Homeಕರ್ನಾಟಕಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

- Advertisement -
- Advertisement -

ಒಲ್ಲದ ಮನಸ್ಸಿನಿಂದಲೇ ಸ್ಪೀಕರಿಕೆ “ದಂಡ” ದೀಕ್ಷೆ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಕತ್ತಲಲ್ಲಿ ಕೋಲು ಕಳಕೊಂಡ ಅರೆ ಕುರುಡನಂತೆ ಕಂಗಾಲು ಬಿದ್ದಿದ್ದಾರೆ. ಸತತ ಆರು ಬಾರಿ ಮತೋನ್ಮತ್ತ ಮಸಲತ್ತಿನ ಬಲದಿಂದ ಶಾಸಕಾಗಿರುವ ಈ ಎಬಿವಿಪಿ ಕೇಡರಿನ “ಹಿರಿಯ” ಸಂಘಿ ಸರದಾರ, ಸದನದಲ್ಲಿ ಸಂಸದೀಯ ಜಾಣ್ಮೆ ಪ್ರದರ್ಶಿಸಿದ ಕುರುಹುಗಳೇನೂ ಕಾಣಿಸುತ್ತಿಲ್ಲ. ಕಾಗೇರಿ ಅಂಥ ಜನತಾಂತ್ರಿಕ, ಜನಪದ ಕುಶಾಗ್ರಮತಿ ರಾಜಕಾರಣಿಯೇನಲ್ಲ ಎಂಬುದು ಆತನ ಕಾಲು ಶತಮಾನದ ಗ್ರಾಫು-ಟ್ಯ್ರಾಕು ನೋಡಿದರೆ ಎಂಥವರಿಗೆ ಪಕ್ಕಾ ಆಗುತ್ತದೆ. ಆತನ ಸ್ವಪಕ್ಷದ ಆಜನ್ಮ ಶತ್ರುವೂ, ಬೆಂಕಿ ಬಡಾಯಿ ಸಂಸದನೂ ಆದ ಅನಂತ್ಮಾಣಿ ಆಗಾಗ ಕಾಗೇರಿಗೆ “ಸಂಭಾವಿತ ಹೇಡಿ” ಎಂದು ಪರೋಕ್ಷವಾಗಿ ತಿವಿಯುತ್ತಲೇ ಇರುತ್ತಾನೆ.

ನಿಧಾನಗತಿಯ ಕಾಗೇರಿಯಲ್ಲಿ ಸದನ ನಿಭಾಯಿಸುವ ಪ್ರಜಾತಾಂತ್ರಿಕ ಕೌಶಲ್ಯವಾಗಲೀ, ಹಾರಾಡುವ ಶಾಸಕರನ್ನು ನಿಯಮ ನೀತಿಗಳ ಅಂಕುಶದಿಂದ ನಿಯಂತ್ರಿಸುವ ಜ್ಞಾನವಾಗಲೀ ಇಲ್ಲವೆಂದು ಕೇಶವಕೃಪದಲ್ಲಿ ಒಂದು ಸುತ್ತಿನ ಚರ್ಚೆಯೂ ಆಗಿದೆಯಂತೆ. ಆತ ಅಧಿವೇಶನ ನಡೆಯುವ ಹೊತ್ತಲ್ಲಿ ವಿಧಾನಸಭಾ ಅಧ್ಯಕ್ಷತೆ ಕುರ್ಚಿಯಲ್ಲಿ ಒಂಥರಾ ಕಕ್ಕಾಬಿಕ್ಕಿ ಆಗಿರುವುದಂತೂ ಹೌದು. ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

