Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...