Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...