Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...