HomeUncategorizedವಿಶೇಷ ಲೇಖನ: ಒಳಮೀಸಲಾತಿ-ಸರ್ಕಾರಕ್ಕೆ ನುಂಗಲಾರದ ತುತ್ತಾದ ಪರಿಶಿಷ್ಟರು.

ವಿಶೇಷ ಲೇಖನ: ಒಳಮೀಸಲಾತಿ-ಸರ್ಕಾರಕ್ಕೆ ನುಂಗಲಾರದ ತುತ್ತಾದ ಪರಿಶಿಷ್ಟರು.

- Advertisement -
- Advertisement -

ಕರ್ನಾಟಕ ಸರ್ಕಾರವು ಆಗಸ್ಟ್‌ 19ರಂದು ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಮಾಡುವ ಐತಿಹಾಸಿಕ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿತ್ತು. ಆದರೆ ಜಸ್ಟೀಸ್‌ ನಾಗಮನೋಹನ್‌ ದಾಸ್‌ ಏಕಸದಸ್ಯ ಆಯೋಗ ನೀಡಿದ್ದ ವರದಿಯನ್ನು ಭಾಗಶಃ ಒಪ್ಪಿ ಸಚಿವ ಸಂಪುಟ ತನ್ನ ವಿವೇಚನೆಯನ್ನು ಬಳಸಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ  (ಮಾದಿಗ ಸಂಬಂಧಿತ ಜಾತಿಗಳು), ಪ್ರವರ್ಗ-ಬಿ (ಹೊಲೆಯ ಸಂಬಂಧಿತ ಜಾತಿಗಳು) ಹಾಗೂ ಪ್ರವರ್ಗ-ಸಿ (ಸ್ಪೃಶ್ಯ ಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಹಾಗೂ 49+10 ಅಲೆಮಾರಿ ಮತ್ತು ಅತಿ ಹಿಂದುಳಿದ ಜಾತಿಗಳು) ಎಂದು ವರ್ಗೀಕರಿಸಿ ʼಪ್ರವರ್ಗ-ಎʼ ಗೆ ಶೇ. 6, ʼಪ್ರವರ್ಗ-ಬಿʼಗೆ ಶೇ.6 ಮತ್ತು ʼಪ್ರವರ್ಗ-ಸಿʼಗೆ ಶೇ.5 ಒಳಮೀಸಲಾತಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿತ್ತು. ಕಳೆದ 35 ವರ್ಷಗಳ ಒಳಮೀಸಲಾತಿ ಹೋರಾಟವು ಕೇವಲ ಯಾವುದೇ ಒಂದು ಜಾತಿಗೆ ಒಳಮೀಸಲಾತಿಯನ್ನು ಒತ್ತಾಯಿಸುವ ಹೋರಾಟ ಮಾತ್ರವಾಗಿರದೆ ಪರಿಶಿಷ್ಟ ಜಾತಿಗಳ 101 ಜಾತಿಗಳಿಗೂ ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟವಾಗಿತ್ತು. ಕರ್ನಾಟಕ ಸರ್ಕಾರದ ಒಳಮೀಸಲಾತಿ ವರ್ಗೀಕರಣವು 49 ಅಲೆಮಾರಿ ಸಮುದಾಯಗಳು ಹಾಗೂ 10 ಅತಿ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳಲ್ಲಿಯೇ ಬಲಿಷ್ಟರಾದ ಸ್ಪೃಶ್ಯ ಜಾತಿಗಳ ಪ್ರವರ್ಗ-ಸಿ ಗುಂಪಿಗೆ ಸೇರಿಸಿದ ತೀರ್ಮಾನವು ಸಮಾಜದಲ್ಲಿ ಸರ್ಕಾರದ ತೀರ್ಮಾನದ ವಿರುದ್ದ ಆಕ್ರೋಶ ವ್ಯಕ್ತವಾಯಿತು.

ಆಗಸ್ಟ್‌ 11 ರಿಂದ ಒಳಮೀಸಲಾತಿ ಹೋರಾಟಗಾರರು ಒಳಮೀಸಲಾತಿಯ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವದಿ ಹೋರಾಟ ಆರಂಭಿಸಿತ್ತು. ಸರ್ಕಾರದ ತೀರ್ಮಾನವು ಅಲೆಮಾರಿ ಸಮುದಾಯಗಳಿಗೆ ಆದ ಅನ್ಯಾಯವನ್ನು ಖಂಡಿಸಿ ಅನಿರ್ಧಿಷ್ಟಾವದಿ ಪ್ರತಿಭಟನೆ ಮುಂದುವರೆದಿತ್ತು.

