Homeಮುಖಪುಟಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

- Advertisement -
- Advertisement -

ಸಂಸ್ಕೃತ ಭಾಷೆಯನ್ನು ನಿತ್ಯವೂ ಮಾತನಾಡುವುದರಿಂದ ಮನುಷ್ಯನ ನರಮಂಡಲ ವ್ಯವಸ್ಥೆ ವಿಸ್ತರಿಸುವುದು, ಸಕ್ಕರೆ ಕಾಯಿಲೆ ಮತ್ತು ಕೊಬ್ಬನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಬಿಜೆಪಿ ಸಂಸದ ಗಣೇಶ್ ಸಿಂಗ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳ ಮಸೂದೆ-2019ರ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಅಮೆರಿಕಾ ಮೂಲದ ಅಕಾಡೆಮಿಕ್ ಸಂಸ್ಥೆಯೊಂದು ಸಂಶೋಧನೆ ನಡೆಸಿದ್ದು ಇದು ಸಾಬೀತಾಗಿದೆ, ಸಂಸ್ಕೃತ ಭಾಷೆಯನ್ನು ಮಾತನಾಡುವುದರಿಂದ ಸಾಕಷ್ಟು ಲಾಭಗಳಿವೆ ಎಂಬುದನ್ನು ದೃಢೀಕರಿಸಿದೆ ಎಂದು ತಿಳಿಸಿದ್ದಾರೆ.

ಸಂಸ್ಕೃತ ಲಿಪಿಗಳನ್ನುಗಳನ್ನು ಅಳಡಿಸಿ ಕಂಪ್ಯೂಟರ್ ಪ್ರೋಗ್ರಾಮಿಂಗ್ ಮಾಡಬಹುದು. ಅಮೆರಿಕಾದ ನ್ಯಾಷನಲ್ ಏರೋನಾಟಿಕ್ ಅಂಡ್ ಸ್ಪೇಸ್ ಅಡ್ಮಿನಿಷ್ಟ್ರೇಷನ್ ನಾಸಾ ಸಂಸ್ಥೆ ಇದನ್ನು ಪ್ರಯೋಗ ಮಾಡಿದೆ. ಇಸ್ಲಾಮಿಕ್ ಭಾಷೆಯೂ ಸೇರಿದಂತೆ ವಿಶ್ವದ 97ರಷ್ಟು ಭಾಷೆಗಳು ಸಂಸ್ಕೃತದ ಆಧಾರದ ಮೇಲೆಯೇ ರೂಪಿತವಾಗಿವೆ ಎಂದು ಹೇಳಿದರು.

ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳನ್ನು ಮೂರು ಡೀಮ್ಡ್ ವಿಶ್ವವಿದ್ಯಾಲಯಗಳನ್ನಾಗಿ ಬದಲಿಸಿದ್ದು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ನವದೆಹಲಿ, ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ತಿರುಪತಿ ಡೀಮ್ಡ್ ವಿವಿಗಳಾಗಿವೆ ಎಂದಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವ ರಮೇಶ್ ಪೋಕ್ರಿಯಲ್ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲಾ ಬಾಷೆಗಳನ್ನು ಬಲಪಡಿಸಲಿದೆ. ತಮಿಳು, ಹಿಂದಿ, ಕನ್ನಡ ಮತ್ತು ಬಂಗಾಳಿಯೂ ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಸ್ಕೃತ ಪಠ್ಯಗಳಜು ಜ್ಞಾನದ ಖಜಾನೆ. ಅದು ವಿಜ್ಞಾನದಿಂದ ಅರ್ಥಶಾಸ್ತ್ರದವರೆಗೆ ಎಲ್ಲವನ್ನೂ ಒಳಗೊಂಡಿದೆ. ಹೀಗಾಗಿ ಸಂಸ್ಕೃತದ ಪಠ್ಯಗಳನ್ನು ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಸಭೆ ತಿಳಿಸಿದರು.

ಸಂಸ್ಕೃತ ಭಾಷೆಯಿಂದ ಮಧುಮೇಹ ಮತ್ತು ಕೊಬ್ಬನ್ನು ನಿಯಂತ್ರಿಸಬಹುದು ಎಂಬ ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಜನರಲ್ಲಿ ಮೌಢ್ಯ ತುಂಬುವ ಹೇಳಿಕೆಯಾಗಿದ. ದೇಶದ ಆರ್ಥಿಕ ಹಿಂಜರಿತ, ನಿರುದ್ಯೋಗ, ಉದ್ಯೋಗ ಕಡಿತ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಉದ್ದೇಶವಾಗಿದೆ  ಎಂದು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ದೇಶದಾದ್ಯಂತ ಸರ್ಕಾರದ ಎಲ್ಲಾ ಆಸ್ಪತ್ರೆಗಳನ್ನೂ ಸಂಸ್ಕೃತ ವಿದ್ಯಾಲಯಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ನಿರುದ್ಯೋಗಿಗಳಾಗಲಿರುವ ವೈದ್ಯಕೀಯ ಸಿಬ್ಬಂದಿ ಸಂಸ್ಕೃತ ಕಲಿತು ಉಪಾಧ್ಯಾಯರಾಗಬಹುದು” ಎಂದೇನೂ ಗಣೇಶ್ ಸಿಂಗ್ ಹೇಳಿಲ್ಲ.
    ಆದುದರಿಂದ ಗಣೇಶ್ ಸಿಂಗರನ್ನು ಟೀಕಿಸುವುದಕ್ಕೆ ಬದಲಾಗಿ ಇವರನ್ನು ಈ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನಾಗಿಸಲು ನಾವೆಲ್ಲರೂ ಒಕ್ಕೊರಲಿನಿಂದ ಆಗ್ರಹಿಸೋಣ.
    ಬಿ.ಜೆ.ಪಿ.ಯಲ್ಲಿ ಇಂತಹ ಇನ್ನೂ ಎಷ್ಟೋ ಅದ್ಭುತವಾದ ಪ್ರತಿಭೆಗಳು ಎಲೆಮರೆಯ ಕಾಯಿಯಂತೆ ಇವೆ.

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...