Homeಮುಖಪುಟಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

- Advertisement -
- Advertisement -

ಇಂದಿನಿಂದ ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.

ಸಂಸತ್ತಿನ 75 ವರ್ಷಗಳ ಕುರಿತು ಸೋಮವಾರದ ಚರ್ಚೆಯನ್ನು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಅವರು ಆರಂಭಿಸುವ ಸಾಧ್ಯತೆಯಿದೆ.

“ಭಾರತದ ಸಂಸತ್ತಿನ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ” ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ, ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ಸಭೆಯು ನಡೆಯಲಿದೆ. ಅದರ ನಂತರ ಫೋಟೋ ಸೆಷನ್ ನಡೆಯಲಿದೆ.

ಅಧಿವೇಶನದಲ್ಲಿ ಎಂಟು ಮಸೂದೆಗಳನ್ನು ಮಂಡಿಸಲು ಕೇಂದ್ರವು ಯೋಜಿಸಿದೆ ಆದರೆ ಐದು ದಿನಗಳ ಅಧಿವೇಶನಕ್ಕಾಗಿ ಅಜೆಂಡಾದಲ್ಲಿ ಉಲ್ಲೇಖಿಸದ ವಿಷಯಗಳನ್ನು ಕೇಂದ್ರವು ಕೈಗೆತ್ತಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಪಯಣದ ಕುರಿತು ಚರ್ಚೆ ನಡೆಯಲಿದೆ.

ಶಾಸಕಾಂಗ ವ್ಯವಹಾರದಲ್ಲಿ ಉಲ್ಲೇಖಿಸಲಾದ ಮಸೂದೆಗಳಲ್ಲಿ ಒಂದು ಚುನಾವಣಾ ಆಯುಕ್ತರ ನೇಮಕಾತಿಗಾಗಿ ಆಯ್ಕೆ ಸಮಿತಿಯನ್ನು ರಚಿಸುವ ಗುರಿಯನ್ನು ಹೊಂದಿದೆ. ಆದರೆ, ಈ ಮಸೂದೆಯನ್ನು ಕಾರ್ಯಸೂಚಿಯಿಂದ ತೆಗೆದುಹಾಕಲಾಗಿದೆ ಎಂದು ಸೋಮವಾರ ಸುದ್ದಿ ವರದಿಗಳು ತಿಳಿಸಿವೆ.

ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಮೂರು ಮಸೂದೆಯನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಎಲ್ಲ ಸದಸ್ಯರಿಗೆ ತಿಳಿಸಲಾಯಿತು.

ಬಿಜು ಜನತಾ ದಳ ಮತ್ತು ಭಾರತ್ ರಾಷ್ಟ್ರ ಸಮಿತಿ ಸೇರಿದಂತೆ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಮಸೂದೆಯನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಭಾನುವಾರ ನಡೆದ ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ. ಆದರೆ, ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರದ ಕಾರ್ಯಕ್ರಮದ ನಂತರ, ಸದನವನ್ನು ಹೊಸ ಸಂಸತ್ ಭವನಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....