Homeಕರ್ನಾಟಕಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

- Advertisement -
- Advertisement -

ಒಲ್ಲದ ಮನಸ್ಸಿನಿಂದಲೇ ಸ್ಪೀಕರಿಕೆ “ದಂಡ” ದೀಕ್ಷೆ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಕತ್ತಲಲ್ಲಿ ಕೋಲು ಕಳಕೊಂಡ ಅರೆ ಕುರುಡನಂತೆ ಕಂಗಾಲು ಬಿದ್ದಿದ್ದಾರೆ. ಸತತ ಆರು ಬಾರಿ ಮತೋನ್ಮತ್ತ ಮಸಲತ್ತಿನ ಬಲದಿಂದ ಶಾಸಕಾಗಿರುವ ಈ ಎಬಿವಿಪಿ ಕೇಡರಿನ “ಹಿರಿಯ” ಸಂಘಿ ಸರದಾರ, ಸದನದಲ್ಲಿ ಸಂಸದೀಯ ಜಾಣ್ಮೆ ಪ್ರದರ್ಶಿಸಿದ ಕುರುಹುಗಳೇನೂ ಕಾಣಿಸುತ್ತಿಲ್ಲ. ಕಾಗೇರಿ ಅಂಥ ಜನತಾಂತ್ರಿಕ, ಜನಪದ ಕುಶಾಗ್ರಮತಿ ರಾಜಕಾರಣಿಯೇನಲ್ಲ ಎಂಬುದು ಆತನ ಕಾಲು ಶತಮಾನದ ಗ್ರಾಫು-ಟ್ಯ್ರಾಕು ನೋಡಿದರೆ ಎಂಥವರಿಗೆ ಪಕ್ಕಾ ಆಗುತ್ತದೆ. ಆತನ ಸ್ವಪಕ್ಷದ ಆಜನ್ಮ ಶತ್ರುವೂ, ಬೆಂಕಿ ಬಡಾಯಿ ಸಂಸದನೂ ಆದ ಅನಂತ್ಮಾಣಿ ಆಗಾಗ ಕಾಗೇರಿಗೆ “ಸಂಭಾವಿತ ಹೇಡಿ” ಎಂದು ಪರೋಕ್ಷವಾಗಿ ತಿವಿಯುತ್ತಲೇ ಇರುತ್ತಾನೆ.

ನಿಧಾನಗತಿಯ ಕಾಗೇರಿಯಲ್ಲಿ ಸದನ ನಿಭಾಯಿಸುವ ಪ್ರಜಾತಾಂತ್ರಿಕ ಕೌಶಲ್ಯವಾಗಲೀ, ಹಾರಾಡುವ ಶಾಸಕರನ್ನು ನಿಯಮ ನೀತಿಗಳ ಅಂಕುಶದಿಂದ ನಿಯಂತ್ರಿಸುವ ಜ್ಞಾನವಾಗಲೀ ಇಲ್ಲವೆಂದು ಕೇಶವಕೃಪದಲ್ಲಿ ಒಂದು ಸುತ್ತಿನ ಚರ್ಚೆಯೂ ಆಗಿದೆಯಂತೆ. ಆತ ಅಧಿವೇಶನ ನಡೆಯುವ ಹೊತ್ತಲ್ಲಿ ವಿಧಾನಸಭಾ ಅಧ್ಯಕ್ಷತೆ ಕುರ್ಚಿಯಲ್ಲಿ ಒಂಥರಾ ಕಕ್ಕಾಬಿಕ್ಕಿ ಆಗಿರುವುದಂತೂ ಹೌದು. ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

