Homeಮುಖಪುಟಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು...

ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು…

- Advertisement -
- Advertisement -

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅನುಸರಿಸಲಾದ ಲಾಕ್‌ಡೌನ್ ಇಡೀ ಜಗತ್ತನ್ನು ಸ್ತಬ್ದಗೊಳಿಸಿದೆ. ಇಂಥ ಸಂದರ್ಭವನ್ನು ಆರ್ಥಿಕವಾಗಿ ಸುಸ್ಥಿರವಾಗಿರುವ ಕುಟುಂಬಗಳು ಸಣ್ಣ ಅನಿಸ್ಚಿತತೆಯಲ್ಲೇ ಕಳೆಯುತ್ತಿವೆ. ಆದರೆ ಅಂದೇ ದುಡಿದು ಬದುಕುವ ಜನರ ಜೀವನ ಅತಂತ್ರವಾಗಿದೆ! ಈ ಹೊತ್ತಿನಲ್ಲಿ ಅವರಿಗೆ ನೆರವಾಗುವ ಮೂಲಕ ಧೈರ್ಯ ತುಂಬಾ ಬೇಕಾಗಿತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಉಳ್ಳವರ ಸಂವೇದನಾರಹಿತ ವರ್ತನೆ ಈ ದೇಶದ ಶತಮಾನಗಳ ತಾರತಮ್ಯವನ್ನು ಸ್ಪಷ್ಟವಾಗಿ ಎತ್ತಿ ಹಿಡಿಯಿತು.

ಜನಪ್ರಿಯ ಹಾಸ್ಯ ಕಲಾವಿದ ವರುಣ್ ಗ್ರೋವರ್ ಇತ್ತೀಚೆಗೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವೈಯಕ್ತಿಕ ಅನುಭವವೊಂದನ್ನು ಹಂಚಿಕೊಂಡರು. ಲಾಕ್‌ಡೌನ್ ಸಂದರ್ಭದಲ್ಲಿ ತರಕಾರಿಕೊಳ್ಳುವಾಗ ತಮ್ಮ ಮುಂದೆ ನಿಂತಿದ್ದ ಸ್ಥಿತಿವಂತ ದಂಪತಿಗಳು 315 ರೂ.ಗಳಿಗೆ ತರಕಾರಿ ಕೊಂಡು, ವ್ಯಾಪಾರಿಗೆ 300 ಕೊಟ್ಟು, ‘ಅಷ್ಟೇ ಅಷ್ಟೇ’ ಎಂದು ಕೈಯಾಡಿಸಿ ಹೊರಟರಂತೆ. ತರಕಾರಿ ರೇಟು ಹೆಚ್ಚಿರದೇ ಇದ್ದರೂ, ಅವರು ಚೌಕಾಸಿ ಮಾಡಿದ ರೀತಿ ಬೇಸರ ಹುಟ್ಟಿಸಿತೆಂದು ಗ್ರೋವರ್ ಬರೆದುಕೊಂಡಿದ್ದರು. ಕಡೆಗೂ ವ್ಯಾಪಾರಿ ಪಟ್ಟು ಬಿಡದೇ ಇದ್ದುದಕ್ಕೆ ಬೈದುಕೊಂಡೆ 10 ರೂ. ಕೊಟ್ಟು ಹೋದರಂತೆ! ಅಂದರೆ ಇನ್ನೂ 5 ರೂ.ಗಳನ್ನು ಕೊಡದೆ ಹೋದರು!

ಇದೇ ಖರೀದಿಯನ್ನು ಅಮೆಜಾನ್, ಬಿಗ್‌ಬ್ಯಾಸ್ಕೆಟ್ ಮೂಲಕ ಮಾಡಿದ್ದರೆ, ಹೀಗೆ ಚೌಕಾಸಿ ಮಾಡುತ್ತಿದ್ದರೆ ಎಂಬ ಪ್ರಶ್ನೆ ಟ್ವೀಟ್ ಓದಿವರೆಲ್ಲಾ ಕೇಳಿದ್ದರು.

