Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...