Homeಮುಖಪುಟಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು...

ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು…

- Advertisement -
- Advertisement -

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅನುಸರಿಸಲಾದ ಲಾಕ್‌ಡೌನ್ ಇಡೀ ಜಗತ್ತನ್ನು ಸ್ತಬ್ದಗೊಳಿಸಿದೆ. ಇಂಥ ಸಂದರ್ಭವನ್ನು ಆರ್ಥಿಕವಾಗಿ ಸುಸ್ಥಿರವಾಗಿರುವ ಕುಟುಂಬಗಳು ಸಣ್ಣ ಅನಿಸ್ಚಿತತೆಯಲ್ಲೇ ಕಳೆಯುತ್ತಿವೆ. ಆದರೆ ಅಂದೇ ದುಡಿದು ಬದುಕುವ ಜನರ ಜೀವನ ಅತಂತ್ರವಾಗಿದೆ! ಈ ಹೊತ್ತಿನಲ್ಲಿ ಅವರಿಗೆ ನೆರವಾಗುವ ಮೂಲಕ ಧೈರ್ಯ ತುಂಬಾ ಬೇಕಾಗಿತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಉಳ್ಳವರ ಸಂವೇದನಾರಹಿತ ವರ್ತನೆ ಈ ದೇಶದ ಶತಮಾನಗಳ ತಾರತಮ್ಯವನ್ನು ಸ್ಪಷ್ಟವಾಗಿ ಎತ್ತಿ ಹಿಡಿಯಿತು.

ಜನಪ್ರಿಯ ಹಾಸ್ಯ ಕಲಾವಿದ ವರುಣ್ ಗ್ರೋವರ್ ಇತ್ತೀಚೆಗೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವೈಯಕ್ತಿಕ ಅನುಭವವೊಂದನ್ನು ಹಂಚಿಕೊಂಡರು. ಲಾಕ್‌ಡೌನ್ ಸಂದರ್ಭದಲ್ಲಿ ತರಕಾರಿಕೊಳ್ಳುವಾಗ ತಮ್ಮ ಮುಂದೆ ನಿಂತಿದ್ದ ಸ್ಥಿತಿವಂತ ದಂಪತಿಗಳು 315 ರೂ.ಗಳಿಗೆ ತರಕಾರಿ ಕೊಂಡು, ವ್ಯಾಪಾರಿಗೆ 300 ಕೊಟ್ಟು, ‘ಅಷ್ಟೇ ಅಷ್ಟೇ’ ಎಂದು ಕೈಯಾಡಿಸಿ ಹೊರಟರಂತೆ. ತರಕಾರಿ ರೇಟು ಹೆಚ್ಚಿರದೇ ಇದ್ದರೂ, ಅವರು ಚೌಕಾಸಿ ಮಾಡಿದ ರೀತಿ ಬೇಸರ ಹುಟ್ಟಿಸಿತೆಂದು ಗ್ರೋವರ್ ಬರೆದುಕೊಂಡಿದ್ದರು. ಕಡೆಗೂ ವ್ಯಾಪಾರಿ ಪಟ್ಟು ಬಿಡದೇ ಇದ್ದುದಕ್ಕೆ ಬೈದುಕೊಂಡೆ 10 ರೂ. ಕೊಟ್ಟು ಹೋದರಂತೆ! ಅಂದರೆ ಇನ್ನೂ 5 ರೂ.ಗಳನ್ನು ಕೊಡದೆ ಹೋದರು!

ಇದೇ ಖರೀದಿಯನ್ನು ಅಮೆಜಾನ್, ಬಿಗ್‌ಬ್ಯಾಸ್ಕೆಟ್ ಮೂಲಕ ಮಾಡಿದ್ದರೆ, ಹೀಗೆ ಚೌಕಾಸಿ ಮಾಡುತ್ತಿದ್ದರೆ ಎಂಬ ಪ್ರಶ್ನೆ ಟ್ವೀಟ್ ಓದಿವರೆಲ್ಲಾ ಕೇಳಿದ್ದರು.

