Homeಕರ್ನಾಟಕಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

ಸ್ಪೀಕರ್ ದಾಳ ಉರುಳಿಸಿದ ರಮೇಶ್ ಕುಮಾರ್: ಮುಂದಿನ ಐದು ದಿನಗಳ ಕಾಲ ಏನೂ ಆಗೋಲ್ಲ

- Advertisement -
- Advertisement -

ಇಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿ ತಮ್ಮ ನಿಲುವನ್ನು ತಿಳಿಸುವುದಾಗಿ ಹೇಳಿದ್ದ ರಮೇಶ್ ಕುಮಾರ್ ರವರು ಇಂದು ವಿಧಾನ ಸೌಧದ ತಮ್ಮ ಕಚೇರಿಗೆ ಬಂದು ಎಲ್ಲಾ ರಾಜಿನಾಮೆ ಪತ್ರಗಳನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯ ಸರ್ಕಾರ ಸಂಪೂರ್ಣ ಸೇಫ್ ಎಂಬುದು ನಿಚ್ಚಳವಾಗಿದೆ.

ಸಲ್ಲಿಸಿರುವ 13 ರಾಜೀನಾಮೆ ಪತ್ರಗಳಲ್ಲಿ 8 ಕ್ರಮಬದ್ಧವಾಗಿಲ್ಲ, 5 ಮಾತ್ರವೇ ಕ್ರಮಬದ್ಧವಾಗಿವೆ ಎಂದು ಸ್ಪೀಕರ್ ರಮೇಶ್ ಕುಮಾರ್ ರವರು ಸ್ಪಷ್ಟವಾಗಿ ನುಡಿದಿದ್ದಾರೆ. ಇದಕ್ಕೆ ಮುಂಚೆ ಸದರಿ ಶಾಸಕರುಗಳಿಗೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ಹೊರಟಿತ್ತು. ಅದಕ್ಕೆ ಮುಂಬೈನ ಸೋಫಿಟಲ್ ಹೋಟೆಲ್‍ನಿಂದಲೇ ಪ್ರತಿಕ್ರಿಯಿಸಿದ್ದ ಅತೃಪ್ತ ಶಾಸಕರು ಅಗತ್ಯಬಿದ್ದರೆ ನಾಳೆಯೇ ಬೆಂಗಳೂರಿಗೆ ಧಾವಿಸಿ ಮತ್ತೇ ರಾಜೀನಾಮೆ ನೀಡುತ್ತೇವೆಂದು ಗುಡುಗಿದ್ದರು. ಈ ಮಧ್ಯೆ ವಿಧಾನಸೌಧದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಮೇಶ್ ಕುಮಾರ್ ನಾಮಪತ್ರಗಳಲ್ಲಿ 8 ಕ್ರಮಬದ್ದವೇ ಆಗಿಲ್ಲವೆಂದು ಹೇಳುವ ಮುಖಾಂತರ ಎಲ್ಲರನ್ನು ಚಕಿತಗೊಳಿಸಿದ್ದಾರೆ.

5 ಜನರ ರಾಜೀನಾಮೆ ಪತ್ರ ಮಾತ್ರ ಕ್ರಮಬದ್ಧವಾಗಿದ್ದು, ಆ ಐದು ಜನರಿಗೂ ನೋಟಿಸ್ ಕೊಟ್ಟಿದ್ದು ಅವರುಗಳು ಬಂದು ತಮ್ಮ ಅನಿಸಿಕೆಯೆನೆಂದು ಹೇಳಬೇಕೆಂದು ತಿಳಿಸಿದ್ದಾರೆ. ಇದಲ್ಲದೇ ಉಳಿದವರಿಗೆ ಕೂಡ ಸಮಯ ನಿಗಧಿ ಮಾಡಿದ್ದು ನಂತರದಲ್ಲಿ 10 ಮತ್ತು 11 ರಜಾದಿನಗಳಾದ್ದರಿಂದ 12 ತಾರೀಕು ಆನಂದ್ ಸಿಂಗ್ ಮತ್ತು ನಾರಾಯಣಗೌಡರವರಿಗೆ ತಮ್ಮ ಅನಿಸಿಕೆಗಳನ್ನು ಬಂದು ತಿಳಿಸಲು ಹೇಳಿದ್ದಾರೆ. 15ಕ್ಕೆ ರಾಮಲಿಂಗಾರೆಡ್ಡಿಯವರಿಗೆ ವೈಯಕ್ತಿಕ ವಿಚಾರಣೆಗೆ ಕರೆದಿದ್ದೇನೆ ಎಂದಿದ್ದಾರೆ.

