Homeಕರ್ನಾಟಕಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

ಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

- Advertisement -
- Advertisement -

ಇಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿ ತಮ್ಮ ನಿಲುವನ್ನು ತಿಳಿಸುವುದಾಗಿ ಹೇಳಿದ್ದ ರಮೇಶ್ ಕುಮಾರ್ ರವರು ಇಂದು ವಿಧಾನ ಸೌಧದ ತಮ್ಮ ಕಚೇರಿಗೆ ಬಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯ ಸರ್ಕಾರ ಸಂಪೂರ್ಣ ಸೇಫ್ ಎಂಬುದು ನಿಚ್ಚಳವಾಗಿದೆ.

ಸಲ್ಲಿಸಿರುವ 13 ರಾಜೀನಾಮೆ ಪತ್ರಗಳಲ್ಲಿ 8 ಕ್ರಮಬದ್ಧವಾಗಿಲ್ಲ, 5 ಮಾತ್ರವೇ ಕ್ರಮಬದ್ಧವಾಗಿವೆ ಎಂದು ಸ್ಪೀಕರ್ ರಮೇಶ್ ಕುಮಾರ್ ರವರು ಸ್ಪಷ್ಟವಾಗಿ ನುಡಿದಿದ್ದಾರೆ. ಇದಕ್ಕೆ ಮುಂಚೆ ಸದರಿ ಶಾಸಕರುಗಳಿಗೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ಹೊರಟಿತ್ತು. ಅದಕ್ಕೆ ಮುಂಬೈನ ಸೋಫಿಟಲ್ ಹೋಟೆಲ್‍ನಿಂದಲೇ ಪ್ರತಿಕ್ರಿಯಿಸಿದ್ದ ಅತೃಪ್ತ ಶಾಸಕರು ಅಗತ್ಯಬಿದ್ದರೆ ನಾಳೆಯೇ ಬೆಂಗಳೂರಿಗೆ ಧಾವಿಸಿ ಮತ್ತೇ ರಾಜೀನಾಮೆ ನೀಡುತ್ತೇವೆಂದು ಗುಡುಗಿದ್ದರು. ಈ ಮಧ್ಯೆ ವಿಧಾನಸೌಧದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಮೇಶ್ ಕುಮಾರ್ ನಾಮಪತ್ರಗಳಲ್ಲಿ 8 ಕ್ರಮಬದ್ದವೇ ಆಗಿಲ್ಲವೆಂದು ಹೇಳುವ ಮುಖಾಂತರ ಎಲ್ಲರನ್ನು ಚಕಿತಗೊಳಿಸಿದ್ದಾರೆ.

5 ಜನರ ರಾಜೀನಾಮೆ ಪತ್ರ ಮಾತ್ರ ಕ್ರಮಬದ್ಧವಾಗಿದ್ದು, ಆ ಐದು ಜನರಿಗೂ ನೋಟಿಸ್ ಕೊಟ್ಟಿದ್ದು ಅವರುಗಳು ಬಂದು ತಮ್ಮ ಅನಿಸಿಕೆಯೆನೆಂದು ಹೇಳಬೇಕೆಂದು ತಿಳಿಸಿದ್ದಾರೆ. ಇದಲ್ಲದೇ ಉಳಿದವರಿಗೆ ಕೂಡ ಸಮಯ ನಿಗಧಿ ಮಾಡಿದ್ದು ನಂತರದಲ್ಲಿ 10 ಮತ್ತು 11 ರಜಾದಿನಗಳಾದ್ದರಿಂದ 12 ತಾರೀಕು ಆನಂದ್ ಸಿಂಗ್ ಮತ್ತು ನಾರಾಯಣಗೌಡರವರಿಗೆ ತಮ್ಮ ಅನಿಸಿಕೆಗಳನ್ನು ಬಂದು ತಿಳಿಸಲು ಹೇಳಿದ್ದಾರೆ. 15ಕ್ಕೆ ರಾಮಲಿಂಗಾರೆಡ್ಡಿಯವರಿಗೆ ವೈಯಕ್ತಿಕ ವಿಚಾರಣೆಗೆ ಕರೆದಿದ್ದೇನೆ ಎಂದಿದ್ದಾರೆ.

ತಮ್ಮ ಕಚೇರಿಯ ನಡಾವಳಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ ರಮೇಶ್ ಕುಮಾರ್ ರವರು ತಾನು 6ನೇ ಆರನೇ ತಾರೀಕು ಮಧ್ಯಾಹ್ನದವರೆಗೂ ಕಛೇರಿಯಲ್ಲಿಯೇ ಇದ್ದೆ. ಅಲ್ಲಿಯವರೆಗೂ ಯಾರು ನನ್ನನ್ನು ಸಂಪರ್ಕಿಸಿಲ್ಲ ಮಾತ್ರವಲ್ಲ, ಸಮಯವನ್ನೂ ಸಹ ಕೇಳಿರಲಿಲ್ಲ. ನಾನು ವ್ಯಕ್ತಿಗತ ಕೆಲಸಗಳ ಕಾರಣಕ್ಕೆ ಹೊರಟ ನಂತರ ಅವರು ನನ್ನ ಕಛೇರಿಗೆ ಬಂದು ರಾಜೀನಾಮೆಗಳನ್ನು ನೀಡಿದ್ದಾರೆ. ನಂತರ ಮಾನ್ಯ ರಾಜ್ಯಪಾಲರನ್ನು ಭೇಟಿಯಾಗಿ ಅವರಿಗೂ ಇದೇ ಪತ್ರಗಳನ್ನು ನೀಡಿದ್ದಾರೆ. ರಾಜ್ಯಪಾಲರು ಆ ಕುರಿತು ನನಗೆ ಪತ್ರವೊಂದನ್ನು ಬರೆದು, ಆ ಪತ್ರದಲ್ಲಿ ಅವರು ಬಂದು ರಾಜೀನಾಮೆ ನೀಡಿದ್ದಾರೆ ಮತ್ತು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ತಿಳಿಸಿದ್ದಾರೆ. ಸಂವಿಧಾನದ ಆಶಯಗಳನ್ನು ನಿಷ್ಠೆಯಿಂದ ಎತ್ತಿ ಹಿಡಿಯುತ್ತೇನೆಂದು ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ರಮೇಶ್ ಕುಮಾರ್ ರವರು ತಿಳಿಸಿದರು.