ಅಲೆಮಾರಿಗಳ ಸಮುದಾಯಗಳ ಹೋರಾಟಗಳು.

ಅಲೆಮಾರಿ ಸಮುದಾಯಗಳು ತಮಗೆ ಆದ ಅನ್ಯಾಯಕ್ಕೆ ನ್ಯಾಯವನ್ನು ಆಗ್ರಹಿಸಿ ಹಲವು ರೀತಿಯ ಹೋರಾಟಗಳನ್ನು ಮಾಡಿದವು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸೆಪ್ಟೆಂಬರ್‌ 3 ರಂದು 10 ಸಾವಿರಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹೋರಾಟ ನಡೆಸಿದ್ದವು. ಈ ಹೋರಾಟಕ್ಕೆ ಕರ್ನಾಟಕ ಸರ್ಕಾರದ ಯಾವುದೇ ಪ್ರತಿನಿಧಿಗಳು ಬಂದು ಅಲೆಮಾರಿ ಸಮುದಾಯಗಳ ಅಹವಾಲನ್ನು ಆಲಿಸಲು ಮುಂದಾಗಲಿಲ್ಲ. ಅಲೆಮಾರಿ ಸಮುದಾಯಗಳ ಹೋರಾಟಕ್ಕೆ ವಿರೋಧ ಪಕ್ಷದ ರಾಜಕಾರಣಿಗಳು ಬಂದು ಬೆಂಬಲ ಸೂಚಿಸಿ ಆಗ ನಡೆಯುತ್ತಿದ್ದ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ ಅಧಿವೇಶನಲ್ಲಿ ದ್ವನಿಯೆತ್ತುವುದಾಗಿ ಆಶ್ವಾಸನೆಯಿಟ್ಟಿದ್ದವು. ಆದರೆ ಅಲೆಮಾರಿ ಸಮುದಾಯಗಳಿಗೆ ವಿರೋಧ ಪಕ್ಷಗಳಿಂದಲೂ ನ್ಯಾಯ ಒದಗಿಸಲು ಸಾದ್ಯವಾಗಲಿಲ್ಲ. ಕರ್ನಾಟಕ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅಲೆಮಾರಿ ಸಮುದಾಯಗಳು, ದೇಶದಾದ್ಯಂತ ಸಾಮಾಜಿಕ ನ್ಯಾಯದ ಕುರಿತು ಗಂಭೀರವಾಗಿ ಪ್ರಶ್ನೆಗಳನ್ನೆತ್ತುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಶೋಷಿತ ಸಮುದಾಯಗಳ ವಿರೋದಿ ನಿಲುವನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ಬಳಿ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಗೆ ತೆರಳಿ ಬೃಹತ್‌ ಪ್ರತಿಭಟನೆ ನಡೆಸಿ ಎಐಸಿಸಿ ಕಛೇರಿಗೆ ಮುತ್ತಿಗೆ ಹಾಕಿದ್ದವು.

ಅಲೆಮಾರಿ ಸಮುದಾಯಗಳ ಸಾಮಾಜಿಕ ನ್ಯಾಯದ ಕೂಗಿಗೆ ಸ್ಪಂಧಿಸಿದ ಕಾಂಗ್ರೆಸ್‌ನ ಹೈಕಮಾಂಡ್‌ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರ ಬಳಿ ಅಲೆಮಾರಿ ಸಮುದಾಯಗಳ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚಿಸಿದ್ದವು.

ಹೈಕಮಾಂಡ್‌ ನಿರ್ದೇಶನದಂತೆ ಹಾಗೂ ಕರ್ನಾಟಕದಲ್ಲಿ ಪ್ರಗತಿಪರರು ಹಾಗೂ ಸಾಮಾಜಿಕ ನ್ಯಾಯದ ಪರವಾಗಿರುವ ಹೋರಾಟಗಾರರು, ಚಿಂತಕರು ಹಾಗೂ ಸಾಹಿತಿಗಳ ಒತ್ತಡಕ್ಕೆ ಮಣಿದ ಸರ್ಕಾರ ಅಲೆಮಾರಿ ಸಮುದಾಯಗಳ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

ಒಳಮೀಸಲಾತಿ ಜಾರಿ ಮಾಡಿದರೂ ದಕ್ಕದ ಪ್ರಶಂಸೆ ಹಾಗೂ ನಿಲ್ಲದ ಹೋರಾಟಗಳು.

