Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....