Homeಮುಖಪುಟಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

- Advertisement -
- Advertisement -

ಸಂಸ್ಕೃತ ಭಾಷೆಯನ್ನು ನಿತ್ಯವೂ ಮಾತನಾಡುವುದರಿಂದ ಮನುಷ್ಯನ ನರಮಂಡಲ ವ್ಯವಸ್ಥೆ ವಿಸ್ತರಿಸುವುದು, ಸಕ್ಕರೆ ಕಾಯಿಲೆ ಮತ್ತು ಕೊಬ್ಬನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಬಿಜೆಪಿ ಸಂಸದ ಗಣೇಶ್ ಸಿಂಗ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳ ಮಸೂದೆ-2019ರ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಅಮೆರಿಕಾ ಮೂಲದ ಅಕಾಡೆಮಿಕ್ ಸಂಸ್ಥೆಯೊಂದು ಸಂಶೋಧನೆ ನಡೆಸಿದ್ದು ಇದು ಸಾಬೀತಾಗಿದೆ, ಸಂಸ್ಕೃತ ಭಾಷೆಯನ್ನು ಮಾತನಾಡುವುದರಿಂದ ಸಾಕಷ್ಟು ಲಾಭಗಳಿವೆ ಎಂಬುದನ್ನು ದೃಢೀಕರಿಸಿದೆ ಎಂದು ತಿಳಿಸಿದ್ದಾರೆ.

ಸಂಸ್ಕೃತ ಲಿಪಿಗಳನ್ನುಗಳನ್ನು ಅಳಡಿಸಿ ಕಂಪ್ಯೂಟರ್ ಪ್ರೋಗ್ರಾಮಿಂಗ್ ಮಾಡಬಹುದು. ಅಮೆರಿಕಾದ ನ್ಯಾಷನಲ್ ಏರೋನಾಟಿಕ್ ಅಂಡ್ ಸ್ಪೇಸ್ ಅಡ್ಮಿನಿಷ್ಟ್ರೇಷನ್ ನಾಸಾ ಸಂಸ್ಥೆ ಇದನ್ನು ಪ್ರಯೋಗ ಮಾಡಿದೆ. ಇಸ್ಲಾಮಿಕ್ ಭಾಷೆಯೂ ಸೇರಿದಂತೆ ವಿಶ್ವದ 97ರಷ್ಟು ಭಾಷೆಗಳು ಸಂಸ್ಕೃತದ ಆಧಾರದ ಮೇಲೆಯೇ ರೂಪಿತವಾಗಿವೆ ಎಂದು ಹೇಳಿದರು.

ಸಂಸ್ಕೃತ ಕೇಂದ್ರ ವಿಶ್ವವಿದ್ಯಾಲಯಗಳನ್ನು ಮೂರು ಡೀಮ್ಡ್ ವಿಶ್ವವಿದ್ಯಾಲಯಗಳನ್ನಾಗಿ ಬದಲಿಸಿದ್ದು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ನವದೆಹಲಿ, ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ತಿರುಪತಿ ಡೀಮ್ಡ್ ವಿವಿಗಳಾಗಿವೆ ಎಂದಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವ ರಮೇಶ್ ಪೋಕ್ರಿಯಲ್ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲಾ ಬಾಷೆಗಳನ್ನು ಬಲಪಡಿಸಲಿದೆ. ತಮಿಳು, ಹಿಂದಿ, ಕನ್ನಡ ಮತ್ತು ಬಂಗಾಳಿಯೂ ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಸ್ಕೃತ ಪಠ್ಯಗಳಜು ಜ್ಞಾನದ ಖಜಾನೆ. ಅದು ವಿಜ್ಞಾನದಿಂದ ಅರ್ಥಶಾಸ್ತ್ರದವರೆಗೆ ಎಲ್ಲವನ್ನೂ ಒಳಗೊಂಡಿದೆ. ಹೀಗಾಗಿ ಸಂಸ್ಕೃತದ ಪಠ್ಯಗಳನ್ನು ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಸಭೆ ತಿಳಿಸಿದರು.

ಸಂಸ್ಕೃತ ಭಾಷೆಯಿಂದ ಮಧುಮೇಹ ಮತ್ತು ಕೊಬ್ಬನ್ನು ನಿಯಂತ್ರಿಸಬಹುದು ಎಂಬ ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಜನರಲ್ಲಿ ಮೌಢ್ಯ ತುಂಬುವ ಹೇಳಿಕೆಯಾಗಿದ. ದೇಶದ ಆರ್ಥಿಕ ಹಿಂಜರಿತ, ನಿರುದ್ಯೋಗ, ಉದ್ಯೋಗ ಕಡಿತ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಉದ್ದೇಶವಾಗಿದೆ  ಎಂದು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ದೇಶದಾದ್ಯಂತ ಸರ್ಕಾರದ ಎಲ್ಲಾ ಆಸ್ಪತ್ರೆಗಳನ್ನೂ ಸಂಸ್ಕೃತ ವಿದ್ಯಾಲಯಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ನಿರುದ್ಯೋಗಿಗಳಾಗಲಿರುವ ವೈದ್ಯಕೀಯ ಸಿಬ್ಬಂದಿ ಸಂಸ್ಕೃತ ಕಲಿತು ಉಪಾಧ್ಯಾಯರಾಗಬಹುದು” ಎಂದೇನೂ ಗಣೇಶ್ ಸಿಂಗ್ ಹೇಳಿಲ್ಲ.
    ಆದುದರಿಂದ ಗಣೇಶ್ ಸಿಂಗರನ್ನು ಟೀಕಿಸುವುದಕ್ಕೆ ಬದಲಾಗಿ ಇವರನ್ನು ಈ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನಾಗಿಸಲು ನಾವೆಲ್ಲರೂ ಒಕ್ಕೊರಲಿನಿಂದ ಆಗ್ರಹಿಸೋಣ.
    ಬಿ.ಜೆ.ಪಿ.ಯಲ್ಲಿ ಇಂತಹ ಇನ್ನೂ ಎಷ್ಟೋ ಅದ್ಭುತವಾದ ಪ್ರತಿಭೆಗಳು ಎಲೆಮರೆಯ ಕಾಯಿಯಂತೆ ಇವೆ.

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...