Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...