Homeಮುಖಪುಟಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು...

ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು…

- Advertisement -
- Advertisement -

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅನುಸರಿಸಲಾದ ಲಾಕ್‌ಡೌನ್ ಇಡೀ ಜಗತ್ತನ್ನು ಸ್ತಬ್ದಗೊಳಿಸಿದೆ. ಇಂಥ ಸಂದರ್ಭವನ್ನು ಆರ್ಥಿಕವಾಗಿ ಸುಸ್ಥಿರವಾಗಿರುವ ಕುಟುಂಬಗಳು ಸಣ್ಣ ಅನಿಸ್ಚಿತತೆಯಲ್ಲೇ ಕಳೆಯುತ್ತಿವೆ. ಆದರೆ ಅಂದೇ ದುಡಿದು ಬದುಕುವ ಜನರ ಜೀವನ ಅತಂತ್ರವಾಗಿದೆ! ಈ ಹೊತ್ತಿನಲ್ಲಿ ಅವರಿಗೆ ನೆರವಾಗುವ ಮೂಲಕ ಧೈರ್ಯ ತುಂಬಾ ಬೇಕಾಗಿತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಉಳ್ಳವರ ಸಂವೇದನಾರಹಿತ ವರ್ತನೆ ಈ ದೇಶದ ಶತಮಾನಗಳ ತಾರತಮ್ಯವನ್ನು ಸ್ಪಷ್ಟವಾಗಿ ಎತ್ತಿ ಹಿಡಿಯಿತು.

ಜನಪ್ರಿಯ ಹಾಸ್ಯ ಕಲಾವಿದ ವರುಣ್ ಗ್ರೋವರ್ ಇತ್ತೀಚೆಗೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವೈಯಕ್ತಿಕ ಅನುಭವವೊಂದನ್ನು ಹಂಚಿಕೊಂಡರು. ಲಾಕ್‌ಡೌನ್ ಸಂದರ್ಭದಲ್ಲಿ ತರಕಾರಿಕೊಳ್ಳುವಾಗ ತಮ್ಮ ಮುಂದೆ ನಿಂತಿದ್ದ ಸ್ಥಿತಿವಂತ ದಂಪತಿಗಳು 315 ರೂ.ಗಳಿಗೆ ತರಕಾರಿ ಕೊಂಡು, ವ್ಯಾಪಾರಿಗೆ 300 ಕೊಟ್ಟು, ‘ಅಷ್ಟೇ ಅಷ್ಟೇ’ ಎಂದು ಕೈಯಾಡಿಸಿ ಹೊರಟರಂತೆ. ತರಕಾರಿ ರೇಟು ಹೆಚ್ಚಿರದೇ ಇದ್ದರೂ, ಅವರು ಚೌಕಾಸಿ ಮಾಡಿದ ರೀತಿ ಬೇಸರ ಹುಟ್ಟಿಸಿತೆಂದು ಗ್ರೋವರ್ ಬರೆದುಕೊಂಡಿದ್ದರು. ಕಡೆಗೂ ವ್ಯಾಪಾರಿ ಪಟ್ಟು ಬಿಡದೇ ಇದ್ದುದಕ್ಕೆ ಬೈದುಕೊಂಡೆ 10 ರೂ. ಕೊಟ್ಟು ಹೋದರಂತೆ! ಅಂದರೆ ಇನ್ನೂ 5 ರೂ.ಗಳನ್ನು ಕೊಡದೆ ಹೋದರು!

ಇದೇ ಖರೀದಿಯನ್ನು ಅಮೆಜಾನ್, ಬಿಗ್‌ಬ್ಯಾಸ್ಕೆಟ್ ಮೂಲಕ ಮಾಡಿದ್ದರೆ, ಹೀಗೆ ಚೌಕಾಸಿ ಮಾಡುತ್ತಿದ್ದರೆ ಎಂಬ ಪ್ರಶ್ನೆ ಟ್ವೀಟ್ ಓದಿವರೆಲ್ಲಾ ಕೇಳಿದ್ದರು.