ಯಡ್ಡಿ ಸರ್ಕಾರದ ಕಡೆಯಲ್ಲಿ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಒಬ್ಬರು ಬಿಟ್ಟರೆ ಸಂಸಧೀಯ ಪರಿಭಾಷೆಯಲ್ಲಿ ಮಾತಾಡುವ ತಂತ್ರಗಾರರು ಇಲ್ಲ. ಸಿ.ಟಿ.ರವಿಯಂಥ ದೇಶ “ಕುಟ್ಟುವ” ಹಿಂದೂತ್ವದ ಹಿರೇಮಣಿಗಳು ಬಿಜೆಪಿ ಬದಿಯಲ್ಲಿದ್ದಾರೆಯೇ ಹೊರತು ಕಾಂಗ್ರೆಸ್‍ನ ಸಿದ್ದು, ರಮೇಶ್ ಕುಮಾರ್, ಕೃಷ್ಣ ಭೈರೇಗೌಡ….. ಮುಂತಾದ ನುರಿತ ಸಂಸದೀಯ ಪಟುಗಳಿಗೆ ತಿರುಗೇಟು ಕೊಡುವ ಚತುರರಿಲ್ಲ!

ಇದು ಪೆದ್ದು ಸ್ಪೀಕರ್ ಪೀಕಲಾಟವನ್ನು ಮತ್ತಷ್ಟು ಜಾಸ್ತಿಮಾಡಿದೆ! ಆತ ಯಡ್ಡಿಯ ಅಕ್ರಮ ಸರ್ಕಾರಕ್ಕೆ ಸಂದಿಗ್ಧ ಎದುರಾದಾಗೆಲ್ಲಾ ತಿಣುಕಾಡುವಂತಾಗಿದೆ ಪಾಪ!!. ಕಾಗೇರಿಯ ಇನ್ನೊಂದು ದೊಡ್ಡ ಕಷ್ಣವೆಂದರೆ ಅನರ್ಹ ಶಾಸಕರ ಗಲೀಜು ಪ್ರಕರಣ. ಈ ಕೇಸು ಸುಪ್ರೀಂ ಕೋರ್ಟಿನಲ್ಲಿದೆಯಾದರೂ ವಿಧಾನಸಭಾಧ್ಯಕ್ಷ ಕಾಗೇರಿಯನ್ನೂ ಇದು ಕಂಡೂಕಾಣದಂತೆ ಬಾದಿಸುತ್ತಿದೆ. ಮಾಧ್ಯಮದವರನ್ನು ಅಧಿವೇಶನಕ್ಕೆ ಬರದಂತೆ ನಿರ್ಬಂಧಿಸಿರುವ ಕಾಗೇರಿ ವಿವಾದಕ್ಕೆ ಸಿಲುಕಿದ್ದಾರೆ. ಇಂಥ ಹಲವು “ಧರ್ಮಸೂಕ್ಷ್ಮ”ಕ್ಕೆ ಬಿದ್ದಿರುವ ಕಾಗೇರಿಗೆ ಸ್ಪೀಕರಿಕೆ ಹೊಣೆಗಾರಿಕೆ ಸುಸ್ತು ಹೊಡೆಸುತ್ತಿದೆ.

