Homeಕರ್ನಾಟಕಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಪಾಪ! ಯಾರಿಗೂ ಬೇಡ ಸ್ಪೀಕರ್ ಕಾಗೇರಿಯ ಪೀಕಲಾಟ!!

ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

- Advertisement -
- Advertisement -

ಒಲ್ಲದ ಮನಸ್ಸಿನಿಂದಲೇ ಸ್ಪೀಕರಿಕೆ “ದಂಡ” ದೀಕ್ಷೆ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಕತ್ತಲಲ್ಲಿ ಕೋಲು ಕಳಕೊಂಡ ಅರೆ ಕುರುಡನಂತೆ ಕಂಗಾಲು ಬಿದ್ದಿದ್ದಾರೆ. ಸತತ ಆರು ಬಾರಿ ಮತೋನ್ಮತ್ತ ಮಸಲತ್ತಿನ ಬಲದಿಂದ ಶಾಸಕಾಗಿರುವ ಈ ಎಬಿವಿಪಿ ಕೇಡರಿನ “ಹಿರಿಯ” ಸಂಘಿ ಸರದಾರ, ಸದನದಲ್ಲಿ ಸಂಸದೀಯ ಜಾಣ್ಮೆ ಪ್ರದರ್ಶಿಸಿದ ಕುರುಹುಗಳೇನೂ ಕಾಣಿಸುತ್ತಿಲ್ಲ. ಕಾಗೇರಿ ಅಂಥ ಜನತಾಂತ್ರಿಕ, ಜನಪದ ಕುಶಾಗ್ರಮತಿ ರಾಜಕಾರಣಿಯೇನಲ್ಲ ಎಂಬುದು ಆತನ ಕಾಲು ಶತಮಾನದ ಗ್ರಾಫು-ಟ್ಯ್ರಾಕು ನೋಡಿದರೆ ಎಂಥವರಿಗೆ ಪಕ್ಕಾ ಆಗುತ್ತದೆ. ಆತನ ಸ್ವಪಕ್ಷದ ಆಜನ್ಮ ಶತ್ರುವೂ, ಬೆಂಕಿ ಬಡಾಯಿ ಸಂಸದನೂ ಆದ ಅನಂತ್ಮಾಣಿ ಆಗಾಗ ಕಾಗೇರಿಗೆ “ಸಂಭಾವಿತ ಹೇಡಿ” ಎಂದು ಪರೋಕ್ಷವಾಗಿ ತಿವಿಯುತ್ತಲೇ ಇರುತ್ತಾನೆ.

ನಿಧಾನಗತಿಯ ಕಾಗೇರಿಯಲ್ಲಿ ಸದನ ನಿಭಾಯಿಸುವ ಪ್ರಜಾತಾಂತ್ರಿಕ ಕೌಶಲ್ಯವಾಗಲೀ, ಹಾರಾಡುವ ಶಾಸಕರನ್ನು ನಿಯಮ ನೀತಿಗಳ ಅಂಕುಶದಿಂದ ನಿಯಂತ್ರಿಸುವ ಜ್ಞಾನವಾಗಲೀ ಇಲ್ಲವೆಂದು ಕೇಶವಕೃಪದಲ್ಲಿ ಒಂದು ಸುತ್ತಿನ ಚರ್ಚೆಯೂ ಆಗಿದೆಯಂತೆ. ಆತ ಅಧಿವೇಶನ ನಡೆಯುವ ಹೊತ್ತಲ್ಲಿ ವಿಧಾನಸಭಾ ಅಧ್ಯಕ್ಷತೆ ಕುರ್ಚಿಯಲ್ಲಿ ಒಂಥರಾ ಕಕ್ಕಾಬಿಕ್ಕಿ ಆಗಿರುವುದಂತೂ ಹೌದು. ಸಂಸದೀಯ ಪಟ್ಟುಗಳು, ಭಾಷೆಯ ಮೇಲಿನ ಹಿಡಿತ, ಕಾನೂನು, ನೆನಪಿನ ಶಕ್ತಿಯ ಧೈತ್ಯ ಸಿದ್ಧರಾಮಯ್ಯ ಮಾತಿಗೆ ನಿಂತರಂತೂ ಕಾಗೇರಿಗೆ ದಿಕ್ಕೇ ತೋಚದಂತಾಗುತ್ತದೆ.

