Homeಕರ್ನಾಟಕಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು!...

ಸ್ಪೀಕರ್ ಕೊಟ್ಟ ಸಂಡೇ ಶಾಕ್: ಮತ್ತೆ 14 ಶಾಸಕರು ಅನರ್ಹ, ಮಂಕಾಗಿ ಹೋದ ಮುಂಬೈವಾಲಾ ಶಾಸಕರು! ನಾಳೆ ಏನಾಗಲಿದೆ?

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ರಮೇಶಕುಮಾರ್ ಅವರು ಇಂದು ರವಿವಾರ ನೀಡಿದ ತೀರ್ಪು ಮತ್ತೆ 14 ಶಾಸಕರಿಗರನ್ನು ತಲ್ಲಣಗೊಳಿಸಿ ಬಿಟ್ಟಿದೆ. ಮುಂಬೈ, ಪೂಣೆಯಲ್ಲಿ ಈಗ ಸುರಿಯುತ್ತಿರುವ ಮಳೆ ನೀಡುತ್ತಿರುವ ತಂಪು ಮತ್ತು ಅಲ್ಲಿನ ಐಷಾರಾಮಿ ಹೊಟೆಲ್‍ಗಳಲ್ಲಿ ಇರುವ ಎ.ಸಿ.ಯ ನಡುವೆಯೂ ಅತೃಪ್ತ ಶಾಸಕರು ಮೈ ಮನಸ್ಸುಗಳೆಲ್ಲ ಬೆವರಿನಿಂದ ಒದ್ದೆಯಾಗಿವೆ.

ಹೇಗೂ ನಮ್ಮ ಸರ್ಕಾರವೇ, ಈ ಅತೃಪ್ತರು ಅನರ್ಹಗೊಂಡ ಕಾರಣಕ್ಕೆ ನಮ್ಮ ಶಾಸಕರಿಗೆ ಸಚಿವಗಿರಿ ಕೊಡಬಹುದು ಎಂದು ಒಳಗಡೆ ಖುಷಿ ಪಡುತ್ತಿರುವ ಬಿಜೆಪಿ, ಇದು ಅನ್ಯಾಯ ಎಂದೆಲ್ಲ ಅತೃಪ್ತರ ಪರ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇಂದಿನ ‘ಸ್ವಾರ್ಥಕ್ಕಾಗಿ ಬೆನ್ನಿಗೆ ಚೂರಿ ಹಾಕುವ’ ಮೋದಿ-ಶಾಗಳ ರಾಜಕೀಯದ ಮುಂದುವರಿಕೆಯ ಸ್ಯಾಂಪಲ್ ಆಗಿದೆ…..

ಮೊನ್ನೆ ಮುಂಬೈಯಿಂದ ಓಡೋಡಿ ಬಂದು ಯಲ್ಲಪುರದ ತಾಲೂಕಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ‘ವ್ಯವಹಾರ’ ಮುಗಿಸಿಕೊಂಡು ಮತ್ತೆ ಮುಂಬೈಗೋ. ಪುಣೈಗೋ ಪಲಾಯನ ಮಾಡಿದ ಅಲ್ಲಿನ ಶಾಸಕ ಶಿವರಾಮ್ ಹೆಬ್ಬಾರ್ ನಾಳೆ ಮುಂಜಾನೆ ಯಲ್ಲಾಪುರದ ಯಾವ ಕಚೇರಿಗೆ ಹೋದರೂ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ!

ಇದು ಸೋಮಶೇಖರ್, ಬೈರತಿ ಬಸವರಾಜು, ವಿಶ್ವನಾಥ್, ಮುನಿರತ್ನ ಇತ್ಯಾದಿ ಎಲ್ಲರಿಗೂ ಅನ್ವಯವೇ! ಸ್ಪೀಕರ್ ರಮೇಶಕುಮಾರ್ ಕೊಟ್ಟ ಶಾಕೇ ಹಾಗಿದೆ. ಬಿಜೆಪಿಯ ಮಾತು ಕೇಳಿಕೊಂಡು ಸರ್ಕಾರ ಬೀಳಿಸಲು ‘ಮಹತ್ತರ’ ಪಾತ್ರ ವಹಿಸಿದ್ದ 17 ಶಾಸಕರಿಗೆ ಇನ್ನು ಕನಿಷ್ಠ 4 ವರ್ಷಗಳ ಕಾಲ ಅವರದೇ ಕ್ಷೇತ್ರಗಳಲ್ಲಿ ಸಾರ್ವಜನಿಕ ಮಾನ್ಯತೆಯೇ ಇಲ್ಲ. ಈಗ ಅವರು ಕರ್ನಾಟಕಕ್ಕೆ ಬರಲೇಬೇಕು. ಬಹುಷ: ಅವರ ಕುಟುಂಬದವರನ್ನು ಬಿಟ್ಟರೆ ಅವರನ್ನು ಸ್ವಾಗತಿಸಲು ಕೆಲವು ಹುಂಬಾತಿಹುಂಬ ಕಾರ್ಯಕರ್ತರನ್ನು ಬಿಟ್ಟರೆ ಮತ್ಯಾರು ಇಲ್ಲಿ ಇರಲ್ಲ.

ನಾಳೆ ಏನಾಗಬಹುದು?
17 ಶಾಸಕರ ಅನರ್ಹತೆಯ ಕಾರಣಕ್ಕೆ ಈಗ ಸದನದ ಸದಸ್ಯರ ಸಂಖ್ಯೆ 207. ಬಹುಮತ ಸಾಬೀತಿಗೆ 104 ಸಂಖ್ಯೆ ಸಾಕು. ಈಗಾಗಲೇ ಬಿಜೆಪಿಗೆ 105 ಶಾಸಕರ ಸಂಖ್ಯೆ ಇರುವುದರಿಂದ ವಿಶ್ವಾಸಮತ ಗೆಲ್ಲಬಹುದು. ಆದರೆ, ಇತ್ತ ಅತೃಪ್ತರಾಗೇ ಉಳಿದುಬಿಟ್ಟ ಶಾಸಕರ (ಇವರೀಗ ಶಾಸಕರೇ ಅಲ್ಲ ಬಿಡಿ..), ಅಲ್ಲ ಮಹಾಮಹಿಮರನ್ನು ಬಿಜೆಪಿ ಸಮಾಧಾನ ಮಾಡಬೇಕು. ಈ ಗದ್ದಲದಲ್ಲಿ ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಕೈ ಹಾಕಿಬಿಟ್ಟರೆ ಬಿಜೆಪಿ ಸಂಕಟಕ್ಕೆ ಸಿಲುಕುವುದಂತೂ ಸತ್ಯ.

ಆದರೆ, ಒಟ್ಟಿನಲ್ಲಿ ಸ್ಪೀಕರ್ ರಮೇಶಕುಮಾರ್ ಅವರ ನಿರ್ಧಾರ ಸಾಮಾನ್ಯ ಮತದಾರರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಖುಷಿ ಕೊಟ್ಟೇ ಇದೆ. ವಿಚಿತ್ರ ಎಂದರೆ ಬಿಜೆಪಿಗೂ ಒಂದರ್ಥದಲ್ಲಿ ಇದು ಖುಷಿಯ ವಿಷಯವೇ. ಅಂದರೆ ಈಗ ಅನರ್ಹಗೊಂಡವರೆಲ್ಲ ಅಂತರ್ ಪಿಶಾಚಿಗಳು ಅಷ್ಟೇ… ಅವರಿಗಿರುವ ಏಕೈಕ ದಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...