ತಮ್ಮ ಕಚೇರಿಯ ನಡಾವಳಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ ರಮೇಶ್ ಕುಮಾರ್ ರವರು ತಾನು 6ನೇ ಆರನೇ ತಾರೀಕು ಮಧ್ಯಾಹ್ನದವರೆಗೂ ಕಛೇರಿಯಲ್ಲಿಯೇ ಇದ್ದೆ. ಅಲ್ಲಿಯವರೆಗೂ ಯಾರು ನನ್ನನ್ನು ಸಂಪರ್ಕಿಸಿಲ್ಲ ಮಾತ್ರವಲ್ಲ, ಸಮಯವನ್ನೂ ಸಹ ಕೇಳಿರಲಿಲ್ಲ. ನಾನು ವ್ಯಕ್ತಿಗತ ಕೆಲಸಗಳ ಕಾರಣಕ್ಕೆ ಹೊರಟ ನಂತರ ಅವರು ನನ್ನ ಕಛೇರಿಗೆ ಬಂದು ರಾಜೀನಾಮೆಗಳನ್ನು ನೀಡಿದ್ದಾರೆ. ನಂತರ ಮಾನ್ಯ ರಾಜ್ಯಪಾಲರನ್ನು ಭೇಟಿಯಾಗಿ ಅವರಿಗೂ ಇದೇ ಪತ್ರಗಳನ್ನು ನೀಡಿದ್ದಾರೆ. ರಾಜ್ಯಪಾಲರು ಆ ಕುರಿತು ನನಗೆ ಪತ್ರವೊಂದನ್ನು ಬರೆದು, ಆ ಪತ್ರದಲ್ಲಿ ಅವರು ಬಂದು ರಾಜೀನಾಮೆ ನೀಡಿದ್ದಾರೆ ಮತ್ತು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ತಿಳಿಸಿದ್ದಾರೆ. ಸಂವಿಧಾನದ ಆಶಯಗಳನ್ನು ನಿಷ್ಠೆಯಿಂದ ಎತ್ತಿ ಹಿಡಿಯುತ್ತೇನೆಂದು ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ರಮೇಶ್ ಕುಮಾರ್ ರವರು ತಿಳಿಸಿದರು.