ಯಡ್ಡಿ ಸರ್ಕಾರದ ಕಡೆಯಲ್ಲಿ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಒಬ್ಬರು ಬಿಟ್ಟರೆ ಸಂಸಧೀಯ ಪರಿಭಾಷೆಯಲ್ಲಿ ಮಾತಾಡುವ ತಂತ್ರಗಾರರು ಇಲ್ಲ. ಸಿ.ಟಿ.ರವಿಯಂಥ ದೇಶ “ಕುಟ್ಟುವ” ಹಿಂದೂತ್ವದ ಹಿರೇಮಣಿಗಳು ಬಿಜೆಪಿ ಬದಿಯಲ್ಲಿದ್ದಾರೆಯೇ ಹೊರತು ಕಾಂಗ್ರೆಸ್‍ನ ಸಿದ್ದು, ರಮೇಶ್ ಕುಮಾರ್, ಕೃಷ್ಣ ಭೈರೇಗೌಡ….. ಮುಂತಾದ ನುರಿತ ಸಂಸದೀಯ ಪಟುಗಳಿಗೆ ತಿರುಗೇಟು ಕೊಡುವ ಚತುರರಿಲ್ಲ!

ಇದು ಪೆದ್ದು ಸ್ಪೀಕರ್ ಪೀಕಲಾಟವನ್ನು ಮತ್ತಷ್ಟು ಜಾಸ್ತಿಮಾಡಿದೆ! ಆತ ಯಡ್ಡಿಯ ಅಕ್ರಮ ಸರ್ಕಾರಕ್ಕೆ ಸಂದಿಗ್ಧ ಎದುರಾದಾಗೆಲ್ಲಾ ತಿಣುಕಾಡುವಂತಾಗಿದೆ ಪಾಪ!!. ಕಾಗೇರಿಯ ಇನ್ನೊಂದು ದೊಡ್ಡ ಕಷ್ಣವೆಂದರೆ ಅನರ್ಹ ಶಾಸಕರ ಗಲೀಜು ಪ್ರಕರಣ. ಈ ಕೇಸು ಸುಪ್ರೀಂ ಕೋರ್ಟಿನಲ್ಲಿದೆಯಾದರೂ ವಿಧಾನಸಭಾಧ್ಯಕ್ಷ ಕಾಗೇರಿಯನ್ನೂ ಇದು ಕಂಡೂಕಾಣದಂತೆ ಬಾದಿಸುತ್ತಿದೆ. ಮಾಧ್ಯಮದವರನ್ನು ಅಧಿವೇಶನಕ್ಕೆ ಬರದಂತೆ ನಿರ್ಬಂಧಿಸಿರುವ ಕಾಗೇರಿ ವಿವಾದಕ್ಕೆ ಸಿಲುಕಿದ್ದಾರೆ. ಇಂಥ ಹಲವು “ಧರ್ಮಸೂಕ್ಷ್ಮ”ಕ್ಕೆ ಬಿದ್ದಿರುವ ಕಾಗೇರಿಗೆ ಸ್ಪೀಕರಿಕೆ ಹೊಣೆಗಾರಿಕೆ ಸುಸ್ತು ಹೊಡೆಸುತ್ತಿದೆ.