ಲಾಕ್‌ಡೌನ್ ಎಷ್ಟೋ ಜನರ ಬದುಕನ್ನು ಸವಾಲಿಗೆ ಒಡ್ಡಿಕೊಳ್ಳುವಂತೆ ಮಾಡಿದೆ. ಅಂತಹ ಸವಾಲಿಗೆ ಮುಖಮಾಡಿ ವ್ಯಾಪಾರಿ ಮಾಡುತ್ತಿರುವ ಸಾಮಾನ್ಯ ತರಕಾರಿ ವ್ಯಾಪಾರಿಗೆ ಇಂತಹ ಸಂಕಷ್ಟದ ಕಾಲದಲ್ಲಿ ಐದು ರೂ ಕೊಡದೇ ಹೋದದ್ದು, ಕೇವಲ ಹಣದ ವಿಷಯವಷ್ಟೇ ಅಲ್ಲ, ನಮ್ಮೊಳಗೇ ಸತ್ತು ಹೋಗಿರುವ ಸಂವೇದನೆ, ವಿವೇಚನೆ ಎಂಬ ಗುಣಗಳ ಕೊರತೆಯ ಸೂಚಕ. ತರಕಾರಿ ಕೊಂಡವರಿಗೆ ಹಣದ ಕೊರತೆಯೇನು ಇರಲಿಲ್ಲ. ಚೌಕಾಸಿ ಮಾಡಿ ಉಳಿಸಿದ್ದೂ ದೊಡ್ಡ ಮೊತ್ತವೂ ಅಲ್ಲ. ಆದರೆ ಮಾರುವ ಸಾಮಾನ್ಯನ ಬಗ್ಗೆ ಇದ್ದ ಉಪೇಕ್ಷೆಯ, ಸಂವೇದನೆಗಳಿಲ್ಲದ ಮನಸ್ಥಿತಿ.

ವರುಣ್‌ಗೆ ಸಿಕ್ಕ ಸ್ಥಿತಿವಂತ ದಂಪತಿಯಂತೇ, ಸಾರ್ವಜನಿಕ ಜೀವನದಲ್ಲಿರುವ, ತಮ್ಮ ಪ್ರತಿಭೆಗಾಗಿ ಮೆಚ್ಚುಗೆಗೆ ಪಾತ್ರರಾದ, ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಜನರ ಅಸೂಕ್ಷ್ಮ ವರ್ತನೆಯನ್ನೂ ಈ ಲಾಕ್‌ಡೌನ್ ಅನಾವರಣ ಮಾಡಿತು.

ಇವರೆಲ್ಲರೂ ದಿನವೂ ತಮ್ಮನ್ನು ಮೆಚ್ಚುವ ಜನರ ನಡುವೆ ಪ್ರತಿ ದಿನ ಒಡನಾಡುವವರು. ಯಾವುದೋ ಪಾರ್ಟಿ, ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಲ್ಲಿನ ಕ್ಷಣಗಳನ್ನು ವಿಡಿಯೋ, ಫೋಟೋ ರೂಪದಲ್ಲಿ ಹಂಚಿಕೊಳ್ಳುವುದು, ತಮ್ಮ ವೈಭವದ ಉಡುಗೆ ತೊಡುಗೆಗಳ ಬಗ್ಗೆ ಮಾತನಾಡುವುದು, ಚೆಂದದ, ವೈಭವದ ಬದುಕನ್ನೇ ಪ್ರದರ್ಶಿಸುತ್ತಾ ಇರುವುದು ಪ್ರತಿ ನಿತ್ಯದ ವಿಧಿ.

ಇವರ ಪಾಲಿಗೆ ಈ ಲಾಕ್‌ಡೌನ್ ಒಂದು ರೀತಿಯ ಬಂಧನವಾಗಿತ್ತು. ಆದರೆ ಸೋಷಿಯಲ್ ಮೀಡಿಯಾ ಇಂಥವರ ಪಾಲಿಗೆ ಅದೃಷ್ಟದ ಕಿಟಕಿಯಾಗಿದೆ. ಹಾಗಾಗಿ ಈ ಅವಧಿಯಲ್ಲಿ ತಮ್ಮ ಖಾಸಗಿಯಾದ ಬದುಕಿನ, ತಾವು ಹಿಂದೆಂದೂ ಹಂಚಿಕೊಳ್ಳದ ಕ್ಷಣಗಳನ್ನು ಅಭಿಮಾನಿಗಳ ಮುಂದೆ ಅನಾವರಣ ಮಾಡಲಾರಂಭಿಸಿದರು. ಯಾವ ಕ್ಷಣಗಳು!? ಪಾತ್ರೆ ತೊಳೆಯುವುದು, ಕಸ ಹೊಡೆಯುವುದು, ತಮ್ಮ ದೇಹ ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವರ್ಕ್ಔಟ್ ಮಾಡುವುದು ಇಂಥದ್ದೇ ವಿಡಿಯೋಗಳು ಮತ್ತು ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಟ್ವಿಟರ್, ಫೇಸ್‌ಬುಕ್‌ಗಳಲ್ಲಿ ಹಂಚಿಕೊಳ್ಳುತ್ತಾ, ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಕರೀನಾ ಕಪೂರ್ ಅಡುಗೆ ಮಾಡಿ ತಿಂದಿದ್ದು, ಮಲೈಕಾ ಅರೋರಾ ಬೇಸನ್ ಉಂಡೆ ಮಾಡಿದ್ದು, ವಿಕ್ಕಿ ಕೌಶಲ್ ಫ್ಯಾನ್ ಕ್ಲೀನ್ ಮಾಡಿದ್ದು, ಇವೆಲ್ಲವೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡವು!