ಅಧಿಕಾರ ವಹಿಸಿಕೊಂಡ ಮರುಕ್ಷಣದಿಂದಲೇ ಕಾಗೇರಿ ಆಸರೆಗಾಗಿ ತಡಕಾಡುತ್ತಲೇ ಇದ್ದರು. ಸದನ ಮತ್ತು ಕಲಾಪದ ತಂತ್ರಜ್ಞಾನದ ಆಳ-ಅಗಲ ಬಲ್ಲವನೊಬ್ಬನ ಸಹಾಯಕನಾಗಿ ನೇಮಿಸಿಕೊಳ್ಳುವ ಅರ್ಜಂಟಿಗೆ ಬಿದ್ದಿದ್ದರು. ಕಾಗೇರಿಯ ದೌರ್ಬಲ್ಯ ಗೊತ್ತಾಗಿದ್ದೇ ತಡ, ವಿಧಾನ ಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಚುರುಕಾದರು. ಬಿಜೆಪಿ ವಲಯದಲ್ಲಿ ಪ್ರಭಾವಿ ಸಂಪರ್ಕಗಳನ್ನು ಹೊಂದಿರುವ ಓಂ ಪ್ರಕಾಶ್ ಹತ್ತಿರದ ಸಂಬಂಧಿಯೊಬ್ಬರು ಬಿಜೆಪಿಯ ಆಯಕಟ್ಟಿನ ಜಾಗದಲ್ಲೂ ಇದ್ದಾರೆ. ಈತ ಕಾಗೇರಿಗೂ ಪರಮಾಪ್ತ. ಹಿಂದೆ ಇಂಥದೇ ಆಟ ಆಡಿ ವಿಧಾನಸಭೆ-ವಿಧಾನ ಪರಿಷತ್ ಎರಡಕ್ಕೂ ಸೇರಿದ ಮಹಾಪ್ರಧಾನ ಕಾರ್ಯದರ್ಶಿ ಆಗಲು ಓಂ ಪ್ರಕಾಶ್ ಹವಣಿಸಿದ್ದರು. ಆಗ ಯಡ್ಡಿ ಸಿಎಂ ಆಗಿದ್ದರೆ, ಒಂ ಪ್ರಕಾಶ್ ವಿಧಾನಸಭೆಯ ಕಾರ್ಯದರ್ಶಿಯಾಗಿದ್ದರು. ಆದರೆ ಆಗ ಅದು ವಿಫಲವಾಗಿತ್ತು.

ಇದೇ ಓಂ ಪ್ರಕಾಶ್‍ರನ್ನು ಕಾಗೇರಿ ಈಗ ತನ್ನ “ಸಲಹೆಗಾರ”ನಾಗಿ ನೇಮಿಸಿಕೊಂಡಿದ್ದಾರೆ. ವಿಧಾನಸಭೆಯ ಇತಿಹಾಸದಲ್ಲೇ ಯಾವ ಸ್ಪೀಕರೂ ಇಂಥ ದೈನೇಸಿ ಸ್ಥಿತಿಗೆ ಬಿದ್ದಿರಲಿಲ್ಲ. ಸ್ಪೀಕರ್ ವಿಶೇಷ ಕರ್ತವ್ಯಾಧಿಕಾರಿ ನೇಮಿಸಿ ಕೊಳ್ಳಬಹುದೇ ಹೊರತು “ಸಲಹೆಗಾರ” ಹುದ್ದೆ ಸೃಷ್ಟಿಗೆ ವಿಧಾನಸಭೆಯ ಸಿ ಆ್ಯಂಡ್ ಆರ್ ನಿಯಮದಂತೆ ಅವಕಾಶವೇ ಇಲ್ಲ! ನಡುಪಕ್ಷೀಯವಾಗಿ ಓಂ ಪ್ರಕಾಶ್‍ರನ್ನು ಸಲಹೆಗಾರನೆಂದು ನೇಮಿಸಿಕೊಂಡಿರುವ ಕಾಗೇರಿ ಸಂಪ್ರದಾಯ, ನೀತಿಯನ್ನೆಲ್ಲಿ ಬುದ್ದಿ ಪೂರ್ವಕವಾಗೇ ದಿಕ್ಕರಿಸಿದ್ದಾರೆ. ಇಂಥ ನೇಮಕಾತಿ ಹೊತ್ತಲ್ಲಿ ವಿಧಾನಸಭೆ ಸಮಿತಿ ಸಭೆ ಕರೆಯುವುದು ಪದ್ಧತಿ. ವಾಡಿಕೆಯನ್ನೆಲ್ಲ ಕಡೆಗಣಿಸಿ ಸಲಹೆಗಾರನ ನೇಮಿಸಿಕೊಂಡಿರುವ ಕಾಗೇರಿ ನಡೆಯಿಂದ ವಿಧಾನಸಭೆ ಸಿಬ್ಬಂದಿ ಬೆಚ್ಚಿಬಿದ್ದಿದೆ. ಇದ್ಯಾವುದಕ್ಕೂ ಕೇರ್ ಮಾಡದ ಕಾಗೇರಿ ತನ್ನ ನಿಲುವು ಅಚಲ ಎಂದು ಸಿಬ್ಬಂದಿಗೆ ರೋಪು ಹಾಕಿದ್ದಾರಂತೆ.

