Homeಮುಖಪುಟಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

- Advertisement -
- Advertisement -

ಇಂದಿನಿಂದ ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.

ಸಂಸತ್ತಿನ 75 ವರ್ಷಗಳ ಕುರಿತು ಸೋಮವಾರದ ಚರ್ಚೆಯನ್ನು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಅವರು ಆರಂಭಿಸುವ ಸಾಧ್ಯತೆಯಿದೆ.

“ಭಾರತದ ಸಂಸತ್ತಿನ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ” ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ, ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ಸಭೆಯು ನಡೆಯಲಿದೆ. ಅದರ ನಂತರ ಫೋಟೋ ಸೆಷನ್ ನಡೆಯಲಿದೆ.

ಅಧಿವೇಶನದಲ್ಲಿ ಎಂಟು ಮಸೂದೆಗಳನ್ನು ಮಂಡಿಸಲು ಕೇಂದ್ರವು ಯೋಜಿಸಿದೆ ಆದರೆ ಐದು ದಿನಗಳ ಅಧಿವೇಶನಕ್ಕಾಗಿ ಅಜೆಂಡಾದಲ್ಲಿ ಉಲ್ಲೇಖಿಸದ ವಿಷಯಗಳನ್ನು ಕೇಂದ್ರವು ಕೈಗೆತ್ತಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಪಯಣದ ಕುರಿತು ಚರ್ಚೆ ನಡೆಯಲಿದೆ.

ಶಾಸಕಾಂಗ ವ್ಯವಹಾರದಲ್ಲಿ ಉಲ್ಲೇಖಿಸಲಾದ ಮಸೂದೆಗಳಲ್ಲಿ ಒಂದು ಚುನಾವಣಾ ಆಯುಕ್ತರ ನೇಮಕಾತಿಗಾಗಿ ಆಯ್ಕೆ ಸಮಿತಿಯನ್ನು ರಚಿಸುವ ಗುರಿಯನ್ನು ಹೊಂದಿದೆ. ಆದರೆ, ಈ ಮಸೂದೆಯನ್ನು ಕಾರ್ಯಸೂಚಿಯಿಂದ ತೆಗೆದುಹಾಕಲಾಗಿದೆ ಎಂದು ಸೋಮವಾರ ಸುದ್ದಿ ವರದಿಗಳು ತಿಳಿಸಿವೆ.

ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಮೂರು ಮಸೂದೆಯನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಎಲ್ಲ ಸದಸ್ಯರಿಗೆ ತಿಳಿಸಲಾಯಿತು.

ಬಿಜು ಜನತಾ ದಳ ಮತ್ತು ಭಾರತ್ ರಾಷ್ಟ್ರ ಸಮಿತಿ ಸೇರಿದಂತೆ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಮಸೂದೆಯನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಭಾನುವಾರ ನಡೆದ ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ. ಆದರೆ, ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರದ ಕಾರ್ಯಕ್ರಮದ ನಂತರ, ಸದನವನ್ನು ಹೊಸ ಸಂಸತ್ ಭವನಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...