ಕೇವಲ ಸಿನಿಮಾ ತಾರೆಗಳಷ್ಟೇ ಅಲ್ಲ, ಸ್ಥಿತಿವಂತ, ಸೌಲಭ್ಯವುಳ್ಳ ಬಹಳಷ್ಟು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿರುವ ಗಣ್ಯರು ತಮ್ಮ ಐಷಾರಾಮದ, ಆತಂಕ ರಹಿತ ಬದುಕಿನ ಕ್ಷಣಗಳನ್ನು ಹಂಚಿಕೊಂಡರು. ಸಂವೇದನೆ ಇರುವ ಯಾವುದೇ ವ್ಯಕ್ತಿ ಇಂಥ ಹೊತ್ತಲ್ಲಿ ಸಂಭ್ರಮವನ್ನು ಹಂಚಿಕೊಳ್ಳುವುದಿಲ್ಲ ಎಂಬ ಟೀಕೆಯೂ ವ್ಯಕ್ತವಾಯಿತು.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಜನರ ಬದುಕು ಅಂತ್ರವಾಗಿದೆ. ತಿನ್ನುವುದಕ್ಕೆ ಅನ್ನ ಇಲ್ಲದೆ, ಇರುವುದಕ್ಕೆ ನೆಲೆಯೂ ಇಲ್ಲದೆ ಕಂಗಾಲಾಗಿರುವಾಗ ಈ ವಿಡಿಯೋಗಳನ್ನು, ಫೋಟೋಗಳನ್ನು ವೈರಲ್ ಮಾಡುತ್ತಿದ್ದರು.

ತಾರೆಗಳ ಈ ವರ್ತನೆಯನ್ನು ಕಂಡ ನಿರ್ದೇಶಕ ಕರಣ್ ಜೊಹರ್ ಟ್ವೀಟ್‌ವೊಂದನ್ನು ಹಂಚಿಕೊಳ್ಳುತ್ತಾ, ನಾನೂ ಅಸೂಕ್ಷ್ಮವಾಗಿ ನಡೆದುಕೊಂಡಿರಬಹುದು ಎಂದು ಕ್ಷಮೆಯಾಚಿಸಿದರು. ಬೆನ್ನಲ್ಲೇ ನಿರ್ದೇಶಕಿ ಫಹಾ ಖಾನ್ ಕೂಡ ಖಾರವಾಗಿ ನಟ-ನಟಿಯರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಸಾರ್ವಜನಿಕ ಆರೋಗ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ವರ್ಕ್ಔಟ್‌ಗಳ ವಿಡಿಯೋಗಳನ್ನುಹಂಚಿಕೊಳ್ಳುವುದನ್ನು ನಿಲ್ಲಿಸಿ ಎಂದು ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ. ನೀವೆಲ್ಲರೂ ಸೌಲಭ್ಯವುಳ್ಳವರು, ನಿಮಗೆ ಈ ಜಾಗತಿಕ ಸೋಂಕಿನ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ನಾನು ಬಲ್ಲೆ. ಆದರೆ ಈ ಹೊತ್ತಿನಲ್ಲಿ ಬಹಳಷ್ಟು ಜನರಿಗೆ ಸಂಕಷ್ಟಕಾಲವಾಗಿದೆ. ಹಾಗಾಗಿ ದಯವಿಟ್ಟು ವಿಡಿಯೋಗಳನ್ನು ಹಂಚಿಕೊಳ್ಳುವುದು ನಿಲ್ಲಿಸಿ. ಇಲ್ಲವಾದರೆ ನಾನು ನಿಮ್ಮನ್ನು ಅನ್‌ಫಾಲೋ ಮಾಡಿದರೆ ಬೇಸರ ಮಾಡಿಕೊಳ್ಳಬೇಡಿ’ ಎಂದು ವಿಡಿಯೋ ಹಂಚಿಕೊಂಡಿದ್ದರು.

