Homeಮುಖಪುಟಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

- Advertisement -
- Advertisement -

ಸಂಸ್ಕೃತ ಭಾಷೆಯನ್ನು ನಿತ್ಯವೂ ಮಾತನಾಡುವುದರಿಂದ ಮನುಷ್ಯನ ನರಮಂಡಲ ವ್ಯವಸ್ಥೆ ವಿಸ್ತರಿಸುವುದು, ಸಕ್ಕರೆ ಕಾಯಿಲೆ ಮತ್ತು ಕೊಬ್ಬನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಬಿಜೆಪಿ ಸಂಸದ ಗಣೇಶ್ ಸಿಂಗ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳ ಮಸೂದೆ-2019ರ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಅಮೆರಿಕಾ ಮೂಲದ ಅಕಾಡೆಮಿಕ್ ಸಂಸ್ಥೆಯೊಂದು ಸಂಶೋಧನೆ ನಡೆಸಿದ್ದು ಇದು ಸಾಬೀತಾಗಿದೆ, ಸಂಸ್ಕೃತ ಭಾಷೆಯನ್ನು ಮಾತನಾಡುವುದರಿಂದ ಸಾಕಷ್ಟು ಲಾಭಗಳಿವೆ ಎಂಬುದನ್ನು ದೃಢೀಕರಿಸಿದೆ ಎಂದು ತಿಳಿಸಿದ್ದಾರೆ.

ಸಂಸ್ಕೃತ ಲಿಪಿಗಳನ್ನುಗಳನ್ನು ಅಳಡಿಸಿ ಕಂಪ್ಯೂಟರ್ ಪ್ರೋಗ್ರಾಮಿಂಗ್ ಮಾಡಬಹುದು. ಅಮೆರಿಕಾದ ನ್ಯಾಷನಲ್ ಏರೋನಾಟಿಕ್ ಅಂಡ್ ಸ್ಪೇಸ್ ಅಡ್ಮಿನಿಷ್ಟ್ರೇಷನ್ ನಾಸಾ ಸಂಸ್ಥೆ ಇದನ್ನು ಪ್ರಯೋಗ ಮಾಡಿದೆ. ಇಸ್ಲಾಮಿಕ್ ಭಾಷೆಯೂ ಸೇರಿದಂತೆ ವಿಶ್ವದ 97ರಷ್ಟು ಭಾಷೆಗಳು ಸಂಸ್ಕೃತದ ಆಧಾರದ ಮೇಲೆಯೇ ರೂಪಿತವಾಗಿವೆ ಎಂದು ಹೇಳಿದರು.

ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳನ್ನು ಮೂರು ಡೀಮ್ಡ್ ವಿಶ್ವವಿದ್ಯಾಲಯಗಳನ್ನಾಗಿ ಬದಲಿಸಿದ್ದು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ನವದೆಹಲಿ, ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ತಿರುಪತಿ ಡೀಮ್ಡ್ ವಿವಿಗಳಾಗಿವೆ ಎಂದಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವ ರಮೇಶ್ ಪೋಕ್ರಿಯಲ್ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲಾ ಬಾಷೆಗಳನ್ನು ಬಲಪಡಿಸಲಿದೆ. ತಮಿಳು, ಹಿಂದಿ, ಕನ್ನಡ ಮತ್ತು ಬಂಗಾಳಿಯೂ ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಸ್ಕೃತ ಪಠ್ಯಗಳಜು ಜ್ಞಾನದ ಖಜಾನೆ. ಅದು ವಿಜ್ಞಾನದಿಂದ ಅರ್ಥಶಾಸ್ತ್ರದವರೆಗೆ ಎಲ್ಲವನ್ನೂ ಒಳಗೊಂಡಿದೆ. ಹೀಗಾಗಿ ಸಂಸ್ಕೃತದ ಪಠ್ಯಗಳನ್ನು ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಸಭೆ ತಿಳಿಸಿದರು.

ಸಂಸ್ಕೃತ ಭಾಷೆಯಿಂದ ಮಧುಮೇಹ ಮತ್ತು ಕೊಬ್ಬನ್ನು ನಿಯಂತ್ರಿಸಬಹುದು ಎಂಬ ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಜನರಲ್ಲಿ ಮೌಢ್ಯ ತುಂಬುವ ಹೇಳಿಕೆಯಾಗಿದ. ದೇಶದ ಆರ್ಥಿಕ ಹಿಂಜರಿತ, ನಿರುದ್ಯೋಗ, ಉದ್ಯೋಗ ಕಡಿತ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಉದ್ದೇಶವಾಗಿದೆ  ಎಂದು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ದೇಶದಾದ್ಯಂತ ಸರ್ಕಾರದ ಎಲ್ಲಾ ಆಸ್ಪತ್ರೆಗಳನ್ನೂ ಸಂಸ್ಕೃತ ವಿದ್ಯಾಲಯಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ನಿರುದ್ಯೋಗಿಗಳಾಗಲಿರುವ ವೈದ್ಯಕೀಯ ಸಿಬ್ಬಂದಿ ಸಂಸ್ಕೃತ ಕಲಿತು ಉಪಾಧ್ಯಾಯರಾಗಬಹುದು” ಎಂದೇನೂ ಗಣೇಶ್ ಸಿಂಗ್ ಹೇಳಿಲ್ಲ.
    ಆದುದರಿಂದ ಗಣೇಶ್ ಸಿಂಗರನ್ನು ಟೀಕಿಸುವುದಕ್ಕೆ ಬದಲಾಗಿ ಇವರನ್ನು ಈ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನಾಗಿಸಲು ನಾವೆಲ್ಲರೂ ಒಕ್ಕೊರಲಿನಿಂದ ಆಗ್ರಹಿಸೋಣ.
    ಬಿ.ಜೆ.ಪಿ.ಯಲ್ಲಿ ಇಂತಹ ಇನ್ನೂ ಎಷ್ಟೋ ಅದ್ಭುತವಾದ ಪ್ರತಿಭೆಗಳು ಎಲೆಮರೆಯ ಕಾಯಿಯಂತೆ ಇವೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...