Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...