ಯಡ್ಡಿ ಸರ್ಕಾರದ ಕಡೆಯಲ್ಲಿ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಒಬ್ಬರು ಬಿಟ್ಟರೆ ಸಂಸಧೀಯ ಪರಿಭಾಷೆಯಲ್ಲಿ ಮಾತಾಡುವ ತಂತ್ರಗಾರರು ಇಲ್ಲ. ಸಿ.ಟಿ.ರವಿಯಂಥ ದೇಶ “ಕುಟ್ಟುವ” ಹಿಂದೂತ್ವದ ಹಿರೇಮಣಿಗಳು ಬಿಜೆಪಿ ಬದಿಯಲ್ಲಿದ್ದಾರೆಯೇ ಹೊರತು ಕಾಂಗ್ರೆಸ್‍ನ ಸಿದ್ದು, ರಮೇಶ್ ಕುಮಾರ್, ಕೃಷ್ಣ ಭೈರೇಗೌಡ….. ಮುಂತಾದ ನುರಿತ ಸಂಸದೀಯ ಪಟುಗಳಿಗೆ ತಿರುಗೇಟು ಕೊಡುವ ಚತುರರಿಲ್ಲ!

ಇದು ಪೆದ್ದು ಸ್ಪೀಕರ್ ಪೀಕಲಾಟವನ್ನು ಮತ್ತಷ್ಟು ಜಾಸ್ತಿಮಾಡಿದೆ! ಆತ ಯಡ್ಡಿಯ ಅಕ್ರಮ ಸರ್ಕಾರಕ್ಕೆ ಸಂದಿಗ್ಧ ಎದುರಾದಾಗೆಲ್ಲಾ ತಿಣುಕಾಡುವಂತಾಗಿದೆ ಪಾಪ!!. ಕಾಗೇರಿಯ ಇನ್ನೊಂದು ದೊಡ್ಡ ಕಷ್ಣವೆಂದರೆ ಅನರ್ಹ ಶಾಸಕರ ಗಲೀಜು ಪ್ರಕರಣ. ಈ ಕೇಸು ಸುಪ್ರೀಂ ಕೋರ್ಟಿನಲ್ಲಿದೆಯಾದರೂ ವಿಧಾನಸಭಾಧ್ಯಕ್ಷ ಕಾಗೇರಿಯನ್ನೂ ಇದು ಕಂಡೂಕಾಣದಂತೆ ಬಾದಿಸುತ್ತಿದೆ. ಮಾಧ್ಯಮದವರನ್ನು ಅಧಿವೇಶನಕ್ಕೆ ಬರದಂತೆ ನಿರ್ಬಂಧಿಸಿರುವ ಕಾಗೇರಿ ವಿವಾದಕ್ಕೆ ಸಿಲುಕಿದ್ದಾರೆ. ಇಂಥ ಹಲವು “ಧರ್ಮಸೂಕ್ಷ್ಮ”ಕ್ಕೆ ಬಿದ್ದಿರುವ ಕಾಗೇರಿಗೆ ಸ್ಪೀಕರಿಕೆ ಹೊಣೆಗಾರಿಕೆ ಸುಸ್ತು ಹೊಡೆಸುತ್ತಿದೆ.

