Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...