ಅಧಿಕಾರ ವಹಿಸಿಕೊಂಡ ಮರುಕ್ಷಣದಿಂದಲೇ ಕಾಗೇರಿ ಆಸರೆಗಾಗಿ ತಡಕಾಡುತ್ತಲೇ ಇದ್ದರು. ಸದನ ಮತ್ತು ಕಲಾಪದ ತಂತ್ರಜ್ಞಾನದ ಆಳ-ಅಗಲ ಬಲ್ಲವನೊಬ್ಬನ ಸಹಾಯಕನಾಗಿ ನೇಮಿಸಿಕೊಳ್ಳುವ ಅರ್ಜಂಟಿಗೆ ಬಿದ್ದಿದ್ದರು. ಕಾಗೇರಿಯ ದೌರ್ಬಲ್ಯ ಗೊತ್ತಾಗಿದ್ದೇ ತಡ, ವಿಧಾನ ಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಚುರುಕಾದರು. ಬಿಜೆಪಿ ವಲಯದಲ್ಲಿ ಪ್ರಭಾವಿ ಸಂಪರ್ಕಗಳನ್ನು ಹೊಂದಿರುವ ಓಂ ಪ್ರಕಾಶ್ ಹತ್ತಿರದ ಸಂಬಂಧಿಯೊಬ್ಬರು ಬಿಜೆಪಿಯ ಆಯಕಟ್ಟಿನ ಜಾಗದಲ್ಲೂ ಇದ್ದಾರೆ. ಈತ ಕಾಗೇರಿಗೂ ಪರಮಾಪ್ತ. ಹಿಂದೆ ಇಂಥದೇ ಆಟ ಆಡಿ ವಿಧಾನಸಭೆ-ವಿಧಾನ ಪರಿಷತ್ ಎರಡಕ್ಕೂ ಸೇರಿದ ಮಹಾಪ್ರಧಾನ ಕಾರ್ಯದರ್ಶಿ ಆಗಲು ಓಂ ಪ್ರಕಾಶ್ ಹವಣಿಸಿದ್ದರು. ಆಗ ಯಡ್ಡಿ ಸಿಎಂ ಆಗಿದ್ದರೆ, ಒಂ ಪ್ರಕಾಶ್ ವಿಧಾನಸಭೆಯ ಕಾರ್ಯದರ್ಶಿಯಾಗಿದ್ದರು. ಆದರೆ ಆಗ ಅದು ವಿಫಲವಾಗಿತ್ತು.

ಇದೇ ಓಂ ಪ್ರಕಾಶ್‍ರನ್ನು ಕಾಗೇರಿ ಈಗ ತನ್ನ “ಸಲಹೆಗಾರ”ನಾಗಿ ನೇಮಿಸಿಕೊಂಡಿದ್ದಾರೆ. ವಿಧಾನಸಭೆಯ ಇತಿಹಾಸದಲ್ಲೇ ಯಾವ ಸ್ಪೀಕರೂ ಇಂಥ ದೈನೇಸಿ ಸ್ಥಿತಿಗೆ ಬಿದ್ದಿರಲಿಲ್ಲ. ಸ್ಪೀಕರ್ ವಿಶೇಷ ಕರ್ತವ್ಯಾಧಿಕಾರಿ ನೇಮಿಸಿ ಕೊಳ್ಳಬಹುದೇ ಹೊರತು “ಸಲಹೆಗಾರ” ಹುದ್ದೆ ಸೃಷ್ಟಿಗೆ ವಿಧಾನಸಭೆಯ ಸಿ ಆ್ಯಂಡ್ ಆರ್ ನಿಯಮದಂತೆ ಅವಕಾಶವೇ ಇಲ್ಲ! ನಡುಪಕ್ಷೀಯವಾಗಿ ಓಂ ಪ್ರಕಾಶ್‍ರನ್ನು ಸಲಹೆಗಾರನೆಂದು ನೇಮಿಸಿಕೊಂಡಿರುವ ಕಾಗೇರಿ ಸಂಪ್ರದಾಯ, ನೀತಿಯನ್ನೆಲ್ಲಿ ಬುದ್ದಿ ಪೂರ್ವಕವಾಗೇ ದಿಕ್ಕರಿಸಿದ್ದಾರೆ. ಇಂಥ ನೇಮಕಾತಿ ಹೊತ್ತಲ್ಲಿ ವಿಧಾನಸಭೆ ಸಮಿತಿ ಸಭೆ ಕರೆಯುವುದು ಪದ್ಧತಿ. ವಾಡಿಕೆಯನ್ನೆಲ್ಲ ಕಡೆಗಣಿಸಿ ಸಲಹೆಗಾರನ ನೇಮಿಸಿಕೊಂಡಿರುವ ಕಾಗೇರಿ ನಡೆಯಿಂದ ವಿಧಾನಸಭೆ ಸಿಬ್ಬಂದಿ ಬೆಚ್ಚಿಬಿದ್ದಿದೆ. ಇದ್ಯಾವುದಕ್ಕೂ ಕೇರ್ ಮಾಡದ ಕಾಗೇರಿ ತನ್ನ ನಿಲುವು ಅಚಲ ಎಂದು ಸಿಬ್ಬಂದಿಗೆ ರೋಪು ಹಾಕಿದ್ದಾರಂತೆ.

