Homeಮುಖಪುಟಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

- Advertisement -
- Advertisement -

ಸಂಸ್ಕೃತ ಭಾಷೆಯನ್ನು ನಿತ್ಯವೂ ಮಾತನಾಡುವುದರಿಂದ ಮನುಷ್ಯನ ನರಮಂಡಲ ವ್ಯವಸ್ಥೆ ವಿಸ್ತರಿಸುವುದು, ಸಕ್ಕರೆ ಕಾಯಿಲೆ ಮತ್ತು ಕೊಬ್ಬನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಬಿಜೆಪಿ ಸಂಸದ ಗಣೇಶ್ ಸಿಂಗ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳ ಮಸೂದೆ-2019ರ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಅಮೆರಿಕಾ ಮೂಲದ ಅಕಾಡೆಮಿಕ್ ಸಂಸ್ಥೆಯೊಂದು ಸಂಶೋಧನೆ ನಡೆಸಿದ್ದು ಇದು ಸಾಬೀತಾಗಿದೆ, ಸಂಸ್ಕೃತ ಭಾಷೆಯನ್ನು ಮಾತನಾಡುವುದರಿಂದ ಸಾಕಷ್ಟು ಲಾಭಗಳಿವೆ ಎಂಬುದನ್ನು ದೃಢೀಕರಿಸಿದೆ ಎಂದು ತಿಳಿಸಿದ್ದಾರೆ.

ಸಂಸ್ಕೃತ ಲಿಪಿಗಳನ್ನುಗಳನ್ನು ಅಳಡಿಸಿ ಕಂಪ್ಯೂಟರ್ ಪ್ರೋಗ್ರಾಮಿಂಗ್ ಮಾಡಬಹುದು. ಅಮೆರಿಕಾದ ನ್ಯಾಷನಲ್ ಏರೋನಾಟಿಕ್ ಅಂಡ್ ಸ್ಪೇಸ್ ಅಡ್ಮಿನಿಷ್ಟ್ರೇಷನ್ ನಾಸಾ ಸಂಸ್ಥೆ ಇದನ್ನು ಪ್ರಯೋಗ ಮಾಡಿದೆ. ಇಸ್ಲಾಮಿಕ್ ಭಾಷೆಯೂ ಸೇರಿದಂತೆ ವಿಶ್ವದ 97ರಷ್ಟು ಭಾಷೆಗಳು ಸಂಸ್ಕೃತದ ಆಧಾರದ ಮೇಲೆಯೇ ರೂಪಿತವಾಗಿವೆ ಎಂದು ಹೇಳಿದರು.

ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳನ್ನು ಮೂರು ಡೀಮ್ಡ್ ವಿಶ್ವವಿದ್ಯಾಲಯಗಳನ್ನಾಗಿ ಬದಲಿಸಿದ್ದು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ನವದೆಹಲಿ, ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ತಿರುಪತಿ ಡೀಮ್ಡ್ ವಿವಿಗಳಾಗಿವೆ ಎಂದಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವ ರಮೇಶ್ ಪೋಕ್ರಿಯಲ್ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲಾ ಬಾಷೆಗಳನ್ನು ಬಲಪಡಿಸಲಿದೆ. ತಮಿಳು, ಹಿಂದಿ, ಕನ್ನಡ ಮತ್ತು ಬಂಗಾಳಿಯೂ ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಸ್ಕೃತ ಪಠ್ಯಗಳಜು ಜ್ಞಾನದ ಖಜಾನೆ. ಅದು ವಿಜ್ಞಾನದಿಂದ ಅರ್ಥಶಾಸ್ತ್ರದವರೆಗೆ ಎಲ್ಲವನ್ನೂ ಒಳಗೊಂಡಿದೆ. ಹೀಗಾಗಿ ಸಂಸ್ಕೃತದ ಪಠ್ಯಗಳನ್ನು ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಸಭೆ ತಿಳಿಸಿದರು.

ಸಂಸ್ಕೃತ ಭಾಷೆಯಿಂದ ಮಧುಮೇಹ ಮತ್ತು ಕೊಬ್ಬನ್ನು ನಿಯಂತ್ರಿಸಬಹುದು ಎಂಬ ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಜನರಲ್ಲಿ ಮೌಢ್ಯ ತುಂಬುವ ಹೇಳಿಕೆಯಾಗಿದ. ದೇಶದ ಆರ್ಥಿಕ ಹಿಂಜರಿತ, ನಿರುದ್ಯೋಗ, ಉದ್ಯೋಗ ಕಡಿತ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಉದ್ದೇಶವಾಗಿದೆ  ಎಂದು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ದೇಶದಾದ್ಯಂತ ಸರ್ಕಾರದ ಎಲ್ಲಾ ಆಸ್ಪತ್ರೆಗಳನ್ನೂ ಸಂಸ್ಕೃತ ವಿದ್ಯಾಲಯಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ನಿರುದ್ಯೋಗಿಗಳಾಗಲಿರುವ ವೈದ್ಯಕೀಯ ಸಿಬ್ಬಂದಿ ಸಂಸ್ಕೃತ ಕಲಿತು ಉಪಾಧ್ಯಾಯರಾಗಬಹುದು” ಎಂದೇನೂ ಗಣೇಶ್ ಸಿಂಗ್ ಹೇಳಿಲ್ಲ.
    ಆದುದರಿಂದ ಗಣೇಶ್ ಸಿಂಗರನ್ನು ಟೀಕಿಸುವುದಕ್ಕೆ ಬದಲಾಗಿ ಇವರನ್ನು ಈ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನಾಗಿಸಲು ನಾವೆಲ್ಲರೂ ಒಕ್ಕೊರಲಿನಿಂದ ಆಗ್ರಹಿಸೋಣ.
    ಬಿ.ಜೆ.ಪಿ.ಯಲ್ಲಿ ಇಂತಹ ಇನ್ನೂ ಎಷ್ಟೋ ಅದ್ಭುತವಾದ ಪ್ರತಿಭೆಗಳು ಎಲೆಮರೆಯ ಕಾಯಿಯಂತೆ ಇವೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...