ಲಾಕ್‌ಡೌನ್ ಎಷ್ಟೋ ಜನರ ಬದುಕನ್ನು ಸವಾಲಿಗೆ ಒಡ್ಡಿಕೊಳ್ಳುವಂತೆ ಮಾಡಿದೆ. ಅಂತಹ ಸವಾಲಿಗೆ ಮುಖಮಾಡಿ ವ್ಯಾಪಾರಿ ಮಾಡುತ್ತಿರುವ ಸಾಮಾನ್ಯ ತರಕಾರಿ ವ್ಯಾಪಾರಿಗೆ ಇಂತಹ ಸಂಕಷ್ಟದ ಕಾಲದಲ್ಲಿ ಐದು ರೂ ಕೊಡದೇ ಹೋದದ್ದು, ಕೇವಲ ಹಣದ ವಿಷಯವಷ್ಟೇ ಅಲ್ಲ, ನಮ್ಮೊಳಗೇ ಸತ್ತು ಹೋಗಿರುವ ಸಂವೇದನೆ, ವಿವೇಚನೆ ಎಂಬ ಗುಣಗಳ ಕೊರತೆಯ ಸೂಚಕ. ತರಕಾರಿ ಕೊಂಡವರಿಗೆ ಹಣದ ಕೊರತೆಯೇನು ಇರಲಿಲ್ಲ. ಚೌಕಾಸಿ ಮಾಡಿ ಉಳಿಸಿದ್ದೂ ದೊಡ್ಡ ಮೊತ್ತವೂ ಅಲ್ಲ. ಆದರೆ ಮಾರುವ ಸಾಮಾನ್ಯನ ಬಗ್ಗೆ ಇದ್ದ ಉಪೇಕ್ಷೆಯ, ಸಂವೇದನೆಗಳಿಲ್ಲದ ಮನಸ್ಥಿತಿ.

ವರುಣ್‌ಗೆ ಸಿಕ್ಕ ಸ್ಥಿತಿವಂತ ದಂಪತಿಯಂತೇ, ಸಾರ್ವಜನಿಕ ಜೀವನದಲ್ಲಿರುವ, ತಮ್ಮ ಪ್ರತಿಭೆಗಾಗಿ ಮೆಚ್ಚುಗೆಗೆ ಪಾತ್ರರಾದ, ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಜನರ ಅಸೂಕ್ಷ್ಮ ವರ್ತನೆಯನ್ನೂ ಈ ಲಾಕ್‌ಡೌನ್ ಅನಾವರಣ ಮಾಡಿತು.

ಇವರೆಲ್ಲರೂ ದಿನವೂ ತಮ್ಮನ್ನು ಮೆಚ್ಚುವ ಜನರ ನಡುವೆ ಪ್ರತಿ ದಿನ ಒಡನಾಡುವವರು. ಯಾವುದೋ ಪಾರ್ಟಿ, ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಲ್ಲಿನ ಕ್ಷಣಗಳನ್ನು ವಿಡಿಯೋ, ಫೋಟೋ ರೂಪದಲ್ಲಿ ಹಂಚಿಕೊಳ್ಳುವುದು, ತಮ್ಮ ವೈಭವದ ಉಡುಗೆ ತೊಡುಗೆಗಳ ಬಗ್ಗೆ ಮಾತನಾಡುವುದು, ಚೆಂದದ, ವೈಭವದ ಬದುಕನ್ನೇ ಪ್ರದರ್ಶಿಸುತ್ತಾ ಇರುವುದು ಪ್ರತಿ ನಿತ್ಯದ ವಿಧಿ.

ಇವರ ಪಾಲಿಗೆ ಈ ಲಾಕ್‌ಡೌನ್ ಒಂದು ರೀತಿಯ ಬಂಧನವಾಗಿತ್ತು. ಆದರೆ ಸೋಷಿಯಲ್ ಮೀಡಿಯಾ ಇಂಥವರ ಪಾಲಿಗೆ ಅದೃಷ್ಟದ ಕಿಟಕಿಯಾಗಿದೆ. ಹಾಗಾಗಿ ಈ ಅವಧಿಯಲ್ಲಿ ತಮ್ಮ ಖಾಸಗಿಯಾದ ಬದುಕಿನ, ತಾವು ಹಿಂದೆಂದೂ ಹಂಚಿಕೊಳ್ಳದ ಕ್ಷಣಗಳನ್ನು ಅಭಿಮಾನಿಗಳ ಮುಂದೆ ಅನಾವರಣ ಮಾಡಲಾರಂಭಿಸಿದರು. ಯಾವ ಕ್ಷಣಗಳು!? ಪಾತ್ರೆ ತೊಳೆಯುವುದು, ಕಸ ಹೊಡೆಯುವುದು, ತಮ್ಮ ದೇಹ ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವರ್ಕ್ಔಟ್ ಮಾಡುವುದು ಇಂಥದ್ದೇ ವಿಡಿಯೋಗಳು ಮತ್ತು ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಟ್ವಿಟರ್, ಫೇಸ್‌ಬುಕ್‌ಗಳಲ್ಲಿ ಹಂಚಿಕೊಳ್ಳುತ್ತಾ, ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಕರೀನಾ ಕಪೂರ್ ಅಡುಗೆ ಮಾಡಿ ತಿಂದಿದ್ದು, ಮಲೈಕಾ ಅರೋರಾ ಬೇಸನ್ ಉಂಡೆ ಮಾಡಿದ್ದು, ವಿಕ್ಕಿ ಕೌಶಲ್ ಫ್ಯಾನ್ ಕ್ಲೀನ್ ಮಾಡಿದ್ದು, ಇವೆಲ್ಲವೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡವು!

