Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...