Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...