರ ಅವರು ನನ್ನ ಕಛೇರಿಗೆ ಬಂದು ರಾಜೀನಾಮೆಗಳನ್ನು ನೀಡಿದ್ದಾರೆ. ನಂತರ ಮಾನ್ಯ ರಾಜ್ಯಪಾಲರನ್ನು ಭೇಟಿಯಾಗಿ ಅವರಿಗೂ ಇದೇ ಪತ್ರಗಳನ್ನು ನೀಡಿದ್ದಾರೆ. ರಾಜ್ಯಪಾಲರು ಆ ಕುರಿತು ನನಗೆ ಪತ್ರವೊಂದನ್ನು ಬರೆದು, ಆ ಪತ್ರದಲ್ಲಿ ಅವರು ಬಂದು ರಾಜೀನಾಮೆ ನೀಡಿದ್ದಾರೆ ಮತ್ತು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ತಿಳಿಸಿದ್ದಾರೆ. ಸಂವಿಧಾನದ ಆಶಯಗಳನ್ನು ನಿಷ್ಠೆಯಿಂದ ಎತ್ತಿ ಹಿಡಿಯುತ್ತೇನೆಂದು ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ರಮೇಶ್ ಕುಮಾರ್ ರವರು ತಿಳಿಸಿದರು.

ಇದಲ್ಲದೇ ನಾಗೇಶ್ ಎಂಬ ಪಕ್ಷೇತರ ಶಾಸಕ ಮತ್ತು ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆಂದು ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದಾರೆಂದು ಆ ಕುರಿತು ತನಗೆ ಪತ್ರ ಕೊಟ್ಟಿದ್ದಾರೆಂದು ರಾಜ್ಯಪಾಲರು ಆ ಪತ್ರವನ್ನು ಸಹ ನನಗೆ ಕಳಿಸಿದ್ದಾರೆ. ಆದರೆ ಆ ಪತ್ರವನ್ನು ನನಗೆ ಯಾಕೆ ಕಳಿಸಿದ್ದಾರೆಂದು ನನಗೆ ಗೊತ್ತಿಲ್ಲ, ಏಕೆಂದರೆ ಅದರ ಬಗ್ಗೆ ಸಚಿವ ಸಂಪುಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಮುಖ್ಯಮಂತ್ರಿಗಳು ಮಾಡಬೇಕು ಮತ್ತು ವಿಧಾನ ಸಭೆಯ ಅಂಗಳದಲ್ಲಿ ವಿಶ್ವಾಸಮತ ಯಾಚನೆ ನಡೆದಾಗ ನಾಗೇಶ್ ರವರು ತಮಗೆ ಇಷ್ಟ ಬಂದವರಿಗೆ ಬೆಂಬಲ ಸೂಚಿಸಬಹುದು, ಬಿಜೆಪಿಯವರಿಗೂ ಸಹ ಬೆಂಬಲವನ್ನು ಸೂಚಿಸಬಹುದು. ಆದರೆ ಆ ಪತ್ರವನ್ನು ನನಗ್ಯಾಕೆ ಕಳಿಸಿದ್ದಾರೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಬಂಡಾಯವೆದ್ದ ಶಾಸಕರು ಗೊಂದಲಕ್ಕೆ ಬಿದ್ದಿದ್ದಾರೆ. ಸೌಮ್ಯ ರೆಡ್ಡಿಯವರು ಕೂಡ ರಾಜೀನಾಮೆ ನೀಡದಿರುಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಹ ಹೊರಬಿದ್ದಿದೆ. ಸೌಮ್ಯರೆಡ್ಡಿಯವರು ಇನ್ನು ರಾಜೀನಾಮೆ ಸಲ್ಲಿಸಿಲ್ಲ ಮತ್ತು ರಾಮಲಿಂಗರೆಡ್ಡಿಯವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಇವರ ಮುಂದಿನ ನಡೆಗಳು ಹೇಗಿರುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಬಿದ್ದು ಹೋಗುವ ಅಪಾಯದಿಂದ ಪಾರಾಗಿದ್ದು, ಇನ್ನು ಕನಿಷ್ಠ ಐದಾರು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸ್ಪೀಕರ್ ರಮೇಶ್ ಕುಮಾರ್ ಇದೆಲ್ಲದರ ಕೇಂದ್ರ ಬಿಂದುವಾಗಿದ್ದಾರೆ. ರಮೇಶ್ ಕುಮಾರ್‍ರವರು ಕಾನೂನು ಮತ್ತು ಮಾತು ಬಲ್ಲವರಾಗಿದ್ದು ಕಾನೂನಿನ ಒಳಗಿನ ಅಂಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮತ್ತು ಅದನ್ನು ಚಾರಿತ್ರಿಕವಾಗಿ ಮತ್ತು ಸಾಂವಿಧಾನಿಕವಾಗಿ ಅವುಗಳನ್ನು ಸಮರ್ಥಿಸಿಕೊಳ್ಳುವ ಛಾತಿ ಅವರಿಗಿದೆ. ಮತ್ತು ಇಂದು ಪತ್ರಿಕಾಗೋಷ್ಠಿಯನ್ನು ಏನು ನಡಾವಳಿ ನಡೆದಿದೆ ಎಂಬುದನ್ನು ಮುಂದಿಟ್ಟಿರುವುದು ಸಹ ತನ್ನ ಕಛೆರಿಯ ಕಡೆಯಿಂದ ಮತ್ತು ತನ್ನ ಕಡೆಯಿಂದ ಯಾವುದೇ ಸಾಂವಿಧಾನಿಕ ಅಥವಾ ನಿಯಮಾವಳಿಗಳ ಲೋಪ ಆಗಿಲ್ಲವೆಂದು ಸ್ಪಷ್ಟೀಕರಿಸುವ ಇರಾದೆ ಅವರಿಗಿದ್ದಿದ್ದನ್ನು ತೋರಿಸುತ್ತದೆ. ಹೀಗಾಗಿ ಬಂಡಾಯ ಶಾಸಕರು ಅಥವಾ ಬಿಜೆಪಿಗೆ ತಕ್ಷಣದಲ್ಲೇ ಏನಾದರೂ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟಕರ ಎಂಬ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಈಗಲೇ ಹೇಳಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...