ಲಾಕ್‌ಡೌನ್ ಎಷ್ಟೋ ಜನರ ಬದುಕನ್ನು ಸವಾಲಿಗೆ ಒಡ್ಡಿಕೊಳ್ಳುವಂತೆ ಮಾಡಿದೆ. ಅಂತಹ ಸವಾಲಿಗೆ ಮುಖಮಾಡಿ ವ್ಯಾಪಾರಿ ಮಾಡುತ್ತಿರುವ ಸಾಮಾನ್ಯ ತರಕಾರಿ ವ್ಯಾಪಾರಿಗೆ ಇಂತಹ ಸಂಕಷ್ಟದ ಕಾಲದಲ್ಲಿ ಐದು ರೂ ಕೊಡದೇ ಹೋದದ್ದು, ಕೇವಲ ಹಣದ ವಿಷಯವಷ್ಟೇ ಅಲ್ಲ, ನಮ್ಮೊಳಗೇ ಸತ್ತು ಹೋಗಿರುವ ಸಂವೇದನೆ, ವಿವೇಚನೆ ಎಂಬ ಗುಣಗಳ ಕೊರತೆಯ ಸೂಚಕ. ತರಕಾರಿ ಕೊಂಡವರಿಗೆ ಹಣದ ಕೊರತೆಯೇನು ಇರಲಿಲ್ಲ. ಚೌಕಾಸಿ ಮಾಡಿ ಉಳಿಸಿದ್ದೂ ದೊಡ್ಡ ಮೊತ್ತವೂ ಅಲ್ಲ. ಆದರೆ ಮಾರುವ ಸಾಮಾನ್ಯನ ಬಗ್ಗೆ ಇದ್ದ ಉಪೇಕ್ಷೆಯ, ಸಂವೇದನೆಗಳಿಲ್ಲದ ಮನಸ್ಥಿತಿ.

ವರುಣ್‌ಗೆ ಸಿಕ್ಕ ಸ್ಥಿತಿವಂತ ದಂಪತಿಯಂತೇ, ಸಾರ್ವಜನಿಕ ಜೀವನದಲ್ಲಿರುವ, ತಮ್ಮ ಪ್ರತಿಭೆಗಾಗಿ ಮೆಚ್ಚುಗೆಗೆ ಪಾತ್ರರಾದ, ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಜನರ ಅಸೂಕ್ಷ್ಮ ವರ್ತನೆಯನ್ನೂ ಈ ಲಾಕ್‌ಡೌನ್ ಅನಾವರಣ ಮಾಡಿತು.

ಇವರೆಲ್ಲರೂ ದಿನವೂ ತಮ್ಮನ್ನು ಮೆಚ್ಚುವ ಜನರ ನಡುವೆ ಪ್ರತಿ ದಿನ ಒಡನಾಡುವವರು. ಯಾವುದೋ ಪಾರ್ಟಿ, ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಲ್ಲಿನ ಕ್ಷಣಗಳನ್ನು ವಿಡಿಯೋ, ಫೋಟೋ ರೂಪದಲ್ಲಿ ಹಂಚಿಕೊಳ್ಳುವುದು, ತಮ್ಮ ವೈಭವದ ಉಡುಗೆ ತೊಡುಗೆಗಳ ಬಗ್ಗೆ ಮಾತನಾಡುವುದು, ಚೆಂದದ, ವೈಭವದ ಬದುಕನ್ನೇ ಪ್ರದರ್ಶಿಸುತ್ತಾ ಇರುವುದು ಪ್ರತಿ ನಿತ್ಯದ ವಿಧಿ.

ಇವರ ಪಾಲಿಗೆ ಈ ಲಾಕ್‌ಡೌನ್ ಒಂದು ರೀತಿಯ ಬಂಧನವಾಗಿತ್ತು. ಆದರೆ ಸೋಷಿಯಲ್ ಮೀಡಿಯಾ ಇಂಥವರ ಪಾಲಿಗೆ ಅದೃಷ್ಟದ ಕಿಟಕಿಯಾಗಿದೆ. ಹಾಗಾಗಿ ಈ ಅವಧಿಯಲ್ಲಿ ತಮ್ಮ ಖಾಸಗಿಯಾದ ಬದುಕಿನ, ತಾವು ಹಿಂದೆಂದೂ ಹಂಚಿಕೊಳ್ಳದ ಕ್ಷಣಗಳನ್ನು ಅಭಿಮಾನಿಗಳ ಮುಂದೆ ಅನಾವರಣ ಮಾಡಲಾರಂಭಿಸಿದರು. ಯಾವ ಕ್ಷಣಗಳು!? ಪಾತ್ರೆ ತೊಳೆಯುವುದು, ಕಸ ಹೊಡೆಯುವುದು, ತಮ್ಮ ದೇಹ ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವರ್ಕ್ಔಟ್ ಮಾಡುವುದು ಇಂಥದ್ದೇ ವಿಡಿಯೋಗಳು ಮತ್ತು ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಟ್ವಿಟರ್, ಫೇಸ್‌ಬುಕ್‌ಗಳಲ್ಲಿ ಹಂಚಿಕೊಳ್ಳುತ್ತಾ, ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಕರೀನಾ ಕಪೂರ್ ಅಡುಗೆ ಮಾಡಿ ತಿಂದಿದ್ದು, ಮಲೈಕಾ ಅರೋರಾ ಬೇಸನ್ ಉಂಡೆ ಮಾಡಿದ್ದು, ವಿಕ್ಕಿ ಕೌಶಲ್ ಫ್ಯಾನ್ ಕ್ಲೀನ್ ಮಾಡಿದ್ದು, ಇವೆಲ್ಲವೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡವು!

