Homeಮುಖಪುಟರಾಜ್ಯಕ್ಕೆ ವಿಶೇಷ ಅನುದಾನ ನೀಡಿ: ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಒತ್ತಾಯ

ರಾಜ್ಯಕ್ಕೆ ವಿಶೇಷ ಅನುದಾನ ನೀಡಿ: ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಒತ್ತಾಯ

ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವ 14 ನೇ ಹಣಕಾಸು ಆಯೋಗದ ಶಿಫಾರಸನ್ನು ಅಂಗೀಕರಿಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವ 14 ನೇ ಹಣಕಾಸು ಆಯೋಗದ ಶಿಫಾರಸನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ರಾಜ್ಯದ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ನೀಡಿದ್ದರೂ, ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಹಲವಾರು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರಾಜ್ಯ ಸರ್ಕಾರ ಕೇಳಿದ್ದ 2,100 ಕೋಟಿ ರೂ.ಗಳ ಬದಲಾಗಿ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕಾರ್ಯಕ್ಷಮತೆ ಅನುದಾನವಾಗಿ ಕೇವಲ 869.40 ಕೋಟಿ ರೂ. ಅನುದಾನ ದೊರೆತಿದೆ. ಬಾಕಿ ಮೊತ್ತ 1,230 ಕೋಟಿ ರೂ. ಬಿಡುಗಡೆ ಮಾಡಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MNGREGA) ಯೋಜನೆಗೆ ಸಂಬಂಧಿಸಿದಂತೆ, ಸುಮಾರು 665.09 ಕೋಟಿ ರೂ.ಗಳ ಬಾಕಿ ಉಳಿದಿದ್ದು, ಜೊತೆಗೆ 54.65 ಕೋಟಿ ರೂ.ಗಳ ಕೌಶಲ್ಯರಹಿತ ವೇತನ ಬಾಕಿಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಕೋರಿದ್ದಾರೆ. ಇದರೊಂದಿಗೆ ಕೊರೊನಾ ವೈರಸ್‌ನಿಂದ ಉದ್ಯೋಗದ ಅಭಾವ ಹೆಚ್ಚಾಗಿದ್ದು, ಉದ್ಯೋಗ ಖಾತರಿ ದಿವಸಗಳಲ್ಲಿ ಇನ್ನು 50 ದಿನಗಳನ್ನು ಹೆಚ್ಚುವರಿಯಾಗಿ ಸೇರಿಸಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ಶಿವಮೊಗ್ಗದಲ್ಲಿ ಹೊಸ ಡಿಆರ್‌ಡಿಒ ಸೌಲಭ್ಯ

ಸಿಎಂ ಯಡಿಯೂರಪ್ಪ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನಿನ್ನೆಯೇ ಭೇಟಿಯಾಗಿ, ತಮ್ಮ ತವರು ಜಿಲ್ಲೆ ಶಿವಮೊಗ್ಗದಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ(DRDO) ಸ್ವತಂತ್ರ ಪ್ರಯೋಗಾಲಯವನ್ನು ನಿರ್ಮಿಸುವಂತೆ ಕೋರಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಡಿಆರ್‌ಡಿಒ ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ರಕ್ಷಣಾ ಸಚಿವಾಲಯ ಪರಿಗಣಿಸಿದೆ. ಆದರೆ ರಾಜ್ಯವು ಶಿವಮೊಗ್ಗದಲ್ಲಿ ಪೂರ್ಣ ಪ್ರಮಾಣದ ಸ್ವತಂತ್ರ ಡಿಆರ್‌ಡಿಒ ಪ್ರಯೋಗಾಲಯ, ಅಪಾರ ಸಂಖ್ಯೆಯ ವಿಜ್ಞಾನಿಗಳು ಮತ್ತು ತಂತ್ರಜ್ಞರನ್ನು ನಿರೀಕ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

ಜೊತೆಗೆ  ಪ್ರಯೋಗಾಲಯ ನಿರ್ಮಾಣಕ್ಕೆ ಅಗತ್ಯವಾದ ಭೂಮಿ ಹಾಗೂ ಸಿಬ್ಬಂದಿಗೆ ಅಧಿಕೃತ ಕ್ವಾರ್ಟರ್ಸ್ ಅನ್ನು ರಾಜ್ಯ ಸರ್ಕಾರವು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರ ಮಗ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ.


ಇದನ್ನೂ ಓದಿ: ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...