Homeಮುಖಪುಟವಿಶೇಷ ಪ್ಯಾಕೇಜ್‌ ನೀಡಿ - ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

ವಿಶೇಷ ಪ್ಯಾಕೇಜ್‌ ನೀಡಿ – ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

- Advertisement -
- Advertisement -

ಭೀಕರ ಪ್ರವಾಹ ಪೀಡಿತ ವಯನಾಡ್ ಪುನರ್ವಸತಿಗೆ ₹2,000 ಕೋಟಿ ಮತ್ತು ವಿಶೇಷ ಪ್ಯಾಕೇಜ್‌ಗೆ ₹24,000 ಕೋಟಿ ನೆರವು ನೀಡಬೇಕು ಎಂದು ಕೇರಳ ಸರ್ಕಾರವು ಕೇಂದ್ರ ಸರ್ಕಾರದ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಬೇಡಿಕೆಯಿಟ್ಟಿದೆ. ಸಾಮಾನ್ಯ ಸಾಲದ ಮಿತಿಯನ್ನು ಮೊಟಕುಗೊಳಿಸಿರುವುದು ರಾಜ್ಯದ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ ಎಂದು ರಾಜ್ಯವು ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. ವಿಶೇಷ ಪ್ಯಾಕೇಜ್‌ ನೀಡಿ

ಜಿಎಸ್‌ಟಿ ಪರಿಹಾರ ನಿಲುಗಡೆ, ಕೇಂದ್ರ ವರ್ಗಾವಣೆಯಲ್ಲಿ ಕಡಿತ ಮತ್ತು ಆದಾಯ ಕೊರತೆ ಅನುದಾನದ ನಿಲುಗಡೆಯಿಂದಾಗಿ ರಾಜ್ಯವು ಆರ್ಥಿಕವಾಗಿ ಒತ್ತಡದಲ್ಲಿದೆ ಎಂದು ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ನೇ ಹಣಕಾಸು ಆಯೋಗದ ಅವಧಿಯಲ್ಲಿ 3.875 ಪೈಸೆಯಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ 1.925 ಪೈಸೆ ಯವರೆಗೆ ಕೇರಳದ ಪಾಲು ನಿರಂತರವಾಗಿ ಕುಸಿತ ಕಂಡಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯ ಸರ್ಕಾರವು ತನ್ನದೇ ಆದ ತೆರಿಗೆ ಆದಾಯದಲ್ಲಿ ಶ್ಲಾಘನೀಯ ಹೆಚ್ಚಳ ಮಾಡಿದರೂ ಬಿಕ್ಕಟ್ಟನ್ನು ಎದುರಿಸುತ್ತಿದೆ. ಒಟ್ಟು ಆದಾಯ ವೆಚ್ಚದಲ್ಲಿ ರಾಷ್ಟ್ರೀಯ ಸರಾಸರಿ 53.9 ಲೈಸೆಗೆ ಹೋಲಿಸಿದರೆ, ಕೇರಳದ ಸ್ವಂತ ಆದಾಯದ ಪಾಲು 63.58 ಪೈಸಯಷ್ಟಿದೆ ಎಂದು ಅವರು ಹೇಳಿದ್ದಾರೆ.

ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರ ಪುನರ್ವಸತಿಗಾಗಿ ₹2,000 ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನೈಸರ್ಗಿಕ ವಿಕೋಪಗಳು ಮತ್ತು ಸಂಭಾವ್ಯ ಅಪಾಯಗಳ ಕಾರಣದಿಂದಾಗಿ ಪೀಡಿತ ಪ್ರದೇಶವು ಇನ್ನು ಮುಂದೆ ವಾಸಯೋಗ್ಯವಾಗಿಲ್ಲ, ಆದ್ದರಿಂದ ನಿರಾಶ್ರಿತರನ್ನು ಹೊಸ ಟೌನ್‌ಶಿಪ್‌ಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ವಿಶೇಷ ಪ್ಯಾಕೇಜ್‌ ನೀಡಿ

ಇಷ್ಟೆ ಅಲ್ಲದೆ, ಸಚಿವ ಬಾಲಗೋಪಾಲ್ ಅವರು ವಿಜಿಂಜಂ ಇಂಟರ್‌ನ್ಯಾಷನಲ್ ಸೀಪೋರ್ಟ್ ಲಿಮಿಟೆಡ್‌ಗೆ 5000 ಕೋಟಿ ರೂಪಾಯಿಗಳ ವಿಶೇಷ ನೆರವಿನ ರಾಜ್ಯದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. 2022-23 ರಿಂದ ಮುಕ್ತ ಮಾರುಕಟ್ಟೆಯ ಸಾಲದ ಮೇಲಿನ ಸೀಲಿಂಗ್ ಅನ್ನು ನಿಗದಿಪಡಿಸಲು ಕೇಂದ್ರ ಸರ್ಕಾರದ ಹೊಸ ವಿಧಾನದ ಬಗ್ಗೆ ಮರುಚಿಂತನೆ ಮಾಡಬೇಕೆಂದು ಸಚಿವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...