ವಿಧಾನಸಭೆಯ ಕಾರ್ಯದರ್ಶಿಗೆ ತತ್ಸಮಾನವಾದ ಹುದ್ದೆ ಸಲಹೆಗಾರ ಸಾಹೇಬರಿಗೆ ದಯಪಾಲಿಸಲಾಗಿದೆ. ಇದರಿಂದ ಎರಡು ಅಧಿಕಾರ ಕೇಂದ್ರ ಸೃಷ್ಟಿಯಾಗಿ ಸಿಬ್ಬಂದಿಯಲ್ಲಿ ಗುಂಪುಗಾರಿಕೆ ಅನಾಹುತ ಎದುರಾಗಲಿದೆ. ದೈನಂದಿನ ಕಾರ್ಯನಿರ್ವಹಣೆಯಲ್ಲಿ ಎಡವಟ್ಟಾಗಲಿದೆ. ಅನಗತ್ಯ ದುಂದು ವೆಚ್ಚವಾಗಲಿದೆ. ಅಷ್ಟಕ್ಕೂ ಇಂಥದೊಂದು ಸಲಹೆಗಾರನ ಅಗತ್ಯವಾದರೂ ಇತ್ತೇ ಎಂದರೆ, ಊಹುಂ ಅದೂ ಇಲ್ಲ! ಸಚಿವಾಲಯದ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳಿಗೆ ಸದನದ ಕಲಾಪದ ನಿಯಮಾವಳಿ, ಇನ್ನಿತರ ಕಾನೂನು, ಶಾಸಕರ ಹಕ್ಕು ಬಾಧ್ಯತೆಗಳ ತಿಳುವಳಿಕೆ ಇದ್ದೇ ಇರುತ್ತದೆ. ಇವರೆಲ್ಲ ಸ್ಪೀಕರ್ ಎಂಥ ಮೊದ್ಮಣಿಯಾದರೂ ಗೈಡ್ ಮಾಡಿ ಹಳಿಗೆ ತರುವ ಜಾಣರಿರುತ್ತಾರೆ.

ಆದರೆ ಗೊಂದಲಕ್ಕೆ ಬಿದ್ದಿರುವ ಕಾಗೇರಿಗೆ ಸಿಬ್ಬಂದಿ, ಕಾರ್ಯದರ್ಶಿಗಳಿಗಿಂತ ಖಾಸಗಿ ಸಲಹೆಗಾರನ ಮೇಲೆಯೇ ನಂಬಿಕೆ ಹೆಚ್ಚು! ಸಾಮಾನ್ಯವಾಗಿ ಇಂಥ ಅಯೋಗ್ಯ ನೇಮಕಾತಿಗೆ ಹಣಕಾಸು ಇಲಾಖೆ ಆಕ್ಷೇಪವೆತ್ತಿ ಕಡತ ತಿರಸ್ಕಾರಿಸುತ್ತಾರೆ. ಆದರೆ ವಿಚಿತ್ರವೆಂದರೆ ಕಾಗೇರಿಯ ಈ ಕರಾಮತ್ತನ್ನು ಈವರೆಗೆ ಹಣಕಾಸು ಇಲಾಖೆ ಪ್ರಶ್ನಿಸದೇ ನಿಗೂಢ ಮೌನದಲ್ಲಿದೆ.

ಇದು ಸಂಘದೊಳಗಿನ ಸರ್ಕಸ್ ಮತ್ತು ಕಾಗೇರಿಯ ಪೊಕ್ಕುತನದ ಮಹಿಮೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...