ಕೇವಲ ಸಿನಿಮಾ ತಾರೆಗಳಷ್ಟೇ ಅಲ್ಲ, ಸ್ಥಿತಿವಂತ, ಸೌಲಭ್ಯವುಳ್ಳ ಬಹಳಷ್ಟು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿರುವ ಗಣ್ಯರು ತಮ್ಮ ಐಷಾರಾಮದ, ಆತಂಕ ರಹಿತ ಬದುಕಿನ ಕ್ಷಣಗಳನ್ನು ಹಂಚಿಕೊಂಡರು. ಸಂವೇದನೆ ಇರುವ ಯಾವುದೇ ವ್ಯಕ್ತಿ ಇಂಥ ಹೊತ್ತಲ್ಲಿ ಸಂಭ್ರಮವನ್ನು ಹಂಚಿಕೊಳ್ಳುವುದಿಲ್ಲ ಎಂಬ ಟೀಕೆಯೂ ವ್ಯಕ್ತವಾಯಿತು.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಜನರ ಬದುಕು ಅಂತ್ರವಾಗಿದೆ. ತಿನ್ನುವುದಕ್ಕೆ ಅನ್ನ ಇಲ್ಲದೆ, ಇರುವುದಕ್ಕೆ ನೆಲೆಯೂ ಇಲ್ಲದೆ ಕಂಗಾಲಾಗಿರುವಾಗ ಈ ವಿಡಿಯೋಗಳನ್ನು, ಫೋಟೋಗಳನ್ನು ವೈರಲ್ ಮಾಡುತ್ತಿದ್ದರು.

ತಾರೆಗಳ ಈ ವರ್ತನೆಯನ್ನು ಕಂಡ ನಿರ್ದೇಶಕ ಕರಣ್ ಜೊಹರ್ ಟ್ವೀಟ್‌ವೊಂದನ್ನು ಹಂಚಿಕೊಳ್ಳುತ್ತಾ, ನಾನೂ ಅಸೂಕ್ಷ್ಮವಾಗಿ ನಡೆದುಕೊಂಡಿರಬಹುದು ಎಂದು ಕ್ಷಮೆಯಾಚಿಸಿದರು. ಬೆನ್ನಲ್ಲೇ ನಿರ್ದೇಶಕಿ ಫಹಾ ಖಾನ್ ಕೂಡ ಖಾರವಾಗಿ ನಟ-ನಟಿಯರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಸಾರ್ವಜನಿಕ ಆರೋಗ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ವರ್ಕ್ಔಟ್‌ಗಳ ವಿಡಿಯೋಗಳನ್ನುಹಂಚಿಕೊಳ್ಳುವುದನ್ನು ನಿಲ್ಲಿಸಿ ಎಂದು ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ. ನೀವೆಲ್ಲರೂ ಸೌಲಭ್ಯವುಳ್ಳವರು, ನಿಮಗೆ ಈ ಜಾಗತಿಕ ಸೋಂಕಿನ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ನಾನು ಬಲ್ಲೆ. ಆದರೆ ಈ ಹೊತ್ತಿನಲ್ಲಿ ಬಹಳಷ್ಟು ಜನರಿಗೆ ಸಂಕಷ್ಟಕಾಲವಾಗಿದೆ. ಹಾಗಾಗಿ ದಯವಿಟ್ಟು ವಿಡಿಯೋಗಳನ್ನು ಹಂಚಿಕೊಳ್ಳುವುದು ನಿಲ್ಲಿಸಿ. ಇಲ್ಲವಾದರೆ ನಾನು ನಿಮ್ಮನ್ನು ಅನ್‌ಫಾಲೋ ಮಾಡಿದರೆ ಬೇಸರ ಮಾಡಿಕೊಳ್ಳಬೇಡಿ’ ಎಂದು ವಿಡಿಯೋ ಹಂಚಿಕೊಂಡಿದ್ದರು.