ಸರ್ವೋಚ್ಚ ನ್ಯಾಯಾಲವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ಆದೇಶ ಹೊರಡಿಸಿ ಒಂದು ವರ್ಷ ಕಳೆದ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಕುರಿತಂತೆ ನಿಲುವನ್ನು ತೆಗೆದುಕೊಳ್ಳಲಾಗಿತ್ತು. ಈ ನಿಲುವು ತೆಗೆದುಕೊಳ್ಳಲೂ ಒಳಮೀಸಲಾತಿ ಹೋರಾಟಗಾರರ ನಿರಂತರ ಹೋರಾಟ ಹಾಗೂ ಒತ್ತಡವೇ ಕಾರಣವಾಗಿತ್ತು.

ಕಳೆದ 35 ವರ್ಷಗಳ ಒಳಮೀಸಲಾತಿ ಬೇಡಿಕೆಯನ್ನು ಪರಿಗಣಿಸಿ ಒಳಮೀಸಲಾತಿ ಜಾರಿ ಮಾಡಿದ್ದರೂ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರಶಂಸೆ ಸಿಗಲಿಲ್ಲ. ಇದಕ್ಕೆ ಕರ್ನಾಟಕ ಸರ್ಕಾರವೇ ಸೃಷ್ಠಿಸಿದ ಗೊಂದಲಗಳು ಹಾಗೂ ವಿಳಂಬ ಧೋರಣೆಯೇ ಕಾರಣ.

ಎಕೆ.ಎಡಿ.ಎಎ ಸಮಸ್ಯೆಯನ್ನು ಮುಂದುವರೆಸಿದ್ದ ಸರ್ಕಾರ.

ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ ಮಾಡಲು ಇದ್ದ ಬಹುದೊಡ್ಡ ತಡೆ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ಜಾತಿಗಳ ಗುಂಪುಗಳು. ಸುಮಾರು 44 ಲಕ್ಷ ಜನರು ಈ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದರಿಂದ ಒಳಮೀಸಲಾತಿ ಜಾರಿಮಾಡಲು ಸಮಸ್ಯೆಯಾಗಿತ್ತು. ಆದರೆ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಎಕೆ. ಎಡಿ. ಎಎ ಜನಸಂಖ್ಯೆಯನ್ನು 4,74,954 ಕ್ಕೆ ಇಳಿಸಿತ್ತು. ಆದರೆ ಈಗಾಗಲೇ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿರುವ ಪರಿಶಿಷ್ಟ ಜಾತಿಗಳ ಸುಮಾರು 44 ಲಕ್ಷ. ಇವರಿಗೆ ತಮ್ಮ ಮೂಲ ಜಾತಿ ಪ್ರಮಾಣ ಪತ್ರವನ್ನು ನೀಡಲು ಕರ್ನಾಟಕ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳ ಮೇಲೆ ಶಂಕೆ ವ್ಯಕ್ತವಾಗಿತ್ತು. ಇದೇ ಸಮಯದಲ್ಲಿ ಕೆಲವು ಸಾಮಾಜಿಕ ನ್ಯಾಯದ ವಿರೋಧಿಗಳು “ಎಕೆ, ಎಡಿ, ಎಎ ಹೆಸರಿನಲ್ಲಿ ಪ್ರಮಾಣ ಪತ್ರ ಹೊಂದಿರುವವರು ಪ್ರವರ್ಗ-ಎ ಯಲ್ಲಿ ಮೀಸಲಾತಿಯನ್ನು ನುಗ್ಗಿ ಪಡೆದುಕೊಳ್ಳಿ” ಎಂಬ ಸಂಚಿನ ಮಾತುಗಳೂ ಒಳಮೀಸಲಾತಿ ಹೋರಾಟಗಾರರಲ್ಲಿನ ಸಂಶಯವನ್ನು ಇನ್ನಷ್ಟು ಹೆಚ್ಚಿಸಿತ್ತು.

ಬಡ್ತಿ, ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿ ಅನ್ವಯಿಸಿ ಆದೇಶ ಹೊರಡಿಸಲು ವಿಳಂಬ.

