Homeಮುಖಪುಟವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

- Advertisement -
- Advertisement -

ನವದೆಹಲಿ: ಚುನಾವಣಾ ಆಯೋಗವು ಬಿಹಾರ ಹಾಗೂ ನಂತರ ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಜಾರಿಗೆ ತರುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision) (SIR)ಯು ನಾಜಿ ಜರ್ಮನಿಯ ‘ಪೂರ್ವಜರ ಪಾಸ್‌ಪೋರ್ಟ್‌ಗಳ’ ವಿತರಣೆಯನ್ನು ಹೋಲುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಈ ಪರಿಷ್ಕರಣೆಯು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿಯ ಹುನ್ನಾರವಾಗಿದೆ ಎಂದು ಟಿಎಂಸಿ ಹೇಳಿದೆ.

ಈ ವಿಷಯವನ್ನು ‘ಇಂಡಿಯಾ’ ಒಕ್ಕೂಟದ ಎಲ್ಲಾ ಪಕ್ಷಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರಸ್ತಾಪಿಸಲಿವೆ ಎಂದು ಟಿಎಂಸಿ ತಿಳಿಸಿದೆ. ಅಷ್ಟೇ ಅಲ್ಲದೆ, ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸುವವರೆಗೂ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದೂ ಅದು ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೃಣಮೂಲ ರಾಜ್ಯಸಭೆಯ ಸದನ ನಾಯಕ ಡೆರೆಕ್ ಓ’ಬ್ರಿಯಾನ್, ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ಇಚ್ಛೆಯಂತೆ ವರ್ತಿಸುವ ತಾತ್ಕಾಲಿಕ ಘಟಕವಲ್ಲ ಎಂದು ಹೇಳಿದರು. “ಅದು ಸಂವಿಧಾನವನ್ನು ಅನುಸರಿಸಬೇಕು. ಇದು ನಿಜಕ್ಕೂ ಭಾರತೀಯ ಚುನಾವಣಾ ಆಯೋಗದ ಅಸಲೀಯತ್ತೇ? ನಾವು ಇದನ್ನು ಗೌರವದಿಂದಲೇ ಹೇಳುತ್ತಿದ್ದೇವೆ. ಅದು ಬಿಜೆಪಿಯ ಶಾಖಾ ಕಚೇರಿಯಾಗಬಾರದು” ಎಂದು ಅವರು ಟೀಕಿಸಿದರು.

ಬಿಹಾರದ ನಂತರ ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಈ ಪರಿಷ್ಕರಣೆ ನಡೆಯಲಿದೆ. ಈಗಲೇ ಈ ಪ್ರಕ್ರಿಯೆಯನ್ನು ಏಕೆ ನಡೆಸಲಾಗುತ್ತಿದೆ. ಇದು ಈಗ ಏಕೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ನಮ್ಮ ಬಳಿ ಪುರಾವೆಗಳಿವೆ. ಬಿಜೆಪಿಯ ಇತ್ತೀಚಿನ ಆಂತರಿಕ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಬಿಜೆಪಿಯು ಕೇವಲ 46-49 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದೆ. ಇದನ್ನು ಬದಲಾಯಿಸುವ ಅಥವಾ ಬದಲಾಯಿಸಲು ಪ್ರಯತ್ನಿಸುವ ಹತಾಶೆಯಲ್ಲಿ ಅವರು ಇದನ್ನು ಮಾಡುತ್ತಿದ್ದಾರೆ ಎಂದು ಓ’ಬ್ರಿಯಾನ್  ಆರೋಪಿಸಿದರು.

ಈ SIR (ವಿಶೇಷ ತೀವ್ರ ಪರಿಷ್ಕರಣೆ) NRC (ರಾಷ್ಟ್ರೀಯ ನಾಗರಿಕರ ನೋಂದಣಿ) ಗೆ ಹಿಂಬಾಗಿಲಿನ ಪ್ರವೇಶವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು ಸರಿಯಾಗಿದೆ. ಇದು ದುಷ್ಟ ನಡೆ. 1935ರಲ್ಲಿ ನಾಜಿಗಳ ಆಡಳಿತದಲ್ಲಿ ಜನರು ಪೂರ್ವಜರ ಪಾಸ್‌ಗಳನ್ನು, ಅಂದರೆ ಗುರುತಿನ ಪುರಾವೆಗಳನ್ನು ಒದಗಿಸಬೇಕಾಗಿತ್ತು. ಇದು ನಾಜಿ ಪೂರ್ವಜರ ಪಾಸ್‌ನ ಹೊಸ ಆವೃತ್ತಿಯೇ? ನಾವು ಇಲ್ಲಿಂದ ಎಲ್ಲಿಗೆ ಹೋಗಬೇಕು?” ಎಂದು ಓ’ಬ್ರಿಯಾನ್ ಪ್ರಶ್ನಿಸಿದರು.