ಸೋಂಕು ನಿಯಂತ್ರಣದ ದೃಷ್ಟಿಯಿಂದ ಲಾಕ್‌ಡೌನ್ ಅಗತ್ಯವಾಗಿತ್ತು. ಆದರೆ ಸೌಲಭ್ಯವುಳ್ಳವರಿಗೆ ಇದು ಆತಂಕದ ವಿಷಯವಾಗಿರಲಿಲ್ಲ. ಇದನ್ನು ಒಂದು ರಜೆಯಂತೆ ಸಂಭ್ರಮಿಸುವುದಕ್ಕೆ ಅವಕಾಶವಾಗಿ ಒದಗಿಬಂತು. ಮನೆಯಲ್ಲಿ ರುಚಿ ರುಚಿಯಾಗಿ ಮಾಡಿಕೊಂಡು ತಿನ್ನುವುದು, ಕುಟುಂಬದೊಂದಿಗೆ ಆಡುವುದು ತರಹೇವಾರಿಯಾಗಿ ಕಾಲ ಕಳೆಯುವುದಕ್ಕೆ ಅವಕಾಶವೂ ಆಯಿತು. ವೈಯಕ್ತಿಕವಾದ ಈ ಬದುಕನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಅಸೂಕ್ಷ್ಮತೆಯೇ ಅನೇಕರಲ್ಲಿ ಆಕ್ರೋಶಕ್ಕೂ ಕಾರಣವಾಯಿತು. ಬೀದಿಯಲ್ಲಿ ಮನೆಯೂ ಇಲ್ಲದೆ, ತಿನ್ನುವುದಕ್ಕೆ ಅನ್ನವೂ ಇಲ್ಲದೆ ಅನಿಶ್ಚಿತತೆಯಲ್ಲಿರುವ ಲಕ್ಷಾಂತರ ಜನರ ಇರುವಾಗ, ಸಿರಿತನದ ಅಮಲಿನಲ್ಲಿರುವ ಜನ ಮೃಷ್ಟಾನ್ನದ ಕತೆಗಳನ್ನು ಹಂಚಿಕೊಳ್ಳುವುದು ಯಾವ ರೀತಿಯ ಮನುಷ್ಯತ್ವವಾಗಬಹುದು?

ಎಲ್ಟನ್ ಜಾನ್‌ನಂತಹ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಲೈವ್ ಕಾನ್ಸರ್ಟ್ಗಳನ್ನು ನಡೆಸಿ, ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾದ ಉದಾಹರಣೆಗಳು ಇವರಾರಿಗೂ ಕಾಣದೇ ಹೋಗಿದ್ದು ಅಚ್ಚರಿ!

ಲಾಕ್‌ಡೌನ್‌ಅನ್ನು ಮುಕ್ತವಾಗಿ ಸ್ವಾಗತಿಸಿದ ಈ ಮಂದಿ ಇದರಿಂದ ಯಾರಿಗೆ ಅನಾನುಕೂಲವಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿಲ್ಲವೇನೊ! ಸೋಂಕು ನಿಯಂತ್ರಿಸುವುದಕ್ಕೆ ತಮ್ಮ ಉದ್ಯೋಗ, ಉಳಿಸಿಕೊಂಡಿದ್ದ ಹಣ, ತಮ್ಮ ಘನತೆ, ಆರೋಗ್ಯ, ಸಾಮಾಜಿಕ ಭದ್ರತೆ ಎಲ್ಲವನ್ನೂ ತ್ಯಾಗ ಮಾಡಬೇಕಾಗಿ ಬಂದದ್ದು ಬಡ ಜನರಿಗೆ. ಬದುಕು ಅಸಹನೀಯವಾಗಿದ್ದ ಕಾಲದಲ್ಲಿ ಪೊಲೀಸರಿಂದ ಒದೆ ತಿಂದಿದ್ದು, ಇದೇ ದನಿ ಎತ್ತಲಾಗದ ಜನ. ಇವರ ನೆರವಿಗೆ ನಿಲ್ಲಲಾಗದಿದ್ದರೂ, ಇವರ ಕಷ್ಟಕ್ಕೆ ನೆರವಾಗದಿದ್ದರೂ, ಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸದೇ ಹೋಗಿದ್ದು, ಈ ಕಾಲದ ದುರಂತ!


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...