ವಿಧಾನಸಭೆಯ ಕಾರ್ಯದರ್ಶಿಗೆ ತತ್ಸಮಾನವಾದ ಹುದ್ದೆ ಸಲಹೆಗಾರ ಸಾಹೇಬರಿಗೆ ದಯಪಾಲಿಸಲಾಗಿದೆ. ಇದರಿಂದ ಎರಡು ಅಧಿಕಾರ ಕೇಂದ್ರ ಸೃಷ್ಟಿಯಾಗಿ ಸಿಬ್ಬಂದಿಯಲ್ಲಿ ಗುಂಪುಗಾರಿಕೆ ಅನಾಹುತ ಎದುರಾಗಲಿದೆ. ದೈನಂದಿನ ಕಾರ್ಯನಿರ್ವಹಣೆಯಲ್ಲಿ ಎಡವಟ್ಟಾಗಲಿದೆ. ಅನಗತ್ಯ ದುಂದು ವೆಚ್ಚವಾಗಲಿದೆ. ಅಷ್ಟಕ್ಕೂ ಇಂಥದೊಂದು ಸಲಹೆಗಾರನ ಅಗತ್ಯವಾದರೂ ಇತ್ತೇ ಎಂದರೆ, ಊಹುಂ ಅದೂ ಇಲ್ಲ! ಸಚಿವಾಲಯದ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳಿಗೆ ಸದನದ ಕಲಾಪದ ನಿಯಮಾವಳಿ, ಇನ್ನಿತರ ಕಾನೂನು, ಶಾಸಕರ ಹಕ್ಕು ಬಾಧ್ಯತೆಗಳ ತಿಳುವಳಿಕೆ ಇದ್ದೇ ಇರುತ್ತದೆ. ಇವರೆಲ್ಲ ಸ್ಪೀಕರ್ ಎಂಥ ಮೊದ್ಮಣಿಯಾದರೂ ಗೈಡ್ ಮಾಡಿ ಹಳಿಗೆ ತರುವ ಜಾಣರಿರುತ್ತಾರೆ.

ಆದರೆ ಗೊಂದಲಕ್ಕೆ ಬಿದ್ದಿರುವ ಕಾಗೇರಿಗೆ ಸಿಬ್ಬಂದಿ, ಕಾರ್ಯದರ್ಶಿಗಳಿಗಿಂತ ಖಾಸಗಿ ಸಲಹೆಗಾರನ ಮೇಲೆಯೇ ನಂಬಿಕೆ ಹೆಚ್ಚು! ಸಾಮಾನ್ಯವಾಗಿ ಇಂಥ ಅಯೋಗ್ಯ ನೇಮಕಾತಿಗೆ ಹಣಕಾಸು ಇಲಾಖೆ ಆಕ್ಷೇಪವೆತ್ತಿ ಕಡತ ತಿರಸ್ಕಾರಿಸುತ್ತಾರೆ. ಆದರೆ ವಿಚಿತ್ರವೆಂದರೆ ಕಾಗೇರಿಯ ಈ ಕರಾಮತ್ತನ್ನು ಈವರೆಗೆ ಹಣಕಾಸು ಇಲಾಖೆ ಪ್ರಶ್ನಿಸದೇ ನಿಗೂಢ ಮೌನದಲ್ಲಿದೆ.

ಇದು ಸಂಘದೊಳಗಿನ ಸರ್ಕಸ್ ಮತ್ತು ಕಾಗೇರಿಯ ಪೊಕ್ಕುತನದ ಮಹಿಮೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...