Homeಕರ್ನಾಟಕಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

ಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

- Advertisement -
- Advertisement -

ಇಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿ ತಮ್ಮ ನಿಲುವನ್ನು ತಿಳಿಸುವುದಾಗಿ ಹೇಳಿದ್ದ ರಮೇಶ್ ಕುಮಾರ್ ರವರು ಇಂದು ವಿಧಾನ ಸೌಧದ ತಮ್ಮ ಕಚೇರಿಗೆ ಬಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯ ಸರ್ಕಾರ ಸಂಪೂರ್ಣ ಸೇಫ್ ಎಂಬುದು ನಿಚ್ಚಳವಾಗಿದೆ.

ಸಲ್ಲಿಸಿರುವ 13 ರಾಜೀನಾಮೆ ಪತ್ರಗಳಲ್ಲಿ 8 ಕ್ರಮಬದ್ಧವಾಗಿಲ್ಲ, 5 ಮಾತ್ರವೇ ಕ್ರಮಬದ್ಧವಾಗಿವೆ ಎಂದು ಸ್ಪೀಕರ್ ರಮೇಶ್ ಕುಮಾರ್ ರವರು ಸ್ಪಷ್ಟವಾಗಿ ನುಡಿದಿದ್ದಾರೆ. ಇದಕ್ಕೆ ಮುಂಚೆ ಸದರಿ ಶಾಸಕರುಗಳಿಗೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ಹೊರಟಿತ್ತು. ಅದಕ್ಕೆ ಮುಂಬೈನ ಸೋಫಿಟಲ್ ಹೋಟೆಲ್‍ನಿಂದಲೇ ಪ್ರತಿಕ್ರಿಯಿಸಿದ್ದ ಅತೃಪ್ತ ಶಾಸಕರು ಅಗತ್ಯಬಿದ್ದರೆ ನಾಳೆಯೇ ಬೆಂಗಳೂರಿಗೆ ಧಾವಿಸಿ ಮತ್ತೇ ರಾಜೀನಾಮೆ ನೀಡುತ್ತೇವೆಂದು ಗುಡುಗಿದ್ದರು. ಈ ಮಧ್ಯೆ ವಿಧಾನಸೌಧದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಮೇಶ್ ಕುಮಾರ್ ನಾಮಪತ್ರಗಳಲ್ಲಿ 8 ಕ್ರಮಬದ್ದವೇ ಆಗಿಲ್ಲವೆಂದು ಹೇಳುವ ಮುಖಾಂತರ ಎಲ್ಲರನ್ನು ಚಕಿತಗೊಳಿಸಿದ್ದಾರೆ.

5 ಜನರ ರಾಜೀನಾಮೆ ಪತ್ರ ಮಾತ್ರ ಕ್ರಮಬದ್ಧವಾಗಿದ್ದು, ಆ ಐದು ಜನರಿಗೂ ನೋಟಿಸ್ ಕೊಟ್ಟಿದ್ದು ಅವರುಗಳು ಬಂದು ತಮ್ಮ ಅನಿಸಿಕೆಯೆನೆಂದು ಹೇಳಬೇಕೆಂದು ತಿಳಿಸಿದ್ದಾರೆ. ಇದಲ್ಲದೇ ಉಳಿದವರಿಗೆ ಕೂಡ ಸಮಯ ನಿಗಧಿ ಮಾಡಿದ್ದು ನಂತರದಲ್ಲಿ 10 ಮತ್ತು 11 ರಜಾದಿನಗಳಾದ್ದರಿಂದ 12 ತಾರೀಕು ಆನಂದ್ ಸಿಂಗ್ ಮತ್ತು ನಾರಾಯಣಗೌಡರವರಿಗೆ ತಮ್ಮ ಅನಿಸಿಕೆಗಳನ್ನು ಬಂದು ತಿಳಿಸಲು ಹೇಳಿದ್ದಾರೆ. 15ಕ್ಕೆ ರಾಮಲಿಂಗಾರೆಡ್ಡಿಯವರಿಗೆ ವೈಯಕ್ತಿಕ ವಿಚಾರಣೆಗೆ ಕರೆದಿದ್ದೇನೆ ಎಂದಿದ್ದಾರೆ.

ತಮ್ಮ ಕಚೇರಿಯ ನಡಾವಳಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ ರಮೇಶ್ ಕುಮಾರ್ ರವರು ತಾನು 6ನೇ ಆರನೇ ತಾರೀಕು ಮಧ್ಯಾಹ್ನದವರೆಗೂ ಕಛೇರಿಯಲ್ಲಿಯೇ ಇದ್ದೆ. ಅಲ್ಲಿಯವರೆಗೂ ಯಾರು ನನ್ನನ್ನು ಸಂಪರ್ಕಿಸಿಲ್ಲ ಮಾತ್ರವಲ್ಲ, ಸಮಯವನ್ನೂ ಸಹ ಕೇಳಿರಲಿಲ್ಲ. ನಾನು ವ್ಯಕ್ತಿಗತ ಕೆಲಸಗಳ ಕಾರಣಕ್ಕೆ ಹೊರಟ ನಂತರ ಅವರು ನನ್ನ ಕಛೇರಿಗೆ ಬಂದು ರಾಜೀನಾಮೆಗಳನ್ನು ನೀಡಿದ್ದಾರೆ. ನಂತರ ಮಾನ್ಯ ರಾಜ್ಯಪಾಲರನ್ನು ಭೇಟಿಯಾಗಿ ಅವರಿಗೂ ಇದೇ ಪತ್ರಗಳನ್ನು ನೀಡಿದ್ದಾರೆ. ರಾಜ್ಯಪಾಲರು ಆ ಕುರಿತು ನನಗೆ ಪತ್ರವೊಂದನ್ನು ಬರೆದು, ಆ ಪತ್ರದಲ್ಲಿ ಅವರು ಬಂದು ರಾಜೀನಾಮೆ ನೀಡಿದ್ದಾರೆ ಮತ್ತು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ತಿಳಿಸಿದ್ದಾರೆ. ಸಂವಿಧಾನದ ಆಶಯಗಳನ್ನು ನಿಷ್ಠೆಯಿಂದ ಎತ್ತಿ ಹಿಡಿಯುತ್ತೇನೆಂದು ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ರಮೇಶ್ ಕುಮಾರ್ ರವರು ತಿಳಿಸಿದರು.