ಇದಲ್ಲದೇ ನಾಗೇಶ್ ಎಂಬ ಪಕ್ಷೇತರ ಶಾಸಕ ಮತ್ತು ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆಂದು ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದಾರೆಂದು ಆ ಕುರಿತು ತನಗೆ ಪತ್ರ ಕೊಟ್ಟಿದ್ದಾರೆಂದು ರಾಜ್ಯಪಾಲರು ಆ ಪತ್ರವನ್ನು ಸಹ ನನಗೆ ಕಳಿಸಿದ್ದಾರೆ. ಆದರೆ ಆ ಪತ್ರವನ್ನು ನನಗೆ ಯಾಕೆ ಕಳಿಸಿದ್ದಾರೆಂದು ನನಗೆ ಗೊತ್ತಿಲ್ಲ, ಏಕೆಂದರೆ ಅದರ ಬಗ್ಗೆ ಸಚಿವ ಸಂಪುಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಮುಖ್ಯಮಂತ್ರಿಗಳು ಮಾಡಬೇಕು ಮತ್ತು ವಿಧಾನ ಸಭೆಯ ಅಂಗಳದಲ್ಲಿ ವಿಶ್ವಾಸಮತ ಯಾಚನೆ ನಡೆದಾಗ ನಾಗೇಶ್ ರವರು ತಮಗೆ ಇಷ್ಟ ಬಂದವರಿಗೆ ಬೆಂಬಲ ಸೂಚಿಸಬಹುದು, ಬಿಜೆಪಿಯವರಿಗೂ ಸಹ ಬೆಂಬಲವನ್ನು ಸೂಚಿಸಬಹುದು. ಆದರೆ ಆ ಪತ್ರವನ್ನು ನನಗ್ಯಾಕೆ ಕಳಿಸಿದ್ದಾರೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಬಂಡಾಯವೆದ್ದ ಶಾಸಕರು ಗೊಂದಲಕ್ಕೆ ಬಿದ್ದಿದ್ದಾರೆ. ಸೌಮ್ಯ ರೆಡ್ಡಿಯವರು ಕೂಡ ರಾಜೀನಾಮೆ ನೀಡದಿರುಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಹ ಹೊರಬಿದ್ದಿದೆ. ಸೌಮ್ಯರೆಡ್ಡಿಯವರು ಇನ್ನು ರಾಜೀನಾಮೆ ಸಲ್ಲಿಸಿಲ್ಲ ಮತ್ತು ರಾಮಲಿಂಗರೆಡ್ಡಿಯವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಇವರ ಮುಂದಿನ ನಡೆಗಳು ಹೇಗಿರುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಬಿದ್ದು ಹೋಗುವ ಅಪಾಯದಿಂದ ಪಾರಾಗಿದ್ದು, ಇನ್ನು ಕನಿಷ್ಠ ಐದಾರು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸ್ಪೀಕರ್ ರಮೇಶ್ ಕುಮಾರ್ ಇದೆಲ್ಲದರ ಕೇಂದ್ರ ಬಿಂದುವಾಗಿದ್ದಾರೆ. ರಮೇಶ್ ಕುಮಾರ್‍ರವರು ಕಾನೂನು ಮತ್ತು ಮಾತು ಬಲ್ಲವರಾಗಿದ್ದು ಕಾನೂನಿನ ಒಳಗಿನ ಅಂಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮತ್ತು ಅದನ್ನು ಚಾರಿತ್ರಿಕವಾಗಿ ಮತ್ತು ಸಾಂವಿಧಾನಿಕವಾಗಿ ಅವುಗಳನ್ನು ಸಮರ್ಥಿಸಿಕೊಳ್ಳುವ ಛಾತಿ ಅವರಿಗಿದೆ. ಮತ್ತು ಇಂದು ಪತ್ರಿಕಾಗೋಷ್ಠಿಯನ್ನು ಏನು ನಡಾವಳಿ ನಡೆದಿದೆ ಎಂಬುದನ್ನು ಮುಂದಿಟ್ಟಿರುವುದು ಸಹ ತನ್ನ ಕಛೆರಿಯ ಕಡೆಯಿಂದ ಮತ್ತು ತನ್ನ ಕಡೆಯಿಂದ ಯಾವುದೇ ಸಾಂವಿಧಾನಿಕ ಅಥವಾ ನಿಯಮಾವಳಿಗಳ ಲೋಪ ಆಗಿಲ್ಲವೆಂದು ಸ್ಪಷ್ಟೀಕರಿಸುವ ಇರಾದೆ ಅವರಿಗಿದ್ದಿದ್ದನ್ನು ತೋರಿಸುತ್ತದೆ. ಹೀಗಾಗಿ ಬಂಡಾಯ ಶಾಸಕರು ಅಥವಾ ಬಿಜೆಪಿಗೆ ತಕ್ಷಣದಲ್ಲೇ ಏನಾದರೂ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟಕರ ಎಂಬ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಈಗಲೇ ಹೇಳಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...