‘ಪೂರ್ವಜರ ಪಾಸ್‌ಪೋರ್ಟ್’ (Ahnenpass) ನಾಜಿ ಜರ್ಮನಿಯ ಆರ್ಯನ್ ಪ್ರಮಾಣಪತ್ರದ ಒಂದು ರೂಪವಾಗಿತ್ತು. ಇದು ಜರ್ಮನ್ ಜನರ ಆರ್ಯನ್ ವಂಶಾವಳಿಯನ್ನು ದಾಖಲಿಸಲು ಬಳಸಲಾಗುತ್ತಿತ್ತು.

ಬಿಜೆಪಿ ಕೇಂದ್ರ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುವ ‘ಹವ್ಯಾಸವನ್ನು’ ಹೊಂದಿದೆ. ಚುನಾವಣಾ ಆಯೋಗದ ಮೂಲಕವೂ ಬಿಜೆಪಿ ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ. ಜೂನ್ 26ರಂದು, ಚುನಾವಣಾ ಆಯೋಗವು ಬಿಹಾರ ವಿಧಾನಸಭಾ ಚುನಾವಣೆಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವುದಾಗಿ ಘೋಷಿಸಿತು, ಆದರೆ ನಿಜವಾದ ಗುರಿ ಬಂಗಾಳವಾಗಿದೆ ಎಂದು ತೃಣಮೂಲ ರಾಜ್ಯಸಭೆಯ ಉಪ ನಾಯಕಿ ಸಾಗರಿಕಾ ಘೋಷ್ ತಿಳಿಸಿದರು.

ನಾವೆಲ್ಲರೂ ನಮ್ಮ ಪೋಷಕರ ಜನನ ಪ್ರಮಾಣಪತ್ರಗಳನ್ನು ಇಟ್ಟುಕೊಂಡಿದ್ದೇವೆಯೇ? ಬಡವರು ಮತ್ತು ವಲಸೆ ಕಾರ್ಮಿಕರಿಗೆ ಪೋಷಕರ ಜನನ ಪ್ರಮಾಣಪತ್ರಗಳು ಹೇಗೆ ಸಿಗುತ್ತವೆ? ಈ ಮತದಾರರ ಪಟ್ಟಿ ಪರಿಷ್ಕರಣೆ ಒಂದು ದೊಡ್ಡ ಪಿತೂರಿ. ಇದು ಬಿಜೆಪಿಯ ತಂತ್ರ. ಈ ಮೂಲಕ ಅದು ತಮ್ಮ ಅಜೆಂಡಾ ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ನಾಗರಿಕರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ಇದನ್ನು ಈಗ ಏಕೆ ತರಲಾಗಿದೆ? ಎಂದು ಸಾಗರಿಕಾ ಪ್ರಶ್ನಿಸಿದರು.

ಬಿಜೆಪಿಗೆ ಬಂಗಾಳ ಚುನಾವಣೆಗಳನ್ನು ಕುಶಲತೆಯಿಂದ ನಿರ್ವಹಿಸುವುದು ಮತ್ತು ನಂತರ ಈ ಮಾದರಿಯನ್ನು ಭಾರತದಾದ್ಯಂತ ಪುನರಾವರ್ತಿಸುವುದು ಈ ಹೊಸ ಮತದಾರರ ಪಟ್ಟಿ ಪರಿಷ್ಕರಣೆಯ ಉದ್ದೇಶವಾಗಿದೆ. ಮತದಾರರನ್ನು ತೆಗೆದುಹಾಕಲು ಮತ್ತು ಅವರ ಪೌರತ್ವವನ್ನು ಕಸಿದುಕೊಳ್ಳಲು ಬಳಸಲಾಗುವ ಈ ಅಪಾಯಕಾರಿ ಮತ್ತು ದುಷ್ಟ ಕಾರ್ಯಕ್ರಮವನ್ನು ಚುನಾವಣಾ ಆಯೋಗವು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಮತ್ತು ರದ್ದುಪಡಿಸಬೇಕು ಎಂದು ಹಿರಿಯ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಒತ್ತಾಯಿಸಿದರು.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...