HomeUncategorizedವಿಶೇಷ ಲೇಖನ: ಒಳಮೀಸಲಾತಿ-ಸರ್ಕಾರಕ್ಕೆ ನುಂಗಲಾರದ ತುತ್ತಾದ ಪರಿಶಿಷ್ಟರು.

ವಿಶೇಷ ಲೇಖನ: ಒಳಮೀಸಲಾತಿ-ಸರ್ಕಾರಕ್ಕೆ ನುಂಗಲಾರದ ತುತ್ತಾದ ಪರಿಶಿಷ್ಟರು.

- Advertisement -
- Advertisement -

ಕರ್ನಾಟಕ ಸರ್ಕಾರವು ಆಗಸ್ಟ್‌ 19ರಂದು ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಮಾಡುವ ಐತಿಹಾಸಿಕ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿತ್ತು. ಆದರೆ ಜಸ್ಟೀಸ್‌ ನಾಗಮನೋಹನ್‌ ದಾಸ್‌ ಏಕಸದಸ್ಯ ಆಯೋಗ ನೀಡಿದ್ದ ವರದಿಯನ್ನು ಭಾಗಶಃ ಒಪ್ಪಿ ಸಚಿವ ಸಂಪುಟ ತನ್ನ ವಿವೇಚನೆಯನ್ನು ಬಳಸಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ  (ಮಾದಿಗ ಸಂಬಂಧಿತ ಜಾತಿಗಳು), ಪ್ರವರ್ಗ-ಬಿ (ಹೊಲೆಯ ಸಂಬಂಧಿತ ಜಾತಿಗಳು) ಹಾಗೂ ಪ್ರವರ್ಗ-ಸಿ (ಸ್ಪೃಶ್ಯ ಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಹಾಗೂ 49+10 ಅಲೆಮಾರಿ ಮತ್ತು ಅತಿ ಹಿಂದುಳಿದ ಜಾತಿಗಳು) ಎಂದು ವರ್ಗೀಕರಿಸಿ ʼಪ್ರವರ್ಗ-ಎʼ ಗೆ ಶೇ. 6, ʼಪ್ರವರ್ಗ-ಬಿʼಗೆ ಶೇ.6 ಮತ್ತು ʼಪ್ರವರ್ಗ-ಸಿʼಗೆ ಶೇ.5 ಒಳಮೀಸಲಾತಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿತ್ತು. ಕಳೆದ 35 ವರ್ಷಗಳ ಒಳಮೀಸಲಾತಿ ಹೋರಾಟವು ಕೇವಲ ಯಾವುದೇ ಒಂದು ಜಾತಿಗೆ ಒಳಮೀಸಲಾತಿಯನ್ನು ಒತ್ತಾಯಿಸುವ ಹೋರಾಟ ಮಾತ್ರವಾಗಿರದೆ ಪರಿಶಿಷ್ಟ ಜಾತಿಗಳ 101 ಜಾತಿಗಳಿಗೂ ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟವಾಗಿತ್ತು. ಕರ್ನಾಟಕ ಸರ್ಕಾರದ ಒಳಮೀಸಲಾತಿ ವರ್ಗೀಕರಣವು 49 ಅಲೆಮಾರಿ ಸಮುದಾಯಗಳು ಹಾಗೂ 10 ಅತಿ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳಲ್ಲಿಯೇ ಬಲಿಷ್ಟರಾದ ಸ್ಪೃಶ್ಯ ಜಾತಿಗಳ ಪ್ರವರ್ಗ-ಸಿ ಗುಂಪಿಗೆ ಸೇರಿಸಿದ ತೀರ್ಮಾನವು ಸಮಾಜದಲ್ಲಿ ಸರ್ಕಾರದ ತೀರ್ಮಾನದ ವಿರುದ್ದ ಆಕ್ರೋಶ ವ್ಯಕ್ತವಾಯಿತು.

ಆಗಸ್ಟ್‌ 11 ರಿಂದ ಒಳಮೀಸಲಾತಿ ಹೋರಾಟಗಾರರು ಒಳಮೀಸಲಾತಿಯ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವದಿ ಹೋರಾಟ ಆರಂಭಿಸಿತ್ತು. ಸರ್ಕಾರದ ತೀರ್ಮಾನವು ಅಲೆಮಾರಿ ಸಮುದಾಯಗಳಿಗೆ ಆದ ಅನ್ಯಾಯವನ್ನು ಖಂಡಿಸಿ ಅನಿರ್ಧಿಷ್ಟಾವದಿ ಪ್ರತಿಭಟನೆ ಮುಂದುವರೆದಿತ್ತು.