ಇದಲ್ಲದೇ ನಾಗೇಶ್ ಎಂಬ ಪಕ್ಷೇತರ ಶಾಸಕ ಮತ್ತು ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆಂದು ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದಾರೆಂದು ಆ ಕುರಿತು ತನಗೆ ಪತ್ರ ಕೊಟ್ಟಿದ್ದಾರೆಂದು ರಾಜ್ಯಪಾಲರು ಆ ಪತ್ರವನ್ನು ಸಹ ನನಗೆ ಕಳಿಸಿದ್ದಾರೆ. ಆದರೆ ಆ ಪತ್ರವನ್ನು ನನಗೆ ಯಾಕೆ ಕಳಿಸಿದ್ದಾರೆಂದು ನನಗೆ ಗೊತ್ತಿಲ್ಲ, ಏಕೆಂದರೆ ಅದರ ಬಗ್ಗೆ ಸಚಿವ ಸಂಪುಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಮುಖ್ಯಮಂತ್ರಿಗಳು ಮಾಡಬೇಕು ಮತ್ತು ವಿಧಾನ ಸಭೆಯ ಅಂಗಳದಲ್ಲಿ ವಿಶ್ವಾಸಮತ ಯಾಚನೆ ನಡೆದಾಗ ನಾಗೇಶ್ ರವರು ತಮಗೆ ಇಷ್ಟ ಬಂದವರಿಗೆ ಬೆಂಬಲ ಸೂಚಿಸಬಹುದು, ಬಿಜೆಪಿಯವರಿಗೂ ಸಹ ಬೆಂಬಲವನ್ನು ಸೂಚಿಸಬಹುದು. ಆದರೆ ಆ ಪತ್ರವನ್ನು ನನಗ್ಯಾಕೆ ಕಳಿಸಿದ್ದಾರೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಬಂಡಾಯವೆದ್ದ ಶಾಸಕರು ಗೊಂದಲಕ್ಕೆ ಬಿದ್ದಿದ್ದಾರೆ. ಸೌಮ್ಯ ರೆಡ್ಡಿಯವರು ಕೂಡ ರಾಜೀನಾಮೆ ನೀಡದಿರುಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಹ ಹೊರಬಿದ್ದಿದೆ. ಸೌಮ್ಯರೆಡ್ಡಿಯವರು ಇನ್ನು ರಾಜೀನಾಮೆ ಸಲ್ಲಿಸಿಲ್ಲ ಮತ್ತು ರಾಮಲಿಂಗರೆಡ್ಡಿಯವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಇವರ ಮುಂದಿನ ನಡೆಗಳು ಹೇಗಿರುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಬಿದ್ದು ಹೋಗುವ ಅಪಾಯದಿಂದ ಪಾರಾಗಿದ್ದು, ಇನ್ನು ಕನಿಷ್ಠ ಐದಾರು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸ್ಪೀಕರ್ ರಮೇಶ್ ಕುಮಾರ್ ಇದೆಲ್ಲದರ ಕೇಂದ್ರ ಬಿಂದುವಾಗಿದ್ದಾರೆ. ರಮೇಶ್ ಕುಮಾರ್‍ರವರು ಕಾನೂನು ಮತ್ತು ಮಾತು ಬಲ್ಲವರಾಗಿದ್ದು ಕಾನೂನಿನ ಒಳಗಿನ ಅಂಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮತ್ತು ಅದನ್ನು ಚಾರಿತ್ರಿಕವಾಗಿ ಮತ್ತು ಸಾಂವಿಧಾನಿಕವಾಗಿ ಅವುಗಳನ್ನು ಸಮರ್ಥಿಸಿಕೊಳ್ಳುವ ಛಾತಿ ಅವರಿಗಿದೆ. ಮತ್ತು ಇಂದು ಪತ್ರಿಕಾಗೋಷ್ಠಿಯನ್ನು ಏನು ನಡಾವಳಿ ನಡೆದಿದೆ ಎಂಬುದನ್ನು ಮುಂದಿಟ್ಟಿರುವುದು ಸಹ ತನ್ನ ಕಛೆರಿಯ ಕಡೆಯಿಂದ ಮತ್ತು ತನ್ನ ಕಡೆಯಿಂದ ಯಾವುದೇ ಸಾಂವಿಧಾನಿಕ ಅಥವಾ ನಿಯಮಾವಳಿಗಳ ಲೋಪ ಆಗಿಲ್ಲವೆಂದು ಸ್ಪಷ್ಟೀಕರಿಸುವ ಇರಾದೆ ಅವರಿಗಿದ್ದಿದ್ದನ್ನು ತೋರಿಸುತ್ತದೆ. ಹೀಗಾಗಿ ಬಂಡಾಯ ಶಾಸಕರು ಅಥವಾ ಬಿಜೆಪಿಗೆ ತಕ್ಷಣದಲ್ಲೇ ಏನಾದರೂ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟಕರ ಎಂಬ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಈಗಲೇ ಹೇಳಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...