Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...