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ನಿರ್ಣಯ ಮಾಡಿದ 2 ತಿಂಗಳು ಕಳೆದರೂ ಒಳಮೀಸಲಾತಿಯನ್ನು ಬಡ್ತಿ ಮತ್ತು ಬ್ಯಾಕ್‌ ಲಾಗ್‌ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಅದೇಶ ಹೊರಡಿಸಲು ಸಮಾಜ ಕಲ್ಯಾಣ ಇಲಾಖೆಯು ಮೀನಾಮೇಶ ಕ್ರಮ ಅನುಸರಿಸುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರದ ವಿರುದ್ದ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರ ಮೇಲೆ ಆಕ್ರೋಶ ಹೊರಹಾಕಿದ್ದರು.

ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿ ಅನ್ವಯಿಸಿ ಆದೇಶ ಹೊರಡಿಸದ ಸರ್ಕಾರ.

ಮೀಸಲಾತಿ ಅನ್ವಯಿಸುವ ಎಲ್ಲಾ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯ ಮಾಡಬೇಕೆಂದು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಆಗ್ರಹಿಸುತ್ತಿವೆ. ಪಕ್ಕದ ತೆಲಂಗಾಣ ರಾಜ್ಯದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಒಳಮೀಸಲಾತಿಯನ್ನು ಜಾರಿ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ತೆಲಂಗಾಣದಲ್ಲಿ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯ ಮಾಡಿ ಆದೇಶ ಹೊರಡಿಸಿದ್ದರೂ ಕರ್ನಾಟಕದಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

 

ಪರಿಶಿಷ್ಟ ಜಾತಿಗಳಿಗೆ ಪ್ರತ್ಯೇಕ ಶಾಶ್ವತ ಆಯೋಗ ರಚನೆಗೆ ವಿಳಂಬ

ಒಳಮೀಸಲಾತಿಯನ್ನು ಅನುಷ್ಟಾನಗೊಳಿಸುವುದು, ಕಾಲಕಾಲಕ್ಕೆ ಒಳಮೀಸಲಾತಿ ಕುರಿತು ಕುಂದುಕೊರತೆಗಳನ್ನು ಸರಿಪಡಿಸಲು ಪ್ರತೀ ಬಾರಿಯೂ ಸರ್ಕಾರ ನಾಗಮೋಹನ್‌ ದಾಸ್‌ ಆಯೋಗದ ರೀತಿಯಲ್ಲಿ ಆಯೋಗ ರಚಿಸಲು ಸಾಧ್ಯವಿಲ್ಲ. ಹಾಗಾಗಿ ಶಾಶ್ವತ ಹಿಂದುಳಿತ ವರ್ಗಗಳ ಆಯೋಗದಂತೆ ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚಿಸಲಾಗುವುದು ಎಂದು ಆಗಸ್ಟ್‌ 19ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನೇನೋ ಕೈಕೊಂಡಿತ್ತು ಆದರೆ ಇಲ್ಲಿಯವರೆಗೆ ಇದರ ಕುರಿತು ಸರ್ಕಾರವು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಶಾಶ್ವತ ಆಯೋಗ ರಚಿಸುವ ಕೆಲಸ ಆರಂಭವಾಗಲೇಯಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿಹಾರ ಚುನಾವಣೆಗೆ

ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ನೋಡಲ್‌ ಇಲಾಖೆಯಾಗಿ ಸಮಾಜ ಕಲ್ಯಾಣ ಇಲಾಖೆಯಾಗಿರುವುದರಿಂದ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪಾತ್ರ ಮಹತ್ವದ್ದಾಗಿದೆ. ಈ ಹಿಂದಿನ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮೇಜರ್‌ ಎಸ್‌. ಮಣಿವಣ್ಣನ್‌ ರನ್ನು ಹೋರಾಟಗಾರರ ಒತ್ತಡದಿಂದಾಗಿ ಬದಲಿಸಿದ್ದ ಸರ್ಕಾರ ಆ ಜಾಗಕ್ಕೆ ರಂದೀಪ್‌ ಕುಮಾರ್‌ ರನ್ನು ತಂದು ಕೂರಿಸಿತ್ತು. ಆದರೆ ಅವರನ್ನು ಬಿಹಾರ ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿರುವುದು ನೋಡಿದರೆ ಒಳಮೀಸಲಾತಿ ಸಮರ್ಪಕವಾಗಿ ಅನುಷ್ಟಾನ ಮಾಡುವ ಮನಸ್ಸಿಲ್ಲ ಎಂಬುದು ಸರ್ಕಾರದ ಈ ನಡೆಯಿಂದ ತಿಳಿದುಬರುತ್ತದೆ ಎಂದು ಹೇಳಲಾಗುತ್ತಿದೆ.