ಇದಲ್ಲದೇ ನಾಗೇಶ್ ಎಂಬ ಪಕ್ಷೇತರ ಶಾಸಕ ಮತ್ತು ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆಂದು ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದಾರೆಂದು ಆ ಕುರಿತು ತನಗೆ ಪತ್ರ ಕೊಟ್ಟಿದ್ದಾರೆಂದು ರಾಜ್ಯಪಾಲರು ಆ ಪತ್ರವನ್ನು ಸಹ ನನಗೆ ಕಳಿಸಿದ್ದಾರೆ. ಆದರೆ ಆ ಪತ್ರವನ್ನು ನನಗೆ ಯಾಕೆ ಕಳಿಸಿದ್ದಾರೆಂದು ನನಗೆ ಗೊತ್ತಿಲ್ಲ, ಏಕೆಂದರೆ ಅದರ ಬಗ್ಗೆ ಸಚಿವ ಸಂಪುಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಮುಖ್ಯಮಂತ್ರಿಗಳು ಮಾಡಬೇಕು ಮತ್ತು ವಿಧಾನ ಸಭೆಯ ಅಂಗಳದಲ್ಲಿ ವಿಶ್ವಾಸಮತ ಯಾಚನೆ ನಡೆದಾಗ ನಾಗೇಶ್ ರವರು ತಮಗೆ ಇಷ್ಟ ಬಂದವರಿಗೆ ಬೆಂಬಲ ಸೂಚಿಸಬಹುದು, ಬಿಜೆಪಿಯವರಿಗೂ ಸಹ ಬೆಂಬಲವನ್ನು ಸೂಚಿಸಬಹುದು. ಆದರೆ ಆ ಪತ್ರವನ್ನು ನನಗ್ಯಾಕೆ ಕಳಿಸಿದ್ದಾರೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಬಂಡಾಯವೆದ್ದ ಶಾಸಕರು ಗೊಂದಲಕ್ಕೆ ಬಿದ್ದಿದ್ದಾರೆ. ಸೌಮ್ಯ ರೆಡ್ಡಿಯವರು ಕೂಡ ರಾಜೀನಾಮೆ ನೀಡದಿರುಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಹ ಹೊರಬಿದ್ದಿದೆ. ಸೌಮ್ಯರೆಡ್ಡಿಯವರು ಇನ್ನು ರಾಜೀನಾಮೆ ಸಲ್ಲಿಸಿಲ್ಲ ಮತ್ತು ರಾಮಲಿಂಗರೆಡ್ಡಿಯವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಇವರ ಮುಂದಿನ ನಡೆಗಳು ಹೇಗಿರುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಬಿದ್ದು ಹೋಗುವ ಅಪಾಯದಿಂದ ಪಾರಾಗಿದ್ದು, ಇನ್ನು ಕನಿಷ್ಠ ಐದಾರು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸ್ಪೀಕರ್ ರಮೇಶ್ ಕುಮಾರ್ ಇದೆಲ್ಲದರ ಕೇಂದ್ರ ಬಿಂದುವಾಗಿದ್ದಾರೆ. ರಮೇಶ್ ಕುಮಾರ್‍ರವರು ಕಾನೂನು ಮತ್ತು ಮಾತು ಬಲ್ಲವರಾಗಿದ್ದು ಕಾನೂನಿನ ಒಳಗಿನ ಅಂಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮತ್ತು ಅದನ್ನು ಚಾರಿತ್ರಿಕವಾಗಿ ಮತ್ತು ಸಾಂವಿಧಾನಿಕವಾಗಿ ಅವುಗಳನ್ನು ಸಮರ್ಥಿಸಿಕೊಳ್ಳುವ ಛಾತಿ ಅವರಿಗಿದೆ. ಮತ್ತು ಇಂದು ಪತ್ರಿಕಾಗೋಷ್ಠಿಯನ್ನು ಏನು ನಡಾವಳಿ ನಡೆದಿದೆ ಎಂಬುದನ್ನು ಮುಂದಿಟ್ಟಿರುವುದು ಸಹ ತನ್ನ ಕಛೆರಿಯ ಕಡೆಯಿಂದ ಮತ್ತು ತನ್ನ ಕಡೆಯಿಂದ ಯಾವುದೇ ಸಾಂವಿಧಾನಿಕ ಅಥವಾ ನಿಯಮಾವಳಿಗಳ ಲೋಪ ಆಗಿಲ್ಲವೆಂದು ಸ್ಪಷ್ಟೀಕರಿಸುವ ಇರಾದೆ ಅವರಿಗಿದ್ದಿದ್ದನ್ನು ತೋರಿಸುತ್ತದೆ. ಹೀಗಾಗಿ ಬಂಡಾಯ ಶಾಸಕರು ಅಥವಾ ಬಿಜೆಪಿಗೆ ತಕ್ಷಣದಲ್ಲೇ ಏನಾದರೂ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟಕರ ಎಂಬ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಈಗಲೇ ಹೇಳಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...