ಅಲೆಮಾರಿಗಳ ಸಮುದಾಯಗಳ ಹೋರಾಟಗಳು.

ಅಲೆಮಾರಿ ಸಮುದಾಯಗಳು ತಮಗೆ ಆದ ಅನ್ಯಾಯಕ್ಕೆ ನ್ಯಾಯವನ್ನು ಆಗ್ರಹಿಸಿ ಹಲವು ರೀತಿಯ ಹೋರಾಟಗಳನ್ನು ಮಾಡಿದವು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸೆಪ್ಟೆಂಬರ್‌ 3 ರಂದು 10 ಸಾವಿರಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹೋರಾಟ ನಡೆಸಿದ್ದವು. ಈ ಹೋರಾಟಕ್ಕೆ ಕರ್ನಾಟಕ ಸರ್ಕಾರದ ಯಾವುದೇ ಪ್ರತಿನಿಧಿಗಳು ಬಂದು ಅಲೆಮಾರಿ ಸಮುದಾಯಗಳ ಅಹವಾಲನ್ನು ಆಲಿಸಲು ಮುಂದಾಗಲಿಲ್ಲ. ಅಲೆಮಾರಿ ಸಮುದಾಯಗಳ ಹೋರಾಟಕ್ಕೆ ವಿರೋಧ ಪಕ್ಷದ ರಾಜಕಾರಣಿಗಳು ಬಂದು ಬೆಂಬಲ ಸೂಚಿಸಿ ಆಗ ನಡೆಯುತ್ತಿದ್ದ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ ಅಧಿವೇಶನಲ್ಲಿ ದ್ವನಿಯೆತ್ತುವುದಾಗಿ ಆಶ್ವಾಸನೆಯಿಟ್ಟಿದ್ದವು. ಆದರೆ ಅಲೆಮಾರಿ ಸಮುದಾಯಗಳಿಗೆ ವಿರೋಧ ಪಕ್ಷಗಳಿಂದಲೂ ನ್ಯಾಯ ಒದಗಿಸಲು ಸಾದ್ಯವಾಗಲಿಲ್ಲ. ಕರ್ನಾಟಕ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅಲೆಮಾರಿ ಸಮುದಾಯಗಳು, ದೇಶದಾದ್ಯಂತ ಸಾಮಾಜಿಕ ನ್ಯಾಯದ ಕುರಿತು ಗಂಭೀರವಾಗಿ ಪ್ರಶ್ನೆಗಳನ್ನೆತ್ತುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಶೋಷಿತ ಸಮುದಾಯಗಳ ವಿರೋದಿ ನಿಲುವನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ಬಳಿ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಗೆ ತೆರಳಿ ಬೃಹತ್‌ ಪ್ರತಿಭಟನೆ ನಡೆಸಿ ಎಐಸಿಸಿ ಕಛೇರಿಗೆ ಮುತ್ತಿಗೆ ಹಾಕಿದ್ದವು.

ಅಲೆಮಾರಿ ಸಮುದಾಯಗಳ ಸಾಮಾಜಿಕ ನ್ಯಾಯದ ಕೂಗಿಗೆ ಸ್ಪಂಧಿಸಿದ ಕಾಂಗ್ರೆಸ್‌ನ ಹೈಕಮಾಂಡ್‌ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರ ಬಳಿ ಅಲೆಮಾರಿ ಸಮುದಾಯಗಳ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚಿಸಿದ್ದವು.

ಹೈಕಮಾಂಡ್‌ ನಿರ್ದೇಶನದಂತೆ ಹಾಗೂ ಕರ್ನಾಟಕದಲ್ಲಿ ಪ್ರಗತಿಪರರು ಹಾಗೂ ಸಾಮಾಜಿಕ ನ್ಯಾಯದ ಪರವಾಗಿರುವ ಹೋರಾಟಗಾರರು, ಚಿಂತಕರು ಹಾಗೂ ಸಾಹಿತಿಗಳ ಒತ್ತಡಕ್ಕೆ ಮಣಿದ ಸರ್ಕಾರ ಅಲೆಮಾರಿ ಸಮುದಾಯಗಳ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

ಒಳಮೀಸಲಾತಿ ಜಾರಿ ಮಾಡಿದರೂ ದಕ್ಕದ ಪ್ರಶಂಸೆ ಹಾಗೂ ನಿಲ್ಲದ ಹೋರಾಟಗಳು.

