Homeಮುಖಪುಟಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ - ಪಿಣರಾಯಿ ವಿಜಯನ್

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ – ಪಿಣರಾಯಿ ವಿಜಯನ್

- Advertisement -
- Advertisement -

‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ತೆರೆಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಉಳಿದಂತೆ ರಾಜ್ಯದಲ್ಲಿ ಯಾವುದೇ ಹೊಸ ನ್ಯಾಯಾಲಯವನ್ನು ಸ್ಥಾಪಿಸುವ ಯೋಜನೆಯ ಸದ್ಯಕ್ಕಿಲ್ಲ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮಂಗಳವಾರ ತಿಳಿಸಿದ್ದಾರೆ.

ದಕ್ಷಿಣ ರಾಜ್ಯದಲ್ಲಿ ಹೊಸ ನ್ಯಾಯಾಲಯಗಳ ಸ್ಥಾಪನೆ ಕುರಿತಂತೆ ಶಾಸಕ ಕ್ಸೇವಿಯರ್‌ ಚಿಟ್ಟಿಲಪ್ಪಿಲ್ಲಿ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ್ದ ಪ್ರಶ್ನೆಗೆ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದಾರೆ.

ಹೊಸ ನ್ಯಾಯಾಲಯಗಳ ಸ್ಥಾಪನೆಯ ಆದ್ಯತಾ ಪಟ್ಟಿಯಲ್ಲಿ ವಡಕ್ಕಂಚೇರಿ ಉಪ ನ್ಯಾಯಾಲಯವನ್ನು ಮೂರನೇ ಸ್ಥಾನಕ್ಕೆ ಸೇರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

‘ಹೊಸ ನ್ಯಾಯಾಲಯಗಳ ಸ್ಥಾಪನೆ ಕುರಿತಂತೆ ಸರ್ಕಾರವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಪ್ರಸ್ತುತ ಸಂದರ್ಭವನ್ನು ಪರಿಗಣಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಪ್ರಾರಂಭಿಸಲು ಆದ್ಯತೆ ನೀಡಲಾಗಿದೆ. ಈ ವಿಶೇಷ ನ್ಯಾಯಾಲಯಗಳು ಸಿದ್ಧವಾದ ನಂತರ, ಇತಹ ನ್ಯಾಯಾಲಯಗಳ ಸ್ಥಾಪನೆಯ ವಿಷಯವನ್ನು ಸರ್ಕಾರ ಪರಿಶೀಲಿಸುತ್ತದೆ’ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇಡೀ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಸರ್ಕಾರಗಳು ಇಂತಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವ ಕ್ರಮವನ್ನು ಕೈಗೊಳ್ಳದೇ ಮೌನವಾಗಿರುವುದು ಬೇಸರದ ಸಂಗತಿ. ಇಂತಹ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿ, ನ್ಯಾಯ ದೊರೆಯುವುದು ಎಂಬುದು ಕನಸಿನ ಮಾತು ಎನ್ನುವಂತಾಗಿದೆ. ನ್ಯಾಯಕ್ಕಾಗಿ ವರ್ಷಾನುಗಟ್ಟಲೆ ಕೋರ್ಟಿಗೆ ಅಲೆದಾಡುವ ಸಂತ್ರಸ್ಥರು ಕೊನೆಗೆ ‘ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನು ಕೈಬಿಡಲಾಗಿದೆ’ ಎಂಬ ನ್ಯಾಯಾಧೀಶರ ಮಾತಿನಿಂದ ಜರ್ಜರಿತಗೊಂಡಂತಹ ಘಟನೆಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಈ ನಿಟ್ಟಿನಲ್ಲಿ ಕೇರಳ ಜಾರಿ ಮಾಡಿರುವ ವಿಶೇಷ ನ್ಯಾಯಾಲಯಗಳು ಶೀರ್ಘದಲ್ಲೇ ಕಾರ್ಯರೂಪಕ್ಕೆ ಬರಲಿ. ಕೇರಳ ಇಡೀ ದೇಶಕ್ಕೆ ಮಾದರಿಯಾಗಲಿ.


ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆ ಬದಲಾಗಲಿ, ನನ್ನ ಬಲಿದಾನ ಬದಲಾವಣೆಗೆ ದಾರಿದೀಪವಾಗಲಿ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಿಣರಾಯಿ ವಿಜಯನ್ ರವರ ಈ ನಿರ್ದಾರ ಸ್ವಾಗತಾರ್ಹ. ಈ ವ್ಯವಸ್ಥೆ ನಮ್ಮ ರಾಜ್ಯದಲ್ಲೂ ಆಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...