 

ಸ್ಪೃಶ್ಯ ಜಾತಿಗಳ ಒತ್ತಡಕ್ಕೆ ಮಣಿದ ಸರ್ಕಾರ.

ಕರ್ನಾಟಕದ ಪರಿಶಿಷ್ಟ ಜಾತಿಗಳ 101 ಜಾತಿಗಳಲ್ಲಿ ಅಸ್ಪೃಶ್ಯ ಸಮುದಾಯಗಳಾದ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳು ಶೈಕ್ಷಣಿಕ ಸೇರಿದಂತೆ ಮೀಸಲಾತಿಯ ಸೌಲಭ್ಯಗಳನ್ನು ಪಡೆಯಲು ಸ್ಪೃಶ್ಯ ಜಾತಿಗಳೊಂದಿಗೆ ಪೈಪೋಟಿ ನಡೆಸಲಾರದಂತಹ ಸ್ಥಿತಿಯನ್ನು ನಿಖರವಾಗಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕ ಸದಸ್ಯ ಆಯೋಗದ ವರದಿಯು ತೆರೆದಿಟ್ಟಿದೆ. ಇಂತಹ ಸನ್ನಿವೇಶದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಿರುವುದರಿಂದ ಅಲೆಮಾರಿ ಸಮುದಾಯಗಳು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಚಿವ ಸಂಪುಟದ ಈ ನಿರ್ಣಯದ ಹಿಂದೆ ಸ್ಪೃಶ್ಯ ಜಾತಿಗಳ ಪ್ರಬಲ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ. ಕರ್ನಾಟಕ ಸರ್ಕಾರದ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಆಪ್ತರಲ್ಲಿ ಗುರುತಿಸಿಕೊಂಡಿರುವ ಸ್ಪೃಶ್ಯ ಜಾತಿಗಳ ಪ್ರಮುಖರು ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಅಲೆಮಾರಿ ಸಮಯದಾಯಗಳಿಗೆ ನೀಡಿದ್ದ ಶೇ. 1 ಮೀಸಲಾತಿಯನ್ನು ಸ್ಪೃಶ್ಯ ಜಾತಿಗಳಿಗೆ ನೀಡಬೇಕೆಂದು ಒತ್ತಡ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಸರ್ಕಾರದ ಪ್ರಭಾವಿ ಸಚಿವರು, ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಲ್ಲಿ ಶಿಫಾರಸ್ಸು ಮಾಡಿದ್ದ ಪ್ರವರ್ಗ-ಡಿ ಶೇ.4 ಮೀಸಲಾತಿಯ ಬದಲಿಗೆ  ಪ್ರವರ್ಗ-ಸಿ ಎಂದು ವರ್ಗೀಕರಿಸಿ ಈ ಗುಂಪಿಗೆ ಶೇ.5 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ನೀಡಬೇಕೆಂದು, ಇಲ್ಲವಾದಲ್ಲಿ ತಾವು ರಾಜೀನಾಮೆ ಕೊಡುವುದಾಗಿ ಒತ್ತಡ ತಂದಿದ್ದರು ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಅಲೆಮಾರಿ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳಲ್ಲಿಯೇ ಬಲಿಷ್ಟರಾಗಿರುವ ಸ್ಪೃಶ್ಯ ಜಾತಿಗಳ ಗುಂಪಿಗೆ ಅಲೆಮಾರಿ ಸಮುದಾಯಗಳನ್ನು ಸೇರಿಸಿ ಮೀಸಲಾತಿಯನ್ನು ಶೇ. 5ಕ್ಕೆ ಏರಿಸಿತ್ತು. ಇದರ ನಂತರ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿ ನೀಡಿದರೆ ಏನೂ ಸಿಗುವುದಿಲ್ಲ ಬದಲಿಗೆ ಪ್ರವರ್ಗ-ಸಿ ಗುಂಪಿಗೆ ಸೇರಿಸಿರುವುದರಿಂದ ಶೇ.5 ಮೀಸಲಾತಿಯಲ್ಲಿ ಸೌಲಭ್ಯಗಳನ್ನು ಪಡೆಯಬಹುದು ಎಂದು ಅವೈಜ್ಞಾಜಿಕ ವಾದವನ್ನು ಮುಂದಿಡಲಾಗುತ್ತಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯ ಅಂಕಿ ಅಂಶಗಳನ್ನು ನೋಡಿದರೆ ಅಸ್ಪೃಶ್ಯ ಸಮುದಾಯಗಳಾದ ಹೊಲೆಯ ಸಂಬಂಧಿತ ಜಾತಿಗಳು ಹಾಗೂ ಮಾದಿಗ ಸಂಬಂಧಿತ ಜಾತಿಗಳು ಸ್ಪೃಶ್ಯ ಜಾತಿಗಳ ಎದುರು ಪೈಪೋಟಿ ನಡೆಸಿ ಮೀಸಲಾತಿಯನ್ನು ಪಡೆಯಲು ವಿಫಲಾಗಿರುವುದು ಸ್ಪಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳು ಸ್ಪೃಶ್ಯ ಜಾತಿಗಳ ಜೊತೆಯಲ್ಲಿ ಪೈಪೋಟಿ ನಡೆಸಲು ಸಾಧ್ಯವೇ ಆಗುದಿಲ್ಲ ಎಂದು ಅಂಕಿ ಅಂಶಗಳಿಂದ ಸ್ಪಷ್ಟವಾಗಿದೆ.

ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಅಲೆಮಾರಿ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ ಗೆ ರಿಟ್‌ ಅರ್ಜಿಯನ್ನು ದಾಖಲಿಸಿದೆ. ವಾದ ಆಲಿಸಿದ ಕೋರ್ಟ್‌ ನೇಮಕಾತಿಗೆ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಕೋರ್ಟಿನಲ್ಲಿ ಸಮರ್ಪಕವಾಗಿ ವಾದ ಮಂಡಿಸಲು ಸರ್ಕಾರಿ ವಕೀಲರನ್ನು ನೇಮಕ ಮಾಡಿದ್ದರಲ್ಲೂ ಅನುಮಾನಗಳು ಹಾಗೂ ಗೊಂದಲಗಳು ಮೂಡುತ್ತಿವೆ.

ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿ ಮಾಡಿದ್ದರಿಂದ ತಮ್ಮ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ಪ್ರಶಂಸೆಗಳನ್ನು ವ್ಯಕ್ತಪಡಿಸುವರೆಂದು ಭಾವಿಸಿತ್ತು ಆದರೆ ಈ ಎಲ್ಲಾ ಮೇಲಿನ ಕಾರಣಗಳಿಂದ ಪರಿಶಿಷ್ಟ ಜಾತಿಗಳ ಯಾವ ಸಮುದಾಯಗಳೂ ಸರ್ಕಾರದ ನಿರ್ಧಾರನ್ನು ಪ್ರಶಂಸಿಸಿಲ್ಲ. ಹಾಗಾಗಿ ಸರ್ಕಾರವು ತಾನೇ ಮಾಡಿಕೊಂಡು ಪ್ರಮಾದಗಳಿಂದಾಗಿ ಐತಿಹಾಸಿಕ ಒಳಮೀಸಲಾತಿಯ ಕುರಿತ ನಿರ್ಣಯಕ್ಕೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಸಿಗಬೇಕಾದಷ್ಟು ಪ್ರಶಂಸೆ ಸಿಗಲಿಲ್ಲ ಎನ್ನಲಾಗುತ್ತಿದೆ.

 

ಸರ್ಕಾರದ ಮುಂದಿರುವ ಆಯ್ಕೆಗಳು.

  1. ಒಳಮೀಸಲಾತಿ ಅನುಷ್ಟಾನ ಮಾಡುವ ಜವಾಬ್ದಾರಿ ಹೊತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಈ ವಿಷಯದಲ್ಲಿ ವಿಳಂಭ ಧೋರಣೆ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ನಿಜವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಸಮಾಜ ಕಲ್ಯಾಣ ಇಲಾಖೆಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ಒಳಮೀಸಲಾತಿಯನ್ನು ಸಮಗ್ರವಾಗಿ ಅನುಷ್ಟಾನ ಮಾಡಬೇಕಿದೆ.
  2. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರವರ್ಗ-ಎ ಶೇ.1 ಮೀಸಲಾತಿಯನ್ನು ನೀಡಿ ತಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ರುಜುವಾತು ಮಾಡಿಕೊಳ್ಳಬೇಕು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...