ಕೇವಲ ಸಿನಿಮಾ ತಾರೆಗಳಷ್ಟೇ ಅಲ್ಲ, ಸ್ಥಿತಿವಂತ, ಸೌಲಭ್ಯವುಳ್ಳ ಬಹಳಷ್ಟು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿರುವ ಗಣ್ಯರು ತಮ್ಮ ಐಷಾರಾಮದ, ಆತಂಕ ರಹಿತ ಬದುಕಿನ ಕ್ಷಣಗಳನ್ನು ಹಂಚಿಕೊಂಡರು. ಸಂವೇದನೆ ಇರುವ ಯಾವುದೇ ವ್ಯಕ್ತಿ ಇಂಥ ಹೊತ್ತಲ್ಲಿ ಸಂಭ್ರಮವನ್ನು ಹಂಚಿಕೊಳ್ಳುವುದಿಲ್ಲ ಎಂಬ ಟೀಕೆಯೂ ವ್ಯಕ್ತವಾಯಿತು.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಜನರ ಬದುಕು ಅಂತ್ರವಾಗಿದೆ. ತಿನ್ನುವುದಕ್ಕೆ ಅನ್ನ ಇಲ್ಲದೆ, ಇರುವುದಕ್ಕೆ ನೆಲೆಯೂ ಇಲ್ಲದೆ ಕಂಗಾಲಾಗಿರುವಾಗ ಈ ವಿಡಿಯೋಗಳನ್ನು, ಫೋಟೋಗಳನ್ನು ವೈರಲ್ ಮಾಡುತ್ತಿದ್ದರು.

ತಾರೆಗಳ ಈ ವರ್ತನೆಯನ್ನು ಕಂಡ ನಿರ್ದೇಶಕ ಕರಣ್ ಜೊಹರ್ ಟ್ವೀಟ್‌ವೊಂದನ್ನು ಹಂಚಿಕೊಳ್ಳುತ್ತಾ, ನಾನೂ ಅಸೂಕ್ಷ್ಮವಾಗಿ ನಡೆದುಕೊಂಡಿರಬಹುದು ಎಂದು ಕ್ಷಮೆಯಾಚಿಸಿದರು. ಬೆನ್ನಲ್ಲೇ ನಿರ್ದೇಶಕಿ ಫಹಾ ಖಾನ್ ಕೂಡ ಖಾರವಾಗಿ ನಟ-ನಟಿಯರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಸಾರ್ವಜನಿಕ ಆರೋಗ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ವರ್ಕ್ಔಟ್‌ಗಳ ವಿಡಿಯೋಗಳನ್ನುಹಂಚಿಕೊಳ್ಳುವುದನ್ನು ನಿಲ್ಲಿಸಿ ಎಂದು ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ. ನೀವೆಲ್ಲರೂ ಸೌಲಭ್ಯವುಳ್ಳವರು, ನಿಮಗೆ ಈ ಜಾಗತಿಕ ಸೋಂಕಿನ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ನಾನು ಬಲ್ಲೆ. ಆದರೆ ಈ ಹೊತ್ತಿನಲ್ಲಿ ಬಹಳಷ್ಟು ಜನರಿಗೆ ಸಂಕಷ್ಟಕಾಲವಾಗಿದೆ. ಹಾಗಾಗಿ ದಯವಿಟ್ಟು ವಿಡಿಯೋಗಳನ್ನು ಹಂಚಿಕೊಳ್ಳುವುದು ನಿಲ್ಲಿಸಿ. ಇಲ್ಲವಾದರೆ ನಾನು ನಿಮ್ಮನ್ನು ಅನ್‌ಫಾಲೋ ಮಾಡಿದರೆ ಬೇಸರ ಮಾಡಿಕೊಳ್ಳಬೇಡಿ’ ಎಂದು ವಿಡಿಯೋ ಹಂಚಿಕೊಂಡಿದ್ದರು.

