Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...