Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

- Advertisement -
- Advertisement -

ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 48 ವಿಷಯಗಳು ಕುರಿತು ಚರ್ಚೆ ಮಾಡಲಾಗಿದ್ದು, 3400 ಕೋಟಿ ರೂಪಾಯಿ ಮೊತ್ತ ಮಂಜೂರು ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ; ಒಟ್ಟು 48 ವಿಷಯಗಳು ಚರ್ಚೆಯಾಗಿದೆ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ” ಎಂದರು.

“2050 ಕೋಟಿ ಬೆಂಗಳೂರು ಕಂದಾಯ ಭಾಗಕ್ಕೇ ಕೊಟ್ಟಿದ್ದೇವೆ, ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ. ಈ ಯೋಜನೆಯಿಂದ 24.1 ಟಿಎಂಸಿ ನೀರಿ ಸಿಗಲಿದ್ದು, ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಆದ್ದರಿಂದ, ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಕಾಮಗಾರಿ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುತ್ತೇವೆ” ಎಂದು ಭರವಸೆ ನೀಡಿದರು.

“9807 ಕೋಟಿ ಮೊತ್ತದಲ್ಲಿ ಕೈಗೊಂಡ ಗ್ರಾವಿಟಿ ಮುಖ್ಯ ಕೆನಲ್‌ನ‌ ಕೆಲಸ ಶೇ.85 ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ರೂಪಾಯಿ ಬೇಕಾಗಿದೆ. ನಮ್ಮಲ್ಲಿ ಉಳಿದಿರುವುದು 6100 ಕೋಟಿ ರೂಪಾಯಿ ಮಾತ್ರ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡಲಾಗುವುದು” ಎಂದರು.

“ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ. ಇದರ ಜೊತೆಗೆ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್‌, ಐಆರ್‌ಎಸ್‌, ಐಪಿಎಸ್‌ ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ರೂಪಾಯಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು” ಎಂದು ಘೋಷಿಸಿದರು.

“ಬೆಂಗಳೂರು ಕೇಂದ್ರ ವಿವಿಗೆ ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ’ ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಇಲ್ಲದ ಹೊಸ ತಾಲ್ಲೂಕುಗಳಲ್ಲಿ ಸಿಚ್‌ಸಿಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ” ಎಂದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ತಾಲ್ಲೂಕು, ಎಂದು ಬಾಗೇಪಲ್ಲಿಗೆ ಭಾಗ್ಯನಗರ ಎಂದು ಹೆಸರಿಡಲಾಗುವುದು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಚಿವ ಸಂಪುಟ ಸಭೆಯ ಇತರೆ ಘೋಷಣೆಗಳು:

ಈ ಸಚಿವ ಸಂಪುಟ ಸಭೆಯಲ್ಲಿ 3400 ಕೋಟಿ ರೂಗಳಿಗೆ ಅನುಮೋದನೆ ನೀಡಲಾಗಿದ್ದು, ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಕುಡಿಯುವ ನೀರಿನ ಯೋಜನೆಗಳು, ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಶಿಕ್ಷಣಕ್ಕೆ- 1627.25 ಕೋಟಿ ರೂ ನಿಗದಿ ಮಾಡಲಾಗಿದ್ದು, ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಲಾಗಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ. ನೀರಾವರಿ ಯೋಜನೆಗಳಿಗೆ – 1154 ಕೋಟಿ, 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜೊತೆಗೆ, ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ಘೋಷಣೆ ಮಾಡಲಾಗಿದೆ.

ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಲಾಗಿದೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮೀಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...