Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

- Advertisement -
- Advertisement -

ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 48 ವಿಷಯಗಳು ಕುರಿತು ಚರ್ಚೆ ಮಾಡಲಾಗಿದ್ದು, 3400 ಕೋಟಿ ರೂಪಾಯಿ ಮೊತ್ತ ಮಂಜೂರು ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ; ಒಟ್ಟು 48 ವಿಷಯಗಳು ಚರ್ಚೆಯಾಗಿದೆ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ” ಎಂದರು.

“2050 ಕೋಟಿ ಬೆಂಗಳೂರು ಕಂದಾಯ ಭಾಗಕ್ಕೇ ಕೊಟ್ಟಿದ್ದೇವೆ, ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ. ಈ ಯೋಜನೆಯಿಂದ 24.1 ಟಿಎಂಸಿ ನೀರಿ ಸಿಗಲಿದ್ದು, ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಆದ್ದರಿಂದ, ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಕಾಮಗಾರಿ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುತ್ತೇವೆ” ಎಂದು ಭರವಸೆ ನೀಡಿದರು.

“9807 ಕೋಟಿ ಮೊತ್ತದಲ್ಲಿ ಕೈಗೊಂಡ ಗ್ರಾವಿಟಿ ಮುಖ್ಯ ಕೆನಲ್‌ನ‌ ಕೆಲಸ ಶೇ.85 ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ರೂಪಾಯಿ ಬೇಕಾಗಿದೆ. ನಮ್ಮಲ್ಲಿ ಉಳಿದಿರುವುದು 6100 ಕೋಟಿ ರೂಪಾಯಿ ಮಾತ್ರ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡಲಾಗುವುದು” ಎಂದರು.

“ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ. ಇದರ ಜೊತೆಗೆ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್‌, ಐಆರ್‌ಎಸ್‌, ಐಪಿಎಸ್‌ ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ರೂಪಾಯಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು” ಎಂದು ಘೋಷಿಸಿದರು.

“ಬೆಂಗಳೂರು ಕೇಂದ್ರ ವಿವಿಗೆ ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ’ ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಇಲ್ಲದ ಹೊಸ ತಾಲ್ಲೂಕುಗಳಲ್ಲಿ ಸಿಚ್‌ಸಿಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ” ಎಂದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ತಾಲ್ಲೂಕು, ಎಂದು ಬಾಗೇಪಲ್ಲಿಗೆ ಭಾಗ್ಯನಗರ ಎಂದು ಹೆಸರಿಡಲಾಗುವುದು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಚಿವ ಸಂಪುಟ ಸಭೆಯ ಇತರೆ ಘೋಷಣೆಗಳು:

ಈ ಸಚಿವ ಸಂಪುಟ ಸಭೆಯಲ್ಲಿ 3400 ಕೋಟಿ ರೂಗಳಿಗೆ ಅನುಮೋದನೆ ನೀಡಲಾಗಿದ್ದು, ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಕುಡಿಯುವ ನೀರಿನ ಯೋಜನೆಗಳು, ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಶಿಕ್ಷಣಕ್ಕೆ- 1627.25 ಕೋಟಿ ರೂ ನಿಗದಿ ಮಾಡಲಾಗಿದ್ದು, ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಲಾಗಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ. ನೀರಾವರಿ ಯೋಜನೆಗಳಿಗೆ – 1154 ಕೋಟಿ, 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜೊತೆಗೆ, ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ಘೋಷಣೆ ಮಾಡಲಾಗಿದೆ.

ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಲಾಗಿದೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮೀಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...