ಸೋಂಕು ನಿಯಂತ್ರಣದ ದೃಷ್ಟಿಯಿಂದ ಲಾಕ್‌ಡೌನ್ ಅಗತ್ಯವಾಗಿತ್ತು. ಆದರೆ ಸೌಲಭ್ಯವುಳ್ಳವರಿಗೆ ಇದು ಆತಂಕದ ವಿಷಯವಾಗಿರಲಿಲ್ಲ. ಇದನ್ನು ಒಂದು ರಜೆಯಂತೆ ಸಂಭ್ರಮಿಸುವುದಕ್ಕೆ ಅವಕಾಶವಾಗಿ ಒದಗಿಬಂತು. ಮನೆಯಲ್ಲಿ ರುಚಿ ರುಚಿಯಾಗಿ ಮಾಡಿಕೊಂಡು ತಿನ್ನುವುದು, ಕುಟುಂಬದೊಂದಿಗೆ ಆಡುವುದು ತರಹೇವಾರಿಯಾಗಿ ಕಾಲ ಕಳೆಯುವುದಕ್ಕೆ ಅವಕಾಶವೂ ಆಯಿತು. ವೈಯಕ್ತಿಕವಾದ ಈ ಬದುಕನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಅಸೂಕ್ಷ್ಮತೆಯೇ ಅನೇಕರಲ್ಲಿ ಆಕ್ರೋಶಕ್ಕೂ ಕಾರಣವಾಯಿತು. ಬೀದಿಯಲ್ಲಿ ಮನೆಯೂ ಇಲ್ಲದೆ, ತಿನ್ನುವುದಕ್ಕೆ ಅನ್ನವೂ ಇಲ್ಲದೆ ಅನಿಶ್ಚಿತತೆಯಲ್ಲಿರುವ ಲಕ್ಷಾಂತರ ಜನರ ಇರುವಾಗ, ಸಿರಿತನದ ಅಮಲಿನಲ್ಲಿರುವ ಜನ ಮೃಷ್ಟಾನ್ನದ ಕತೆಗಳನ್ನು ಹಂಚಿಕೊಳ್ಳುವುದು ಯಾವ ರೀತಿಯ ಮನುಷ್ಯತ್ವವಾಗಬಹುದು?

ಎಲ್ಟನ್ ಜಾನ್‌ನಂತಹ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಲೈವ್ ಕಾನ್ಸರ್ಟ್ಗಳನ್ನು ನಡೆಸಿ, ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾದ ಉದಾಹರಣೆಗಳು ಇವರಾರಿಗೂ ಕಾಣದೇ ಹೋಗಿದ್ದು ಅಚ್ಚರಿ!

ಲಾಕ್‌ಡೌನ್‌ಅನ್ನು ಮುಕ್ತವಾಗಿ ಸ್ವಾಗತಿಸಿದ ಈ ಮಂದಿ ಇದರಿಂದ ಯಾರಿಗೆ ಅನಾನುಕೂಲವಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿಲ್ಲವೇನೊ! ಸೋಂಕು ನಿಯಂತ್ರಿಸುವುದಕ್ಕೆ ತಮ್ಮ ಉದ್ಯೋಗ, ಉಳಿಸಿಕೊಂಡಿದ್ದ ಹಣ, ತಮ್ಮ ಘನತೆ, ಆರೋಗ್ಯ, ಸಾಮಾಜಿಕ ಭದ್ರತೆ ಎಲ್ಲವನ್ನೂ ತ್ಯಾಗ ಮಾಡಬೇಕಾಗಿ ಬಂದದ್ದು ಬಡ ಜನರಿಗೆ. ಬದುಕು ಅಸಹನೀಯವಾಗಿದ್ದ ಕಾಲದಲ್ಲಿ ಪೊಲೀಸರಿಂದ ಒದೆ ತಿಂದಿದ್ದು, ಇದೇ ದನಿ ಎತ್ತಲಾಗದ ಜನ. ಇವರ ನೆರವಿಗೆ ನಿಲ್ಲಲಾಗದಿದ್ದರೂ, ಇವರ ಕಷ್ಟಕ್ಕೆ ನೆರವಾಗದಿದ್ದರೂ, ಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸದೇ ಹೋಗಿದ್ದು, ಈ ಕಾಲದ ದುರಂತ!


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...