ಸರ್ವೋಚ್ಚ ನ್ಯಾಯಾಲವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ಆದೇಶ ಹೊರಡಿಸಿ ಒಂದು ವರ್ಷ ಕಳೆದ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಕುರಿತಂತೆ ನಿಲುವನ್ನು ತೆಗೆದುಕೊಳ್ಳಲಾಗಿತ್ತು. ಈ ನಿಲುವು ತೆಗೆದುಕೊಳ್ಳಲೂ ಒಳಮೀಸಲಾತಿ ಹೋರಾಟಗಾರರ ನಿರಂತರ ಹೋರಾಟ ಹಾಗೂ ಒತ್ತಡವೇ ಕಾರಣವಾಗಿತ್ತು.

ಕಳೆದ 35 ವರ್ಷಗಳ ಒಳಮೀಸಲಾತಿ ಬೇಡಿಕೆಯನ್ನು ಪರಿಗಣಿಸಿ ಒಳಮೀಸಲಾತಿ ಜಾರಿ ಮಾಡಿದ್ದರೂ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರಶಂಸೆ ಸಿಗಲಿಲ್ಲ. ಇದಕ್ಕೆ ಕರ್ನಾಟಕ ಸರ್ಕಾರವೇ ಸೃಷ್ಠಿಸಿದ ಗೊಂದಲಗಳು ಹಾಗೂ ವಿಳಂಬ ಧೋರಣೆಯೇ ಕಾರಣ.

ಎಕೆ.ಎಡಿ.ಎಎ ಸಮಸ್ಯೆಯನ್ನು ಮುಂದುವರೆಸಿದ್ದ ಸರ್ಕಾರ.

ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ ಮಾಡಲು ಇದ್ದ ಬಹುದೊಡ್ಡ ತಡೆ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ಜಾತಿಗಳ ಗುಂಪುಗಳು. ಸುಮಾರು 44 ಲಕ್ಷ ಜನರು ಈ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದರಿಂದ ಒಳಮೀಸಲಾತಿ ಜಾರಿಮಾಡಲು ಸಮಸ್ಯೆಯಾಗಿತ್ತು. ಆದರೆ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಎಕೆ. ಎಡಿ. ಎಎ ಜನಸಂಖ್ಯೆಯನ್ನು 4,74,954 ಕ್ಕೆ ಇಳಿಸಿತ್ತು. ಆದರೆ ಈಗಾಗಲೇ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿರುವ ಪರಿಶಿಷ್ಟ ಜಾತಿಗಳ ಸುಮಾರು 44 ಲಕ್ಷ. ಇವರಿಗೆ ತಮ್ಮ ಮೂಲ ಜಾತಿ ಪ್ರಮಾಣ ಪತ್ರವನ್ನು ನೀಡಲು ಕರ್ನಾಟಕ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳ ಮೇಲೆ ಶಂಕೆ ವ್ಯಕ್ತವಾಗಿತ್ತು. ಇದೇ ಸಮಯದಲ್ಲಿ ಕೆಲವು ಸಾಮಾಜಿಕ ನ್ಯಾಯದ ವಿರೋಧಿಗಳು “ಎಕೆ, ಎಡಿ, ಎಎ ಹೆಸರಿನಲ್ಲಿ ಪ್ರಮಾಣ ಪತ್ರ ಹೊಂದಿರುವವರು ಪ್ರವರ್ಗ-ಎ ಯಲ್ಲಿ ಮೀಸಲಾತಿಯನ್ನು ನುಗ್ಗಿ ಪಡೆದುಕೊಳ್ಳಿ” ಎಂಬ ಸಂಚಿನ ಮಾತುಗಳೂ ಒಳಮೀಸಲಾತಿ ಹೋರಾಟಗಾರರಲ್ಲಿನ ಸಂಶಯವನ್ನು ಇನ್ನಷ್ಟು ಹೆಚ್ಚಿಸಿತ್ತು.

ಬಡ್ತಿ, ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿ ಅನ್ವಯಿಸಿ ಆದೇಶ ಹೊರಡಿಸಲು ವಿಳಂಬ.