ಅಧಿಕಾರ ವಹಿಸಿಕೊಂಡ ಮರುಕ್ಷಣದಿಂದಲೇ ಕಾಗೇರಿ ಆಸರೆಗಾಗಿ ತಡಕಾಡುತ್ತಲೇ ಇದ್ದರು. ಸದನ ಮತ್ತು ಕಲಾಪದ ತಂತ್ರಜ್ಞಾನದ ಆಳ-ಅಗಲ ಬಲ್ಲವನೊಬ್ಬನ ಸಹಾಯಕನಾಗಿ ನೇಮಿಸಿಕೊಳ್ಳುವ ಅರ್ಜಂಟಿಗೆ ಬಿದ್ದಿದ್ದರು. ಕಾಗೇರಿಯ ದೌರ್ಬಲ್ಯ ಗೊತ್ತಾಗಿದ್ದೇ ತಡ, ವಿಧಾನ ಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಚುರುಕಾದರು. ಬಿಜೆಪಿ ವಲಯದಲ್ಲಿ ಪ್ರಭಾವಿ ಸಂಪರ್ಕಗಳನ್ನು ಹೊಂದಿರುವ ಓಂ ಪ್ರಕಾಶ್ ಹತ್ತಿರದ ಸಂಬಂಧಿಯೊಬ್ಬರು ಬಿಜೆಪಿಯ ಆಯಕಟ್ಟಿನ ಜಾಗದಲ್ಲೂ ಇದ್ದಾರೆ. ಈತ ಕಾಗೇರಿಗೂ ಪರಮಾಪ್ತ. ಹಿಂದೆ ಇಂಥದೇ ಆಟ ಆಡಿ ವಿಧಾನಸಭೆ-ವಿಧಾನ ಪರಿಷತ್ ಎರಡಕ್ಕೂ ಸೇರಿದ ಮಹಾಪ್ರಧಾನ ಕಾರ್ಯದರ್ಶಿ ಆಗಲು ಓಂ ಪ್ರಕಾಶ್ ಹವಣಿಸಿದ್ದರು. ಆಗ ಯಡ್ಡಿ ಸಿಎಂ ಆಗಿದ್ದರೆ, ಒಂ ಪ್ರಕಾಶ್ ವಿಧಾನಸಭೆಯ ಕಾರ್ಯದರ್ಶಿಯಾಗಿದ್ದರು. ಆದರೆ ಆಗ ಅದು ವಿಫಲವಾಗಿತ್ತು.

ಇದೇ ಓಂ ಪ್ರಕಾಶ್‍ರನ್ನು ಕಾಗೇರಿ ಈಗ ತನ್ನ “ಸಲಹೆಗಾರ”ನಾಗಿ ನೇಮಿಸಿಕೊಂಡಿದ್ದಾರೆ. ವಿಧಾನಸಭೆಯ ಇತಿಹಾಸದಲ್ಲೇ ಯಾವ ಸ್ಪೀಕರೂ ಇಂಥ ದೈನೇಸಿ ಸ್ಥಿತಿಗೆ ಬಿದ್ದಿರಲಿಲ್ಲ. ಸ್ಪೀಕರ್ ವಿಶೇಷ ಕರ್ತವ್ಯಾಧಿಕಾರಿ ನೇಮಿಸಿ ಕೊಳ್ಳಬಹುದೇ ಹೊರತು “ಸಲಹೆಗಾರ” ಹುದ್ದೆ ಸೃಷ್ಟಿಗೆ ವಿಧಾನಸಭೆಯ ಸಿ ಆ್ಯಂಡ್ ಆರ್ ನಿಯಮದಂತೆ ಅವಕಾಶವೇ ಇಲ್ಲ! ನಡುಪಕ್ಷೀಯವಾಗಿ ಓಂ ಪ್ರಕಾಶ್‍ರನ್ನು ಸಲಹೆಗಾರನೆಂದು ನೇಮಿಸಿಕೊಂಡಿರುವ ಕಾಗೇರಿ ಸಂಪ್ರದಾಯ, ನೀತಿಯನ್ನೆಲ್ಲಿ ಬುದ್ದಿ ಪೂರ್ವಕವಾಗೇ ದಿಕ್ಕರಿಸಿದ್ದಾರೆ. ಇಂಥ ನೇಮಕಾತಿ ಹೊತ್ತಲ್ಲಿ ವಿಧಾನಸಭೆ ಸಮಿತಿ ಸಭೆ ಕರೆಯುವುದು ಪದ್ಧತಿ. ವಾಡಿಕೆಯನ್ನೆಲ್ಲ ಕಡೆಗಣಿಸಿ ಸಲಹೆಗಾರನ ನೇಮಿಸಿಕೊಂಡಿರುವ ಕಾಗೇರಿ ನಡೆಯಿಂದ ವಿಧಾನಸಭೆ ಸಿಬ್ಬಂದಿ ಬೆಚ್ಚಿಬಿದ್ದಿದೆ. ಇದ್ಯಾವುದಕ್ಕೂ ಕೇರ್ ಮಾಡದ ಕಾಗೇರಿ ತನ್ನ ನಿಲುವು ಅಚಲ ಎಂದು ಸಿಬ್ಬಂದಿಗೆ ರೋಪು ಹಾಕಿದ್ದಾರಂತೆ.