ಸೋಂಕು ನಿಯಂತ್ರಣದ ದೃಷ್ಟಿಯಿಂದ ಲಾಕ್‌ಡೌನ್ ಅಗತ್ಯವಾಗಿತ್ತು. ಆದರೆ ಸೌಲಭ್ಯವುಳ್ಳವರಿಗೆ ಇದು ಆತಂಕದ ವಿಷಯವಾಗಿರಲಿಲ್ಲ. ಇದನ್ನು ಒಂದು ರಜೆಯಂತೆ ಸಂಭ್ರಮಿಸುವುದಕ್ಕೆ ಅವಕಾಶವಾಗಿ ಒದಗಿಬಂತು. ಮನೆಯಲ್ಲಿ ರುಚಿ ರುಚಿಯಾಗಿ ಮಾಡಿಕೊಂಡು ತಿನ್ನುವುದು, ಕುಟುಂಬದೊಂದಿಗೆ ಆಡುವುದು ತರಹೇವಾರಿಯಾಗಿ ಕಾಲ ಕಳೆಯುವುದಕ್ಕೆ ಅವಕಾಶವೂ ಆಯಿತು. ವೈಯಕ್ತಿಕವಾದ ಈ ಬದುಕನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಅಸೂಕ್ಷ್ಮತೆಯೇ ಅನೇಕರಲ್ಲಿ ಆಕ್ರೋಶಕ್ಕೂ ಕಾರಣವಾಯಿತು. ಬೀದಿಯಲ್ಲಿ ಮನೆಯೂ ಇಲ್ಲದೆ, ತಿನ್ನುವುದಕ್ಕೆ ಅನ್ನವೂ ಇಲ್ಲದೆ ಅನಿಶ್ಚಿತತೆಯಲ್ಲಿರುವ ಲಕ್ಷಾಂತರ ಜನರ ಇರುವಾಗ, ಸಿರಿತನದ ಅಮಲಿನಲ್ಲಿರುವ ಜನ ಮೃಷ್ಟಾನ್ನದ ಕತೆಗಳನ್ನು ಹಂಚಿಕೊಳ್ಳುವುದು ಯಾವ ರೀತಿಯ ಮನುಷ್ಯತ್ವವಾಗಬಹುದು?

ಎಲ್ಟನ್ ಜಾನ್‌ನಂತಹ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಲೈವ್ ಕಾನ್ಸರ್ಟ್ಗಳನ್ನು ನಡೆಸಿ, ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾದ ಉದಾಹರಣೆಗಳು ಇವರಾರಿಗೂ ಕಾಣದೇ ಹೋಗಿದ್ದು ಅಚ್ಚರಿ!

ಲಾಕ್‌ಡೌನ್‌ಅನ್ನು ಮುಕ್ತವಾಗಿ ಸ್ವಾಗತಿಸಿದ ಈ ಮಂದಿ ಇದರಿಂದ ಯಾರಿಗೆ ಅನಾನುಕೂಲವಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿಲ್ಲವೇನೊ! ಸೋಂಕು ನಿಯಂತ್ರಿಸುವುದಕ್ಕೆ ತಮ್ಮ ಉದ್ಯೋಗ, ಉಳಿಸಿಕೊಂಡಿದ್ದ ಹಣ, ತಮ್ಮ ಘನತೆ, ಆರೋಗ್ಯ, ಸಾಮಾಜಿಕ ಭದ್ರತೆ ಎಲ್ಲವನ್ನೂ ತ್ಯಾಗ ಮಾಡಬೇಕಾಗಿ ಬಂದದ್ದು ಬಡ ಜನರಿಗೆ. ಬದುಕು ಅಸಹನೀಯವಾಗಿದ್ದ ಕಾಲದಲ್ಲಿ ಪೊಲೀಸರಿಂದ ಒದೆ ತಿಂದಿದ್ದು, ಇದೇ ದನಿ ಎತ್ತಲಾಗದ ಜನ. ಇವರ ನೆರವಿಗೆ ನಿಲ್ಲಲಾಗದಿದ್ದರೂ, ಇವರ ಕಷ್ಟಕ್ಕೆ ನೆರವಾಗದಿದ್ದರೂ, ಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸದೇ ಹೋಗಿದ್ದು, ಈ ಕಾಲದ ದುರಂತ!


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...