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ನಿರ್ಣಯ ಮಾಡಿದ 2 ತಿಂಗಳು ಕಳೆದರೂ ಒಳಮೀಸಲಾತಿಯನ್ನು ಬಡ್ತಿ ಮತ್ತು ಬ್ಯಾಕ್‌ ಲಾಗ್‌ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಅದೇಶ ಹೊರಡಿಸಲು ಸಮಾಜ ಕಲ್ಯಾಣ ಇಲಾಖೆಯು ಮೀನಾಮೇಶ ಕ್ರಮ ಅನುಸರಿಸುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರದ ವಿರುದ್ದ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರ ಮೇಲೆ ಆಕ್ರೋಶ ಹೊರಹಾಕಿದ್ದರು.

ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿ ಅನ್ವಯಿಸಿ ಆದೇಶ ಹೊರಡಿಸದ ಸರ್ಕಾರ.

ಮೀಸಲಾತಿ ಅನ್ವಯಿಸುವ ಎಲ್ಲಾ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯ ಮಾಡಬೇಕೆಂದು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಆಗ್ರಹಿಸುತ್ತಿವೆ. ಪಕ್ಕದ ತೆಲಂಗಾಣ ರಾಜ್ಯದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಒಳಮೀಸಲಾತಿಯನ್ನು ಜಾರಿ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ತೆಲಂಗಾಣದಲ್ಲಿ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯ ಮಾಡಿ ಆದೇಶ ಹೊರಡಿಸಿದ್ದರೂ ಕರ್ನಾಟಕದಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

 

ಪರಿಶಿಷ್ಟ ಜಾತಿಗಳಿಗೆ ಪ್ರತ್ಯೇಕ ಶಾಶ್ವತ ಆಯೋಗ ರಚನೆಗೆ ವಿಳಂಬ

ಒಳಮೀಸಲಾತಿಯನ್ನು ಅನುಷ್ಟಾನಗೊಳಿಸುವುದು, ಕಾಲಕಾಲಕ್ಕೆ ಒಳಮೀಸಲಾತಿ ಕುರಿತು ಕುಂದುಕೊರತೆಗಳನ್ನು ಸರಿಪಡಿಸಲು ಪ್ರತೀ ಬಾರಿಯೂ ಸರ್ಕಾರ ನಾಗಮೋಹನ್‌ ದಾಸ್‌ ಆಯೋಗದ ರೀತಿಯಲ್ಲಿ ಆಯೋಗ ರಚಿಸಲು ಸಾಧ್ಯವಿಲ್ಲ. ಹಾಗಾಗಿ ಶಾಶ್ವತ ಹಿಂದುಳಿತ ವರ್ಗಗಳ ಆಯೋಗದಂತೆ ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚಿಸಲಾಗುವುದು ಎಂದು ಆಗಸ್ಟ್‌ 19ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನೇನೋ ಕೈಕೊಂಡಿತ್ತು ಆದರೆ ಇಲ್ಲಿಯವರೆಗೆ ಇದರ ಕುರಿತು ಸರ್ಕಾರವು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಶಾಶ್ವತ ಆಯೋಗ ರಚಿಸುವ ಕೆಲಸ ಆರಂಭವಾಗಲೇಯಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿಹಾರ ಚುನಾವಣೆಗೆ

ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ನೋಡಲ್‌ ಇಲಾಖೆಯಾಗಿ ಸಮಾಜ ಕಲ್ಯಾಣ ಇಲಾಖೆಯಾಗಿರುವುದರಿಂದ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪಾತ್ರ ಮಹತ್ವದ್ದಾಗಿದೆ. ಈ ಹಿಂದಿನ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮೇಜರ್‌ ಎಸ್‌. ಮಣಿವಣ್ಣನ್‌ ರನ್ನು ಹೋರಾಟಗಾರರ ಒತ್ತಡದಿಂದಾಗಿ ಬದಲಿಸಿದ್ದ ಸರ್ಕಾರ ಆ ಜಾಗಕ್ಕೆ ರಂದೀಪ್‌ ಕುಮಾರ್‌ ರನ್ನು ತಂದು ಕೂರಿಸಿತ್ತು. ಆದರೆ ಅವರನ್ನು ಬಿಹಾರ ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿರುವುದು ನೋಡಿದರೆ ಒಳಮೀಸಲಾತಿ ಸಮರ್ಪಕವಾಗಿ ಅನುಷ್ಟಾನ ಮಾಡುವ ಮನಸ್ಸಿಲ್ಲ ಎಂಬುದು ಸರ್ಕಾರದ ಈ ನಡೆಯಿಂದ ತಿಳಿದುಬರುತ್ತದೆ ಎಂದು ಹೇಳಲಾಗುತ್ತಿದೆ.