ವಿಧಾನಸಭೆಯ ಕಾರ್ಯದರ್ಶಿಗೆ ತತ್ಸಮಾನವಾದ ಹುದ್ದೆ ಸಲಹೆಗಾರ ಸಾಹೇಬರಿಗೆ ದಯಪಾಲಿಸಲಾಗಿದೆ. ಇದರಿಂದ ಎರಡು ಅಧಿಕಾರ ಕೇಂದ್ರ ಸೃಷ್ಟಿಯಾಗಿ ಸಿಬ್ಬಂದಿಯಲ್ಲಿ ಗುಂಪುಗಾರಿಕೆ ಅನಾಹುತ ಎದುರಾಗಲಿದೆ. ದೈನಂದಿನ ಕಾರ್ಯನಿರ್ವಹಣೆಯಲ್ಲಿ ಎಡವಟ್ಟಾಗಲಿದೆ. ಅನಗತ್ಯ ದುಂದು ವೆಚ್ಚವಾಗಲಿದೆ. ಅಷ್ಟಕ್ಕೂ ಇಂಥದೊಂದು ಸಲಹೆಗಾರನ ಅಗತ್ಯವಾದರೂ ಇತ್ತೇ ಎಂದರೆ, ಊಹುಂ ಅದೂ ಇಲ್ಲ! ಸಚಿವಾಲಯದ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳಿಗೆ ಸದನದ ಕಲಾಪದ ನಿಯಮಾವಳಿ, ಇನ್ನಿತರ ಕಾನೂನು, ಶಾಸಕರ ಹಕ್ಕು ಬಾಧ್ಯತೆಗಳ ತಿಳುವಳಿಕೆ ಇದ್ದೇ ಇರುತ್ತದೆ. ಇವರೆಲ್ಲ ಸ್ಪೀಕರ್ ಎಂಥ ಮೊದ್ಮಣಿಯಾದರೂ ಗೈಡ್ ಮಾಡಿ ಹಳಿಗೆ ತರುವ ಜಾಣರಿರುತ್ತಾರೆ.

ಆದರೆ ಗೊಂದಲಕ್ಕೆ ಬಿದ್ದಿರುವ ಕಾಗೇರಿಗೆ ಸಿಬ್ಬಂದಿ, ಕಾರ್ಯದರ್ಶಿಗಳಿಗಿಂತ ಖಾಸಗಿ ಸಲಹೆಗಾರನ ಮೇಲೆಯೇ ನಂಬಿಕೆ ಹೆಚ್ಚು! ಸಾಮಾನ್ಯವಾಗಿ ಇಂಥ ಅಯೋಗ್ಯ ನೇಮಕಾತಿಗೆ ಹಣಕಾಸು ಇಲಾಖೆ ಆಕ್ಷೇಪವೆತ್ತಿ ಕಡತ ತಿರಸ್ಕಾರಿಸುತ್ತಾರೆ. ಆದರೆ ವಿಚಿತ್ರವೆಂದರೆ ಕಾಗೇರಿಯ ಈ ಕರಾಮತ್ತನ್ನು ಈವರೆಗೆ ಹಣಕಾಸು ಇಲಾಖೆ ಪ್ರಶ್ನಿಸದೇ ನಿಗೂಢ ಮೌನದಲ್ಲಿದೆ.

ಇದು ಸಂಘದೊಳಗಿನ ಸರ್ಕಸ್ ಮತ್ತು ಕಾಗೇರಿಯ ಪೊಕ್ಕುತನದ ಮಹಿಮೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...