 

ಸ್ಪೃಶ್ಯ ಜಾತಿಗಳ ಒತ್ತಡಕ್ಕೆ ಮಣಿದ ಸರ್ಕಾರ.

ಕರ್ನಾಟಕದ ಪರಿಶಿಷ್ಟ ಜಾತಿಗಳ 101 ಜಾತಿಗಳಲ್ಲಿ ಅಸ್ಪೃಶ್ಯ ಸಮುದಾಯಗಳಾದ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳು ಶೈಕ್ಷಣಿಕ ಸೇರಿದಂತೆ ಮೀಸಲಾತಿಯ ಸೌಲಭ್ಯಗಳನ್ನು ಪಡೆಯಲು ಸ್ಪೃಶ್ಯ ಜಾತಿಗಳೊಂದಿಗೆ ಪೈಪೋಟಿ ನಡೆಸಲಾರದಂತಹ ಸ್ಥಿತಿಯನ್ನು ನಿಖರವಾಗಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕ ಸದಸ್ಯ ಆಯೋಗದ ವರದಿಯು ತೆರೆದಿಟ್ಟಿದೆ. ಇಂತಹ ಸನ್ನಿವೇಶದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಿರುವುದರಿಂದ ಅಲೆಮಾರಿ ಸಮುದಾಯಗಳು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಚಿವ ಸಂಪುಟದ ಈ ನಿರ್ಣಯದ ಹಿಂದೆ ಸ್ಪೃಶ್ಯ ಜಾತಿಗಳ ಪ್ರಬಲ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ. ಕರ್ನಾಟಕ ಸರ್ಕಾರದ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಆಪ್ತರಲ್ಲಿ ಗುರುತಿಸಿಕೊಂಡಿರುವ ಸ್ಪೃಶ್ಯ ಜಾತಿಗಳ ಪ್ರಮುಖರು ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಅಲೆಮಾರಿ ಸಮಯದಾಯಗಳಿಗೆ ನೀಡಿದ್ದ ಶೇ. 1 ಮೀಸಲಾತಿಯನ್ನು ಸ್ಪೃಶ್ಯ ಜಾತಿಗಳಿಗೆ ನೀಡಬೇಕೆಂದು ಒತ್ತಡ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಸರ್ಕಾರದ ಪ್ರಭಾವಿ ಸಚಿವರು, ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಲ್ಲಿ ಶಿಫಾರಸ್ಸು ಮಾಡಿದ್ದ ಪ್ರವರ್ಗ-ಡಿ ಶೇ.4 ಮೀಸಲಾತಿಯ ಬದಲಿಗೆ  ಪ್ರವರ್ಗ-ಸಿ ಎಂದು ವರ್ಗೀಕರಿಸಿ ಈ ಗುಂಪಿಗೆ ಶೇ.5 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ನೀಡಬೇಕೆಂದು, ಇಲ್ಲವಾದಲ್ಲಿ ತಾವು ರಾಜೀನಾಮೆ ಕೊಡುವುದಾಗಿ ಒತ್ತಡ ತಂದಿದ್ದರು ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಅಲೆಮಾರಿ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳಲ್ಲಿಯೇ ಬಲಿಷ್ಟರಾಗಿರುವ ಸ್ಪೃಶ್ಯ ಜಾತಿಗಳ ಗುಂಪಿಗೆ ಅಲೆಮಾರಿ ಸಮುದಾಯಗಳನ್ನು ಸೇರಿಸಿ ಮೀಸಲಾತಿಯನ್ನು ಶೇ. 5ಕ್ಕೆ ಏರಿಸಿತ್ತು. ಇದರ ನಂತರ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿ ನೀಡಿದರೆ ಏನೂ ಸಿಗುವುದಿಲ್ಲ ಬದಲಿಗೆ ಪ್ರವರ್ಗ-ಸಿ ಗುಂಪಿಗೆ ಸೇರಿಸಿರುವುದರಿಂದ ಶೇ.5 ಮೀಸಲಾತಿಯಲ್ಲಿ ಸೌಲಭ್ಯಗಳನ್ನು ಪಡೆಯಬಹುದು ಎಂದು ಅವೈಜ್ಞಾಜಿಕ ವಾದವನ್ನು ಮುಂದಿಡಲಾಗುತ್ತಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯ ಅಂಕಿ ಅಂಶಗಳನ್ನು ನೋಡಿದರೆ ಅಸ್ಪೃಶ್ಯ ಸಮುದಾಯಗಳಾದ ಹೊಲೆಯ ಸಂಬಂಧಿತ ಜಾತಿಗಳು ಹಾಗೂ ಮಾದಿಗ ಸಂಬಂಧಿತ ಜಾತಿಗಳು ಸ್ಪೃಶ್ಯ ಜಾತಿಗಳ ಎದುರು ಪೈಪೋಟಿ ನಡೆಸಿ ಮೀಸಲಾತಿಯನ್ನು ಪಡೆಯಲು ವಿಫಲಾಗಿರುವುದು ಸ್ಪಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳು ಸ್ಪೃಶ್ಯ ಜಾತಿಗಳ ಜೊತೆಯಲ್ಲಿ ಪೈಪೋಟಿ ನಡೆಸಲು ಸಾಧ್ಯವೇ ಆಗುದಿಲ್ಲ ಎಂದು ಅಂಕಿ ಅಂಶಗಳಿಂದ ಸ್ಪಷ್ಟವಾಗಿದೆ.

ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಅಲೆಮಾರಿ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ ಗೆ ರಿಟ್‌ ಅರ್ಜಿಯನ್ನು ದಾಖಲಿಸಿದೆ. ವಾದ ಆಲಿಸಿದ ಕೋರ್ಟ್‌ ನೇಮಕಾತಿಗೆ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಕೋರ್ಟಿನಲ್ಲಿ ಸಮರ್ಪಕವಾಗಿ ವಾದ ಮಂಡಿಸಲು ಸರ್ಕಾರಿ ವಕೀಲರನ್ನು ನೇಮಕ ಮಾಡಿದ್ದರಲ್ಲೂ ಅನುಮಾನಗಳು ಹಾಗೂ ಗೊಂದಲಗಳು ಮೂಡುತ್ತಿವೆ.

ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿ ಮಾಡಿದ್ದರಿಂದ ತಮ್ಮ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ಪ್ರಶಂಸೆಗಳನ್ನು ವ್ಯಕ್ತಪಡಿಸುವರೆಂದು ಭಾವಿಸಿತ್ತು ಆದರೆ ಈ ಎಲ್ಲಾ ಮೇಲಿನ ಕಾರಣಗಳಿಂದ ಪರಿಶಿಷ್ಟ ಜಾತಿಗಳ ಯಾವ ಸಮುದಾಯಗಳೂ ಸರ್ಕಾರದ ನಿರ್ಧಾರನ್ನು ಪ್ರಶಂಸಿಸಿಲ್ಲ. ಹಾಗಾಗಿ ಸರ್ಕಾರವು ತಾನೇ ಮಾಡಿಕೊಂಡು ಪ್ರಮಾದಗಳಿಂದಾಗಿ ಐತಿಹಾಸಿಕ ಒಳಮೀಸಲಾತಿಯ ಕುರಿತ ನಿರ್ಣಯಕ್ಕೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಸಿಗಬೇಕಾದಷ್ಟು ಪ್ರಶಂಸೆ ಸಿಗಲಿಲ್ಲ ಎನ್ನಲಾಗುತ್ತಿದೆ.

 

ಸರ್ಕಾರದ ಮುಂದಿರುವ ಆಯ್ಕೆಗಳು.

  1. ಒಳಮೀಸಲಾತಿ ಅನುಷ್ಟಾನ ಮಾಡುವ ಜವಾಬ್ದಾರಿ ಹೊತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಈ ವಿಷಯದಲ್ಲಿ ವಿಳಂಭ ಧೋರಣೆ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ನಿಜವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಸಮಾಜ ಕಲ್ಯಾಣ ಇಲಾಖೆಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ಒಳಮೀಸಲಾತಿಯನ್ನು ಸಮಗ್ರವಾಗಿ ಅನುಷ್ಟಾನ ಮಾಡಬೇಕಿದೆ.
  2. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರವರ್ಗ-ಎ ಶೇ.1 ಮೀಸಲಾತಿಯನ್ನು ನೀಡಿ ತಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ರುಜುವಾತು ಮಾಡಿಕೊಳ್ಳಬೇಕು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...